Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಜ್ಯೋತಿಷಿಗೆ 200 ವರ್ಷ ಕಠಿಣ ಶಿಕ್ಷೆ

Advertisement
ಚಂದ್ರವಳ್ಳಿ ನ್ಯೂಸ್, ಶಿವಗಂಗಾ (ತಮಿಳುನಾಡು):
ಅಪ್ರಾಪ್ತ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಜ್ಯೋತಿಷಿಗೆ ಜಿಲ್ಲಾ ಪೋಕ್ಸೋ ತ್ವರಿತ ನ್ಯಾಯಾಲಯವು 200 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ತಮಿಳುನಾಡಿನ ಶಿವಗಂಗಾ ಜಿಲ್ಲೆಯ ಮನಗಿರಿ ಪ್ರದೇಶದ ರಾಮಕೃಷ್ಣನ್ (
52) ಶಿಕ್ಷೆಗೆ ಒಳಗಾದ ಜ್ಯೋತಿಷಿ. ಅಪರಾಧಿ ಜ್ಯೋತಿಷ್ಯ ಹೇಳುವುದು ಮತ್ತು ದೋಷ ನಿವಾರಣೆಗೆ ಪರಿಕಾರ ಪೂಜೆ ನಡೆಸುವುದನ್ನು ರಾಮಕೃಷ್ಣನ್ ವೃತ್ತಿಯಾಗಿ ಮಾಡಿಕೊಂಡಿದ್ದ.

ಮಹಿಳೆಯೊಬ್ಬರು ತನ್ನ 18 ಮತ್ತು 14 ವರ್ಷ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳು ಓದಿನಲ್ಲಿ ಹಿಂದಿದ್ದು ಇದಕ್ಕೆ ಪರಿಹಾರ ಸೂಚಿಸುವಂತೆ 2021ರ ನವೆಂಬರ್ ನಲ್ಲಿ ಈ ಜ್ಯೋತಿಷಿಯ ಸಂಪರ್ಕ ಮಾಡಿದ್ದಳು. ಕೆಲವು ಆಚರಣೆಗಳಿದ್ದು, ಪರಿಹಾರಕ್ಕಾಗಿ ಇಬ್ಬರು ಹೆಣ್ಣುಮಕ್ಕಳನ್ನು ತನ್ನ ಮನೆಗೆ ಕರೆತರುವಂತೆ ಜ್ಯೋತಿಷಿ ಸೂಚಿಸಿದ್ದನು. ಇದನ್ನು ನಂಬಿದ ಮಹಿಳೆ, ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಆತನ ಮನೆಗೆ ಕರೆದೊಯ್ದಿದ್ದಳು.

ಅಲ್ಲಿ, ಮಹಿಳೆಯನ್ನು ಪ್ರತ್ಯೇಕ ಕೋಣೆಯಲ್ಲಿ ಇರಲು ಹೇಳಿದ್ದ ಜ್ಯೋತಿಷಿ, ಇಬ್ಬರು ಬಾಲಕಿಯರನ್ನು ಬೇರೆ ಕೋಣೆಗೆ ಕರೆದೊಯ್ದು, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿತ್ತು.


ಇದಲ್ಲದೇ, ಈ ವಿಷಯ ಬಹಿರಂಗಪಡಿಸಿದರೆ ಪೋಷಕರ ಜೀವ ತೆಗೆಯಲಾಗುತ್ತದೆ ಎಂದು ಬೆದರಿಕೆ ಹಾಕಿದ್ದರಿಂದ ಭಯಭೀತರಾದ ಯುವತಿಯರು ಹಲವು ದಿನಗಳ ಕಾಲ ಯಾರಿಗೂ ಹೇಳಿರಲಿಲ್ಲ.
ಸುಮಾರು ಎರಡು ವರ್ಷಗಳ ನಂತರ
ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಕಂಡು ಬಂದಿದ್ದು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ನಡೆಸಲಾದ ವೈದ್ಯಕೀಯ ಪರೀಕ್ಷೆಯಲ್ಲಿ ಅವರಿಗೆ ಲೈಂಗಿಕವಾಗಿ ಹರಡುವ ರೋಗವಿದೆ ಎಂದು ವೈದ್ಯರು ಪತ್ತೆ ಮಾಡಿದ್ದರು.


ಬಳಿಕ ಸೂಕ್ಷ್ಮವಾಗಿ ಕೇಳಿದಾಗ ನಡೆದ ಘಟನೆ ಗೊತ್ತಾಗಿದೆ. ಇದರಿಂದ ಆಘಾತಕ್ಕೊಳಗಾದ ಪೋಷಕರು ಲೈಂಗಿಕ ದೌರ್ಜನ್ಯ ಎಸಗಿದ ಜೋತಿಷಿ ವಿರುದ್ಧ ತಿರುಪತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ನೀಡಿದ್ದರು. ದಾಖಲಾದ ದೂರು ಆಧರಿಸಿ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು.

ಶಿವಗಂಗಾ ಜಿಲ್ಲಾ ಪೋಕ್ಸೋ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯವು ಮಹತ್ವದ ತೀರ್ಪು ಪ್ರಕಟಿಸಿದೆ. ಆರೋಪಿ ತಪ್ಪಿತಸ್ಥರೆಂದು ಸಾಬೀತಾಗಿದ್ದು, ಜ್ಯೋತಿಷಿ ರಾಮಕೃಷ್ಣನ್ ಅವರಿಗೆ 200 ವರ್ಷಗಳ ಜೈಲು ಶಿಕ್ಷೆ ಮತ್ತು 2 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದು ನ್ಯಾಯಾಲಯದ ನ್ಯಾಯಾಧೀಶ ಗೋಕುಲ್ ಮುರುಗನ್ ಅವರು ತೀರ್ಪು ನೀಡಿದ್ದಾರೆ. ಅಲ್ಲದೆ ತಮಿಳುನಾಡು ಸರ್ಕಾರವು ಸಂತ್ರಸ್ತ ಇಬ್ಬರು ಬಾಲಕಿಯರಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದೂ ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ