Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಜ್ಯೋತಿ ರಥ ಆಗಮನ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ
  ಕನ್ನಡ  ಜ್ಯೋತಿ  ರಥ‌ಆಗಮಿಸಿತು. 
 ದೇವನಹಳ್ಳಿ ತಾಲ್ಲೂಕಿನಿಂದ ಆಗಮಿಸುವ  ಕನ್ನಡ ಜ್ಯೋತಿ ರಥವನ್ನು ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ದೇವನಹಳ್ಳಿ  ತಾಲ್ಲೂಕಿನ ಗಡಿಭಾಗದಲ್ಲಿ   ಸ್ವಾಗತಿಸುವ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕ  ರವಿಕುಮಾರ್ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ  ಪ್ರೊ.ಬಿ.ಎನ್.ಕೃಷ್ಣಪ್ಪ, ಗೌರವ ಕಾರ್ಯದರ್ಶಿ ಅಶ್ವಥಗೌಡ, ಕೋಶಾಧ್ಯಕ್ಷ ಡಾ.ಮುನಿರಾಜುಕಲಾವಿದರ ಸಂಘದ ಜಿಲ್ಲಾಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ, ದೇವನಹಳ್ಳಿ ಕಸಾಪ ಆರ್.ಕೆ.ನಂಜೇಗೌಡಸಾಹಿತಿ ಶರಣಯ್ಯ ಹಿರೇಮಠ, ಕನ್ನಡಪರ ಸಂಘಟನೆಯ ಚಂದ್ರಶೇಖರ್, ಟಿ.ಜಿ.ಮಂಜುನಾಥ್, ರಾಜಘಟ್ಟ ಮಹೇಶ್ ಮುಂತಾದವರು ಹಾಜರಿದ್ದರು.

ಆದ್ದೂರಿ ಮೆರವಣಿಗೆ:
 ದೊಡ್ಡಬಳ್ಳಾಪುರ ತಾಲ್ಲೂಕಿಗೆ ಆಗಮಿಸಿದ  ಕನ್ನಡ ಜ್ಯೋತಿ ರಥಕ್ಕೆ   ದೊಡ್ಡಬಳ್ಳಾಪುರ  ‌ಜವಾಹರ ನವೋದಯ ವಿದ್ಯಾಲಯದ ವಿದ್ಯಾರ್ಥಿಗಳು ಪುಪ್ಪಾರ್ಚನೆ ಮಾಡಿದರು.ಕನ್ನಡದ 50  ಮಂದಿ ಸಾಧಕರ ಭಾವಚಿತ್ರಗಳನ್ನು  ವಿದ್ಯಾರ್ಥಿಗಳು ಪ್ರದರ್ಶನ ಮಾಡಿದ ದೃಶ್ಯ ಗಮನಸೆಳೆಯಿತು.  ತಹಶೀಲ್ದಾರ್  ವಿದ್ಯಾ ವಿಭಾ ರಾಥೋಡ್ ಜ್ಞಾನಪೀಠ ಪುರಸ್ಕೃತ ಪ್ರತಿಮೆಗಳಿಗೆ ಪುಷ್ಪಾರ್ಚನೆ  ಮಾಡಿದರು.ನವೋದಯ ವಿದ್ಯಾಲಯದ ಉಪಪ್ರಾಂಶುಪಾಲ ಜಯಕೃಷ್ಣನ್, ಕನ್ನಡ ಅಧ್ಯಾಪಕರುಗಳಾದ ಉಪಾಧ್ಯೆ, ಈರಣ್ಣ ಸಬರದನಿವೃತ್ತ ಕನ್ನಡ ಅಧ್ಯಾಪಕ ವಿ.ಎಸ್.ಹೆಗಡೆ ಮತ್ತು ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

 ಪೂರ್ಣಕುಂಭ ಸ್ವಾಗತ :
 ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿಗೆ ಆಗಮಿಸಿದ  ಕನ್ನಡ ರಥವನ್ನು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಮತ್ತು  ಅಂಗನವಾಡಿ ಕಾರ್ಯಕರ್ತೆಯರು ಆದ್ದೂರಿ ಪೂರ್ಣ ಕುಂಭದೊಂದಿಗೆ ಸ್ವಾಗತಿಸಿದರು.ಕಲಾ ತಂಡಗಳೊಂದಿಗೆ  ನಡೆದ ಮೆರವಣಿಗೆಯಲ್ಲಿ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ರವಿಕುಮಾರ್, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನರಸಿಂಹಮೂರ್ತಿ,      ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ  ಆರ್.ನಾರಾಯಣಸ್ವಾಮಿ,   ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಮಾಳಯ್ಯ, ಗ್ರಾಮದ ಮುಖಂಡರುಗಳಾದ ಮುನಿರಾಜುವಿಶ್ವನಾಥ್, ಕೃಷ್ಣಮೂರ್ತಿ,   ಬೈಲಪ್ಪ,ಕನ್ನಡಪರ ಹೋರಾಟಗಾರ ರಾಜಘಟ್ಟರವಿ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ, ಪ್ರತಿನಿಧಿಗಳಾದ ಸಫೀರ್, ಚಂದ್ರಶೇಖರ್, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಕಾರ್ಮಿಕರು  ಮತ್ತು ಶಾಲಾ ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಸಮ್ಮೇಳನದ ಜಾಗೃತಿಗೆ ಕನ್ನಡ ಜ್ಯೋತಿ ರಥ-
ಮಂಡ್ಯದಲ್ಲಿ ನಡೆಯುವ 87ನೇ ಅಖಿಲ‌ಭಾರತ ಕನ್ನಡ ಸಾಹಿತ್ಯ      ಸಮ್ಮೇಳನದ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕನ್ನಡ ಜ್ಯೋತಿ ರಥವು ಸಂಚರಿಸುತ್ತಿದೆ. ಸಮಸ್ತ ಕನ್ನಡಿಗರನ್ನು ಆಹ್ವಾನಿಸುವ ಉದ್ದೇಶದಿಂದ ಈ ರಥ ಸಂಚಾರ ಮಾಡುತ್ತಿದೆ. ಕನ್ನಡ ನಾಡು, ನುಡಿ, ಸಂಸ್ಕೃತಿಯ ಬಗ್ಗೆ ಜಾಗೃತಿ ಮತ್ತು ಅಭಿಮಾನ ಮೂಡಿಸುತ್ತಾ  ಕನ್ನಡಿಗರು ಸಮ್ಮೇಳನಕ್ಕೆ ಬರಲು ಈ ರಥ ಯಾತ್ರೆಯು ಪ್ರೇರಣೆಯಾಗಲಿದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ಕನ್ನಡ ಜ್ಯೋತಿ ರಥದ ಆಕರ್ಷಣೆ :
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ನಡೆಯುತ್ತಿರುವ ಕನ್ನಡ ರಥದ ಮುಂಭಾಗದಲಿ  ಭುವನೇಶ್ವರಿ ದೇವಿ ಪ್ರತಿಮೆ ಇದೆ.  ಹಿಂಭಾಗದಲ್ಲಿ  ಕೃಷಿಯ ಸಂಕೇತವಾದ ಎತ್ತುಗಳೊಂದಿಗೆ ಇರುವ ರೈತನನ್ನು ಕಾಣಬಹುದಾಗಿದೆ.   ಕನ್ನಡದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಕುವೆಂಪು, ದ.ರಾ.ಬೇಂದ್ರೆ, ಮಾಸ್ತಿ ವೆಂಕಟೇಶ ಅಯ್ಯಂಗಾರ್ಕೆ.ಶಿವರಾಮಕಾರಂತ, ವಿ.ಕೃ.ಗೋಕಾಕ್ಯು.ಆರ್.ಅನಂತಮೂರ್ತಿಗಿರೀಶ್ ಕಾರ್ನಾಡ್, ಚಂದ್ರಶೇಖರ ಕಂಬಾರ,    ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ಸರ್‌ಎಂ. ವಿಶ್ವೇಶ್ವರಯ್ಯ ಅವರುಗಳ ಭಾವಚಿತ್ರಗಳಿವೆ.  ಸಾಹಿತ್ಯ ಸಮ್ಮೇಳನ ನಡೆಯುವ  ಮಂಡ್ಯ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳ ಚಿತ್ರಗಳು ಆಕರ್ಷಣೆಯ ಆಗಿವೆ.

ನ.26 ರಂದು ದೊಡ್ಡಬಳ್ಳಾಪುರ ನಗರದಲ್ಲಿ ಮೆರವಣಿಗೆ-
ದೊಡ್ಡಬಳ್ಳಾಪುರ ನಗರದಲ್ಲಿ ಮಂಗಳವಾರ ಮುಂಜಾನೆ 9.30 ಗಂಟೆಯಿಂದ ಕನ್ನಡ  ಜ್ಯೋತಿ  ರಥ‌ದ ಮೆರವಣಿಗೆ ನಡೆಯಲಿದೆ. ಬಸವಭವನ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಕನ್ನಡ ಜಾಗೃತ ಭವನ,    ತಾಲ್ಲೂಕು ಕಛೇರಿ ವೃತ್ತ, ಮಗುವಾಳಪ್ಪ ವೃತ್ತ, ಇಸ್ಲಾಂಪುರ ರಸ್ತೆಕೊಂಗಾಡಿಯಪ್ಪ ಕಾಲೇಜು‌ರಸ್ತೆಬಯಲುಬಸವಣ್ಣ ದೇವಸ್ಥಾನ, ಕನಕದಾಸ ವೃತ್ತದ ಮೂಲಕ‌‌ಅರಳುಮಲ್ಲಿಗೆ, ಕಾಡನೂರು ಕೈಮರ, ಚೆನ್ನಾದೇವಿ ಅಗ್ರಹಾರಕನಸವಾಡಿ  ಗ್ರಾಮಗಳಲ್ಲಿ ಸಂಚರಿಸಿದ ನಂತರ    ನೆಲಮಂಗಲ ತಾಲ್ಲೂಕಿಗೆ ಕನ್ನಡ ರಥವನ್ನು ಬೀಳ್ಕೊಡಲಾಗುತ್ತದೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಎ.ಜಯರಾಮ ತಿಳಿಸಿದರು.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ