Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀಗಂಧ ಮರಗಳ ಕಳ್ಳರ ಬಂಧನ, 7.78 ಲಕ್ಷ ಮೌಲ್ಯದ 311 ಕೆಜಿ ಶ್ರೀಗಂಧ ವಶ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ರೈತರ ಜಮೀನುಗಳಲ್ಲಿ ಇತ್ತೀಚೆಗೆ ಶ್ರೀಗಂಧ ಮರಗಳನ್ನು ಕಳವು ಮಾಡಿದ್ದ ಶ್ರೀಗಂಧ ಮರಗಳ ಕಳ್ಳರನ್ನು ಮತ್ತು ಕದ್ದ ಶ್ರೀಗಂಧ ಮರಗಳನ್ನು ಖರೀದಿ ಮಾಡುತ್ತಿದ್ದ ಆರೋಪಿಗಳನ್ನು ಅಬ್ಬಿನಹೊಳೆ ಪೊಲೀಸರು ಬಂಧಿಸಿ ಬಂಧಿತರಿಂದ ಸುಮಾರು 7.78 ಲಕ್ಷ ಮೌಲ್ಯದ 311 ಕೆಜಿ ಶ್ರೀಗಂಧ ವಶ ಪಡಿಸಿಕೊಂಡಿದ್ದಾರೆ.


ಹಿರಿಯೂರು ತಾಲೂಕಿನ ಇಕ್ಕನೂರು ಕುರುಬರಹಳ್ಳಿಯ ವಿ.ರಾಜು ಎನ್ನುವ ರೈತರ ಜಮೀನಿನಲ್ಲಿದ್ದ 12 ಶ್ರೀಗಂಧದ ಮರಗಳು, ಇದೇ ಜಮೀನಿನ ಪಕ್ಕದ ಚಂದ್ರಶೇಖರ್ ಅವರ ಹೊಲದಲ್ಲಿದ್ದ 3 ಶ್ರೀಗಂಧದ ಮರಗಳು ಹಾಗೂ ತಿಮ್ಮಪ್ಪನ ಜಮೀನಿನಲ್ಲಿದ್ದ 3 ಶ್ರೀಗಂಧದ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಸಿ.ಕೆ ಪುರದ ರವಿ ಮುತ್ಯಾಲ, ಮಧುಗಿರಿ ನಗರದ ಮಂಜುನಾಥ್ ಇವರುಗಳನ್ನು ಶ್ರೀಗಂಧದ ಮರಗಳ ಸಮೇತ ಪೊಲೀಸರು ಬಂಧಿಸಿದ್ದರು.

ಈ ಪ್ರಕರಣದಲ್ಲಿ ಕಳ್ಳತನ ಮಾಡಿದ ಶ್ರೀಗಂಧದ ಮರಗಳನ್ನು ಖರೀದಿ ಮಾಡಿದ್ದ ಶಿರಾ ನಗರದ ಅಬ್ದುಲ್ ರೆಹಮಾನ್, ರುಹುಲ್ಲಾ ಎಂಬಾತರನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಆಂದ್ರ ಪ್ರದೇಶದ ಸತ್ಯಸಾಯಿ ಜಿಲ್ಲೆಯ ರೊಳ್ಳ ಗ್ರಾಮದಲ್ಲಿರುವ ಶ್ರೀಗಂಧದ ಮರಗಳಿಂದ ಎಣ್ಣೆ ತೆಗೆಯುವ ಕಾರ್ಖಾನೆಗೆ ಮಾರಾಟ ಮಾಡಿದ್ದರು. ಅಲ್ಲಿಂದ ಸುಮಾರು 311 ಕೆಜಿ ಶ್ರೀಗಂಧದ ಮರಗಳ ತುಂಡುಗಳನ್ನು ಪೊಲೀಸರು ವಶ ಪಡಿಸಿಕೊಂಡು ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿ ತನಿಖೆ ಮುಂದುವರೆಸಿದ್ದಾರೆ.

ಅಬ್ಬಿನಹೊಳೆ, ಹೊಸದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಶ್ರೀಗಂಧ ಮರಗಳ ಕಳ್ಳತನ ಪ್ರಕರಣದಲ್ಲಿ ಈ ಆರೋಪಿಗಳು ಭಾಗಿಯಾಗಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.



ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ಅವರು ಸಿಪಿಐ ಗುಡ್ಡಪ್ಪ, ಅಬ್ಬಿನಹೊಳೆ ಪಿಎಸ್ಐ ಬಾಹುಬಲಿ ಎಂ.ಪಡನಾಡ, ಮಂಜುನಾಥ್ ಜಿ. ಇವರ ನೇತೃತ್ವದಲ್ಲಿ ಶ್ರೀಗಂಧ ಮರಗಳ ಕಳವು ಪ್ರಕರಣ ಪತ್ತೆ ಹಚ್ಚಲು ತಂಡ ರಚನೆ ಮಾಡಿದ್ದು  ಈ ತಂಡವು ಶ್ರೀಗಂಧ ಮರಗಳ ಕಳ್ಳತನದ ಆರೋಪಿಗಳು, ಕದ್ದ ಮರಗಳ ಖರೀದಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸೇರಿ ಒಟ್ಟು ನಾಲ್ಕು ಮಂದಿ ಆರೋಪಿಗಳನ್ನು ಪತ್ತೆ ಮಾಡಿದ ಪೊಲೀಸ್ ತಂಡವನ್ನು ಎಸ್ಪಿ ಶ್ಲಾಘಿಸಿದ್ದಾರೆ.


Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ