LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೀಜೋಪಚರಣ ಹಾಗೂ ರಸ ಗೊಬ್ಬರ ಕಲಬೆರಕೆ ಕುರಿತು ಜಾಗೃತಿ ಶಿಬಿರ

Advertisement
Advertisement

 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ಮಧುರೆ ಹೋಬಳಿಯ ಪುಟ್ಟಯ್ಯನ ಅಗ್ರಹಾರದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ಬಿ ಎಸ್ಸಿ,(ಕೃಷಿ)ವಿದ್ಯಾರ್ಥಿಗಳಿಂದ ಗ್ರಾಮೀಣ ಕೃಷಿ ಕಾರ್ಯನುಭವ ಕಾರ್ಯಕ್ರಮದ ಅಂಗವಾಗಿ ರೈತರಿಗೆ ಬೀಜೋಪಚರಣ ಹಾಗೂ ರಸಗೊಬ್ಬರ ದ ಕಲಬೆರಕೆ ಯ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  

 ಕಾರ್ಯಕ್ರಮದ ಮೇಲ್ವಿಚಾರಣೆಯ ಮಹಾಲಕ್ಷೀ ಎನ್ ಹಾಗೂ  ನಿತೀನ್ ಕೆ.ಸಿ. ಮಾತನಾಡಿ ಬೀಜೋಪಚಾರದ ಮಹತ್ವ ರೋಗ ಹಾಗೂ ಕೀಟಗಳಿಂದ ಬೀಜವನ್ನು ರಕ್ಷಿಸುವ ವಿಧಾನಗಳು ಬಿತ್ತನೆ ಮಾಡುವ ವಿಧಾನದ ಪ್ರಾತ್ಯಕ್ಷಿಕೆ ನೀಡಿದರು.

 ಬೀಜೋಪಚಾರದಲ್ಲಿ ಟೈಕೋಡರ್ಮ್, ರೈಜೋಬಿಯಮ್, ಸ್ಯಾಡೋಮೈನಸ್  ಸೂಕ್ಷ್ಮ ಜೀವಿಗಳ ಮಹತ್ವವನ್ನು ತಿಳಿಸಿದ ಅವರು,  ಬೀಜ ಮೊಳಕೆಯೊಡೆಯುವಿಕೆಯ ಮೂಲಕ ಬೀಜದ ಗುಣಮಟ್ಟವನ್ನು ಸರಳ ವಿಧಾನದಲ್ಲಿ ಹೇಗೆ ಪರೀಕ್ಷಿಸಬಹುದು ಎಂಬುದನ್ನು ರೈತರಿಗೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಒಂದು ಕಿರು ನಾಟಕದ ಮೂಲಕ ರಸಗೊಬ್ಬರದ ಕಲ ಬೆರಕೆಯ ಪರೀಕ್ಷೆಯ ಕುರಿತು ಮಾಹಿತಿ ನೀಡಲಾಯಿತು.

ಶುದ್ಧ ಹಾಗೂ ಕಲಬೆರಕೆಯ ಗೊಬ್ಬರವನ್ನು ಗುರುತಿಸುವ ಸರಳ ಪರೀಕ್ಷೆ ಗಳ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಲಾಯಿತು ರೈತರು ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಿ ಬೀಜೋಪಚಾರಗಳ ಹಾಗೂ ರಸಗೊಬ್ಬರಗಳ ಕಲಬೆರಕೆಯ ಪರೀಕ್ಷೆಯ ಬಗ್ಗೆ ಮಾಹಿತಿ ಪಡೆದರು.     

    ಕಾರ್ಯಕ್ರಮದಲ್ಲಿ ವಿಸ್ತರಣಾ ವಿಭಾಗದ ಪ್ರಾಧ್ಯಾಪಕರಾದ ಡಾ.ಸವಿತ ಮೇಲ್ವಿಚಾರಣೆಯ ಮಹಾಲಕ್ಷೀ ಎನ್, ನಿತೀನ್ ಕೆ.ಸಿ. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ನಾಗರಾಜಯ್ಯ  ಎ. ಗ್ರಾಮ ಪಂಚಾಯತ್ ಮಾಜಿ ಸದಸ್ಯರುಗಳಾದ ಗೋಪಾಲ್, ಲಿಂಗಪ್ಪ ,ವಿಶ್ವನಾಥ, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ, ಶಿವಶಂಕರ್ ,ವೆಂಕಟೇಶ್,ಹನುಮಂತರಾಜು, ಮನಿಯಪ್ಪ ಭಾಗವಹಿಸಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲೆಯಲ್ಲಿ ಶೇ.90.17 ಗಣತಿ ನಮೂನೆಗಳ ಡಿಜಿಟಲೀಕರಣ ಪೂರ್ಣ-ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ಭದ್ರಾ ಹರಿವಿಗೆ ಆಗಸ್ಟ್ 17 ಗಡುವುರಾಗಿ,ಸಾವೆ ಹಾಗೂ ತೆಂಗು ರೈತರ ನೆರವಿಗೆ ಸೂಚನೆ-ಸಚಿವ ಟಿ.ರಘುಮೂರ್ತಿಪೊಲೀಸ್ ಭದ್ರತೆಯಲ್ಲಿ ರಾಜಕಾಲುವೆ ಒತ್ತುವರಿ ತೆರವುಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯಮಶೀಲತೆ ಅರಿವು ಕಾರ್ಯಕ್ರಮರಾಷ್ಟ್ರಮಟ್ಟದಲ್ಲಿ ಪ್ರಜ್ವಲಿಸಿದ ಗ್ರಾಮೀಣ ಪ್ರತಿಭೆಗಳು, 11 ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಬೀಜೋಪಚರಣ ಹಾಗೂ ರಸ ಗೊಬ್ಬರ ಕಲಬೆರಕೆ ಕುರಿತು ಜಾಗೃತಿ ಶಿಬಿರಜೋಗ ಜಲಪಾತಕ್ಕೆ ಕೆಎಸ್‍ಆರ್‍ಟಿಸಿ ವಿಶೇಷ ಪ್ಯಾಕೇಜ್ ಬಸ್ ಸೇವೆ: ಆ.9 ರಿಂದ ಪ್ರಾರಂಭಆಗಸ್ಟ್ 8ರಿಂದ ಹೊಸ ವಿದ್ಯುತ್ ಪ್ರಸರಣ ಮಾರ್ಗ ಚಾಲನೆ: ಕೆಪಿಟಿಸಿಎಲ್ ಎಚ್ಚರಿಕೆಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೆ ಮಂಗಳವಾರ ಆಯೋಜನೆ ಉಚಿತ ಗ್ಯಾಸ್ಟ್ರೋ ಶಿಬಿರ