Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಅಶ್ವಥಪ್ಪ ಆಯ್ಕೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತುರುವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ
  ಅಧ್ಯಕ್ಷರಾಗಿ ದೊಡ್ಡ ತಿಮ್ಮನಹಳ್ಳಿ ಗ್ರಾಮದ ಎಂ.ಅಶ್ವತಪ್ಪ ಸ್ವಾಮಿ ಉಪಾಧ್ಯಕ್ಷ ಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಆಯ್ಕೆಯಾದ ಅಧ್ಯಕ್ಷರನ್ನು ಗಣ್ಯರು ಅಭಿನಂದಿಸಿದರು.

ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ತುರುವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೂತನವಾಗಿ ಅವಿರೋಧವಾಗಿ ಅಯ್ಕೆಯಾದ ಹಿನ್ನೆಯಲ್ಲಿ ಕೆಪಿಪಿಸಿ ಸದಸ್ಯ ಎಸ್. ಆರ್. ಮುನಿರಾಜು ಹೂವಿನ ಹಾರ ಹಾಗಿ ಮಾತನಾಡಿ, ಹಾಲು ಉತ್ಪಾದಕರು ಹೆಚ್ಚು ಪ್ರಮಾಣದಲ್ಲಿ ಹಾಲು ಸರಬರಾಜು ಮಾಡಬೇಕು,

ರೈತರ ಸಂಘದಿಂದ ಅನೇಕ ಸೌಲಭ್ಯ ಪಡೆದುಕೊಂಡು ಹಸುಗಳನ್ನು ಸಾಕಬೇಕಾಗಿದೆ, ಉತ್ತಮ ತಳಿಯ ರಾಸುಗಳನ್ನು ಸಾಕುವ ಜೊತೆಗೆ ಉತ್ತಮವಾಗಿ ನಿರ್ವಹಣೆ ಮಾಡಬೇಕು, ಮುಂಜಾನೆಯಲ್ಲಿ ಹಾಲು ಕರೆಯುವುದರಿಂದ ಉತ್ತಮ ಆರೋಗ್ಯ ವೃದ್ಧಿಸುತ್ತದೆ. ಸಂಘಕ್ಕೆ ಹೆಚ್ಚು ಹೆಚ್ಚು ಹಾಲು ನೀಡುವುದರಿಂದ ಸಂಘ ಬೆಳೆಯುತ್ತದೆ ಎಂದು ಹೇಳಿದರು. 

 ನೂತನವಾಗಿ ಆಯ್ಕೆಯಾಗಿರುವ ಅಧ್ಯಕ್ಷ ಎಂ.ಅಶ್ವತಪ್ಪ ಸ್ವಾಮಿ ಮಾತನಾಡಿ, ಈ ಸಂಘವನ್ನು ಕಟ್ಟಲು 20 ವರ್ಷಗಳಿಂದ ನಾನು ಮತ್ತು ಸಂಘದ ಎಲ್ಲಾ ಅಧ್ಯಕ್ಷರು ಉಪಾಧ್ಯಕ್ಷರು ಹಾಗು ಊರಿನ ಗ್ರಾಮಸ್ಥರು ಸದಸ್ಯರು ಪ್ರಯತ್ನಪಟ್ಟಿದ್ದು, ನಾನು ಇದೇ ಗ್ರಾಮದಲ್ಲಿ ಓದಿ ಬೆಳೆದಿದ್ದೇನೆ ನನ್ನ ಎಲ್ಲಾ ಪರಿಶ್ರಮವನ್ನು ಸಂಘಕ್ಕೆ ಮೀಸಲಿಟ್ಟು ದುಡಿಯುತ್ತೇನೆ ಹಾಗೂ  ಬಮೂಲ್ ಡೇರಿಯಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ರೈತರಿಗೆ ಸಿಗುವಂತೆ ಮಾಡುತ್ತೇನೆ ಎಂದು ಹೇಳಿದರು

ಈ ಸಂದರ್ಭದಲ್ಲಿ  ಸಂಘದ ಮಾಜಿ  ಅಧ್ಯಕ್ಷ ಕಾಂತರಾಜ್, ಎಸ್.ಎಸ್.ಘಾಟಿ ಸದಸ್ಯ ವಾಸುದೇವ್, ನಿರ್ದೇಶಕರಾದ ರಾಜಣ್ಣ, ಲಕ್ಷ್ಮಮ್ಮ, ನಾರಾಯಣಮ್ಮ, ಮಲ್ಲಯ್ಯ, ಕೃಷ್ಣಪ್ಪ ಹಾಗೂ ಮುಖಂಡರುಗಳು ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ