Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ: ಪಕ್ಷದ ಸಂಘಟನೆಗೆ ಅಶೋಕ್ ಕರೆ

ಚಂದ್ರವಳ್ಳಿ ನ್ಯೂಸ್, ​ಬೀದರ್:
ಜಿಲ್ಲೆಯ ಔರಾದ್ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಆರ್. ಅಶೋಕ್ ಅವರು ಭಾಗವಹಿಸಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.


​ಪಕ್ಷದ ಸಿದ್ಧಾಂತಗಳನ್ನು ತಳಮಟ್ಟದ ಕಾರ್ಯಕರ್ತರಿಗೆ ತಲುಪಿಸುವ ಹಾಗೂ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಈ ಪ್ರಶಿಕ್ಷಣ ವರ್ಗವನ್ನು ಆಯೋಜಿಸಲಾಗಿತ್ತು.
​​ಈ ಸಂದರ್ಭದಲ್ಲಿ ರಾಜ್ಯದ ಪ್ರಮುಖ ನಾಯಕರು ಹಾಗೂ ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಿದ್ದರು.


​ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ಶಾಸಕರಾದ ಪ್ರಭು ಚೌಹಾಣ್, ಶರಣು ಸಲ್ಗರ್, ಮುಖಂಡರಾದ ಸಿದ್ದು ಪಾಟೀಲ್, ಕಲ್ಬುರ್ಗಿ ವಿಭಾಗದ ಸಹಪ್ರಭಾರಿ ಶರಣಪ್ಪ ತಡವಾರ್, ಪ್ರಶಿಕ್ಷಣ ರಾಜ್ಯ ಸಂಚಾಲಕ ರಾಜಶೇಖರ್ ನಾಗಮೂರ್ತಿ, ​ ಕಿರಣ್ ಪಾಟೀಲ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧವ್ ಹಾಸೂರೆ,​ಶ್ರೀ ಮಂಡಲ ಅಧ್ಯಕ್ಷ ರಾಮ್ ಶೆಟ್ಟಿ ಪನ್ನಾಳೆ ಸೇರಿದಂತೆ ಮತ್ತಿತರರ ಮುಖಂಡರು ಪಾಲ್ಗೊಂಡಿದ್ದರು.

​"ಪಕ್ಷದ ಸಿದ್ಧಾಂತ ಮತ್ತು ಪಂಡಿತ್ ದೀನದಯಾಳ್ ಉಪಾಧ್ಯಾಯರ ಅಂತ್ಯೋದಯದ ಪರಿಕಲ್ಪನೆಯನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಇಂತಹ ಪ್ರಶಿಕ್ಷಣ ವರ್ಗಗಳು ದಿಕ್ಸೂಚಿಯಾಗಲಿವೆ," ಎಂದು ಈ ವೇಳೆ ನಾಯಕರು ಅಭಿಪ್ರಾಯಪಟ್ಟರು.

​ಸಭೆಯಲ್ಲಿ ಕ್ಷೇತ್ರದ ನೂರಾರು ಕಾರ್ಯಕರ್ತರು ಪಾಲ್ಗೊಂಡು ತರಬೇತಿ ಪಡೆದರು. ಕಾರ್ಯಕ್ರಮವು ಪಕ್ಷದ ಶಿಸ್ತು ಮತ್ತು ಭವಿಷ್ಯದ ಕಾರ್ಯತಂತ್ರಗಳ ಕುರಿತು ಮಹತ್ವದ ಚರ್ಚೆಗಳಿಗೆ ಸಾಕ್ಷಿಯಾಯಿತು.

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಪಿಎಸ್‌ಸಿ ಅಕ್ರಮ, ರೆಸಾರ್ಟ್ ಪರೀಕ್ಷೆ ಹಗರಣ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಸಾರ್ವಜನಿಕರ ಅಹವಾಲುಗಳ ನಿರಂತರ ಪರಿಶೀಲನೆ, ಅಧಿಕಾರಿಗಳ ಹೊಣೆಗಾರಿಕೆಯಾಗಿದೆ- ಡಾ.ಶಾಲಿನಿ ರಜನೀಶ್ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆ: ಮರು ಪರಿಶೀಲನೆ ಅವಧಿ ಸೆಪ್ಟೆಂಬರ್ 30ರ ವರೆಗೆ ವಿಸ್ತರಣೆ!ಚುನಾವಣಾ ವ್ಯವಸ್ಥೆ ಹದಗೆಟ್ಟಿದೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಸಿದ್ದರಾಮಯ್ಯ ಬಾಂಬ್!ಪ್ರಧಾನಿ ವಿರುದ್ಧ ಕಿಡಿಕಾರಿದ್ದ ರುಚಿಕಾ ಸಿಂಗ್‌ಗೆ ಕಾಂಗ್ರೆಸ್ ಬೆಂಬಲ: ಭವ್ಯಾ ನರಸಿಂಹಮೂರ್ತಿಯಿಂದ "ಧೀರ ಬಾಲಕಿ" ಶ್ಲಾಘನೆ!ವಿವಾಹೇತರ ಸಂಬಂಧಕ್ಕೆ ಅಡ್ಡ ಬಂದ ಪತಿಯ ಭೀಕರ ಹತ್ಯೆ; 2 ಲಕ್ಷ ಸುಪಾರಿ ಕೊಟ್ಟಿದ್ದ ಪತ್ನಿ, ಪ್ರಿಯಕರ ಜೈಲಿಗೆ!13 ಕನ್ನಡಿಗರ ನಾಪತ್ತೆ: ಪತ್ತೆಗೆ ಕ್ರಮ, ಕೆಪಿಎಸ್‌ಸಿ ಹಗರಣದ ತನಿಖೆಯಲ್ಲಿ ಮಧ್ಯಪ್ರವೇಶಿಸಲ್ಲ – ಸಿಎಂ ಡಿಕೆಶಿ775 'ಅರಣ್ಯ ವೀಕ್ಷಕ' ಹುದ್ದೆಗಳ ಭರ್ತಿಗೆ ಪರಿಷ್ಕೃತ ಅಧಿಸೂಚನೆ: ಲಿಖಿತ ಪರೀಕ್ಷೆಯಿಲ್ಲದೆ ಭರ್ತಿ!ರೈಲ್ವೆ ಹಳಿ ದಾಟುವಾಗ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ದುರಂತ ಸಾವು!ಪತಿಗೆ ಕ್ರೌರ್ಯ, ಪ್ರತ್ಯೇಕ ವಾಸ: ಕೆಳ ಕೋರ್ಟ್ ಆದೇಶ ರದ್ದುಗೊಳಿಸಿ ವಿಚ್ಛೇದನ ಮಂಜೂರು ಮಾಡಿದ ಹೈಕೋರ್ಟ್!