Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ತನಿಖೆಗೆ ಅನರ್ಹರ ಆಯೋಗ ರಚನೆ-ಅಶೋಕ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾ ಅಕ್ರಮ ತನಿಖೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ರಚಿಸಿರುವ ಆಯೋಗದ ಅಧ್ಯಕ್ಷರಾಗಿರುವ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಮೂರು ವರ್ಷಗಳ ಕಾಲ ಯಾವುದೇ ಶಾಸನಬದ್ಧ ಸಮಿತಿ
, ಸ್ವಾಯತ್ತ ಸಮಿತಿ, ನಿಯಂತ್ರಕ ಸಮಿತಿಗೆ ನೇಮಕ ಮಾಡದಂತೆ ನವೆಂಬರ್ 7 ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಮುಡಾ ಅಕ್ರಮ ತನಿಖೆ ಮಾಡಲು ಅನರ್ಹರು ಎಂಬ ವಿಷಯ ಬೆಳಕಿಗೆ ಬಂದಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕದ ಜನತೆಗೆ ಉತ್ತರಿಸಬೇಕಾದ ಪ್ರಶ್ನೆಗಳು ಎಂದು ಪಟ್ಟಿ ಮಾಡಿ ಅಶೋಕ್ ಉತ್ತರ ನೀಡುವಂತೆ ಆಗ್ರಹ ಮಾಡಿದ್ದಾರೆ.

1.) ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು ತನಿಖಾ ಆಯೋಗದಲ್ಲಿ ಮುಂದುವರೆಯಲು ಅನರ್ಹರು ಎಂಬ ವಿಷಯ ಸರ್ಕಾರದ ಗಮನಕ್ಕೆ ಬಂದಿದ್ದು ಯಾವಾಗ?

2.) ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಈ ಕುರಿತಂತೆ ಸರ್ಕಾರಕ್ಕೆ ಪತ್ರ ಬರೆಯುವರೆಗೂ ಈ ವಿಷಯ ಸರ್ಕಾರದ ಗಮನಕ್ಕೆ ಬಂದಿರಲಿಲ್ಲವೆ? ಅಥವಾ ಗಮನಕ್ಕೆ ಬಂದಿದ್ದರೂ ಕಾನೂನು ಬಾಹಿರವಾಗಿ ಮುಂದುವರೆಸಲಾಯಿತೆ?

3.) ಅವರ ಅನರ್ಹತೆ ಬಗ್ಗೆ ನ್ಯಾಯಮೂರ್ತಿಗಳು ಸ್ವತಃ ತಾವೇ ಸರ್ಕಾರದ ಗಮನಕ್ಕೆ ತಂದು, ತನಿಖಾ ಆಯೋಗದಿಂದ ಹಿಂದೆ ಸರಿಯಬೇಕಾಗಿತ್ತು. ಆದರೆ ಅನರ್ಹತೆ ಆದೇಶ ಬಂದ 5 ದಿನಗಳ ನಂತರ, ಅಂದರೆ ನವೆಂಬರ್ 12ರಂದು ಅವರು ಮುಡಾ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ. ಇದು ತಪ್ಪಲ್ಲವೇ?

4.) ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಆಯೋಗಕ್ಕೆ ಸಲ್ಲಿಸಿರುವ ದಾಖಲೆಗಳು ಸುರಕ್ಷಿತವಾಗಿದೆಯೇ?

5.) ಸ್ವತಃ ನಾಡಿನ ಮುಖ್ಯಮಂತ್ರಿಗಳು ಮತ್ತು ಅವರ ಕುಟುಂಬ ಸದಸ್ಯರು ಆರೋಪಿಗಳಾಗಿರುವ, ಸುಮಾರು 4,000 ಕೋಟಿ ರೂಪಾಯಿ ಮೊತ್ತದ ಬೃಹತ್ ಭ್ರಷ್ಟಚಾರ ನಡೆದಿದ ಎನ್ನಲಾದ ಮುಡಾ ಹಗರಣದ ತನಿಖೆಯಲ್ಲಿ ಸರ್ಕಾರ ಎಷ್ಟು ಗಂಭೀರವಾಗಿದೆ ಎನ್ನುವುದಕ್ಕೆ ಈ ಎಡವಟ್ಟು ನಿದರ್ಶನವಲ್ಲವೇ?

ಸರ್ಕಾರ ಈ ಕೊಡಲೇ ತನಿಖಾ ಆಯೋಗಕ್ಕೆ ನೀಡಿರುವ ಎಲ್ಲ ದಾಖಲೆಗಳನ್ನು ಪರಿಶೀಲಿಸಿ ವಶ ಪಡಿಸಿಕೊಳ್ಳಬೇಕು. ತನಿಖಾ ಆಯೋಗದ ಮುಖ್ಯಸ್ಥರಿಗೆ ನವೆಂಬರ್ 7 ರ ನಂತರ ನೀಡಲಾಗಿರುವ ಎಲ್ಲ ಸಂಬಳ, ಸೌಲಭ್ಯಗಳನ್ನು ಹಿಂಪಡೆಯಬೇಕು. ಅನರ್ಹರಾಗಿದ್ದೂ ಸಹ ತನಿಖಾ ಆಯೋಗದಲ್ಲಿ ಮುಂದುವರೆದ ನಿವೃತ್ತ ನ್ಯಾಯಮೂರ್ತಿಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮತ್ತು ಮಾನ್ಯ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನ ಅಶೋಕ್ ಅವರು ಒತ್ತಾಯಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ