Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಆಗಿ ಡಿ.ಕೆ.ಶಿ ಪ್ರಮಾಣ ವಚನ ಹಿನ್ನೆಲೆ--ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ ಹಿನ್ನಲೆ ತಾಲ್ಲೂಕಿನ ರಾಜಘಟ್ಟ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಈ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಮಾತನಾಡಿ ಪಕ್ಷದ ರಾಷ್ಟ್ರೀಯ ವರಿಷ್ಟರ ಆದೇಶದಂತೆ ಸಿದ್ದರಾಮಯ್ಯ ರವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ನುಡಿದಂತೆ ನಡೆದಿದ್ದಾರೆ ಈ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದು ಹೊಸ ಅಧ್ಯಾಯ ಆರಂಭವಾಗಲಿದೆ ಎಂದರು.

ಡಿಕೆ ಶಿವಕುಮಾರ್  ಜೊತೆ  ಡಾ. ಜಿ ಪರಮೇಶ್ವರ್, ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್,ಎಂ ಬಿ ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೋಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಯುಟಿ ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್ ಮತ್ತು ಶರಣ ಪ್ರಕಾಶ್ ಪಾಟೀಲ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮುಖ್ಯವಾಗಿ ನಮ್ಮ ಜೆಲ್ಲೆಯ ನಾಯಕರಾದ ಕೆ ಎಚ್ ಮುನಿಯಪ್ಪ ಜಿ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಪ್ರಮಾಣವಚನ ಪಡೆದ ಕೆಲವೇ ಕ್ಷಣಗಳಲ್ಲಿ ನಾಡಿನ ಜನತೆಗೆ ಗಿಫ್ಟ್ ಪ್ರಮಾಣವಚನ ಪಡೆದ ಕೇವಲ ಅರ್ಧಗಂಟೆಯಲ್ಲೇ ನಾಡಿನ ಜನತೆಗೆ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಡುಗೊರೆ ಕೊಟ್ಟಿದಾರೆ. ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ಉಡುಗೊರೆ ನೀಡಿದ್ದಾರೆ. ಹಾಗೂ ರಾಜ್ಯದ ರೈತರಿಗೆ ಸರ್ಕಾರ ದಿಂದ ನೆರವು ಕಲ್ಪಿಸಿರುವ ಮೂಲಕ ಕಾಂಗ್ರೆಸ್ ಪಕ್ಷವು ಸದಾ ರೈತರ ಪರವಾಗಿ ಶ್ರಮಿಸುತ್ತದೆ ಎನ್ನುವುದಕ್ಕೆ ಉತ್ತಮ ಉದಾಹರಣೆ ನೀಡಿದ್ದಾರೆ ಅಧಿಕಾರ ಪಡೆದ ಸ್ವಲ್ಪ ಹೊತ್ತಿಗೆ ರಾಜ್ಯ ಜನತೆಗೆ ಸಿಹಿ ಸುದ್ದಿಯಲ್ಲಿರುವ  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಮುಂದೆ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾರೆ ಎಂಬ ಭರವಸೆ ಇದೆ ಎಂದು ತಿಳಿಸಿದರು.

 ದೊಡ್ಡಬಳ್ಳಾಪುರ ತಾಲೂಕಿನ ಮಾಜಿ ಶಾಸಕರಿಗೆ ನಿಗಮ ಮಂಡಳಿ ನೀಡಿ ಮುಖ್ಯಮಂತ್ರಿಯಲ್ಲಿ ಮನವಿ ಮಾಡಿದ ಮುಖಂಡರು.

 ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಆದರೆ ತಾಲೂಕಿನಲ್ಲಿ ಕಳೆದ 3 ವರ್ಷಗಳಿಂದ ನಿಕಟಪೂರ್ವ ಶಾಸಕ ಟಿ ವೆಂಕಟರಮಣಯ್ಯ ಅವರಿಗೆ ಅಧಿಕಾರ ನೀಡಿಲ್ಲ ಇನ್ನೇನು ಎರಡು ವರ್ಷಗಳಲ್ಲಿ ವಿಧಾನಸಭಾ ಚುನಾವಣೆ ಬರುತ್ತದೆ ಪಕ್ಷ ಸಂಘಟನೆ ಹಾಗೂ ಕಾರ್ಯಕರ್ತರ ಹುಮ್ಮಸ್ಸನ್ನು ಹೆಚ್ಚಿಸಲು ಮಾಜಿ ಶಾಸಕರಿಗೆ ರಾಜ್ಯಮಟ್ಟದ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ಕಲ್ಪಿಸುವ ಮೂಲಕ ಶಕ್ತಿ ತುಂಬಬೇಕು ಎಂದು ರಾಜ್ಯದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಲ್ಲಿ ಮುಖಂಡರು ಮನವಿ ಮಾಡಿದರು.

 ರಾಜಘಟ್ಟ ಹಾಲು ಉತ್ಪಾದಕರ ಸಂಘದ  ಅಧ್ಯಕ್ಷ ಜಗದೀಶ್ ಮಾತನಾಡಿ ರಾಜ್ಯದ ನೂತನ ಮುಖ್ಯಮಂತ್ರಿ ಆಗಿ  ಡಿ.ಕೆ ಶಿವಕುಮಾರ್ ಅವರು ಅಧಿಕಾರವಹಿಸಿಕೊಂಡಿರುವುದು ಸಂತಸ ತಂದಿದೆ.ನೂತನ ಮುಖ್ಯಮಂತ್ರಿಗಳು ರಾಜ್ಯದ ಭವಿಷ್ಯದ ಉತ್ತಮ ನಾಯಕರಾಗಲಿದ್ದಾರೆ ರಾಜ್ಯದ ಅಭಿವೃದ್ಧಿಗಾಗಿ ವಿನುತನ ಕಾರ್ಯಕ್ರಮಗಳನ್ನು  ರೂಪಿಸುವ ನಿರೀಕ್ಷೆ ಇದೆ ಎಂದರು.

ರಾಜಘಟ್ಟ ಕಾಂಗ್ರೆಸ್ ಮುಖಂಡರಾದ ನಾರಾಯಣಸ್ವಾಮಿ, ರಾಜಘಟ್ಟ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜಗನ್ನಾಥ್, ಹಿರಿಯ ಮುಖಂಡರಾದ ಆರ್ ಎ ಚನ್ನಪ್ಪ,ಮುಖಂಡರಾದ ಆರ್ ಎಸ್ ರಾಜು,  ಅಂಬರೀಷ್, ಚೇತನ್,  ರಂಜಿತ್, ಆಂಜಿ,  ಬಾಬಣ್ಣ, ಗೋವಿಂದಪ್ಪ, ರವಿ, ರಮೇಶ್,ಹಾಲು ಉತ್ಪಾದಕರ ಸಂಘದ ನಿರ್ದೇಶಕ ನಾರಾಯಣಪ್ಪ ಸೇರಿದಂತೆ ಹಲವು ಪ್ರಮುಖರು ಹಾಜರಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮದ್ದೂ ಒಂದು ಯುಗವಿತ್ತು; ಆರು ವರ್ಷದ ನಂತರ ನಾವು ಸ್ವತಃ ಶಾಲೆಗೆ ಹೋಗುತ್ತಿದ್ದೆವು ಬಸ್ಸಿನಲ್ಲಿ ಬಿಡಿಸುವ ಪದ್ಧತಿ ಇರಲಿಲ್ಲ.ಟೆಕ್ಸಾಸ್‌ನಲ್ಲಿ ಭಾರತದ ರಾಷ್ಟ್ರಧ್ವಜಕ್ಕೆ ಅಪಚಾರ: ವಿಶ್ವದಾದ್ಯಂತ ಭಾರತೀಯರ ತೀವ್ರ ಆಕ್ರೋಶಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿ.ಕೆ. ಶಿವಕುಮಾರ್: ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್!ಕಾರ್ಮಿಕರ ಪರ ಹೈಕೋರ್ಟ್ ಮಹತ್ವದ ತೀರ್ಪು: ವಜಾಗೊಂಡಿದ್ದ 84 ಮಂದಿಗೆ ತಲಾ 3 ಲಕ್ಷ ಪರಿಹಾರ ನೀಡಲು ಆದೇಶ!ಆಡಳಿತ ಸುಧಾರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್: ಎರಡು ಹೊಸ ಸಚಿವಾಲಯಗಳ ರಚನೆ, ರೌಡಿ ನಿಗ್ರಹಕ್ಕೆ ವಿಶೇಷ ಸ್ಕ್ವಾಡ್!"ಪಕ್ಷ ಕಟ್ಟುವವರು ನನ್ನೊಂದಿಗೆ ಬನ್ನಿ, ಅಧಿಕಾರ ಬೇಕಾದವರು ಡಿಕೆಶಿ ಜೊತೆ ಹೋಗಿ!": ಬಿ.ಕೆ. ಹರಿಪ್ರಸಾದ್ ಬ್ಯಾಟಿಂಗ್ಸೌರಶಕ್ತಿ ಉತ್ಪಾದನೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿ ವಿಶ್ವದಲ್ಲೇ ೨ನೇ ಸ್ಥಾನಕ್ಕೆ ಜಿಗಿದ ಭಾರತ!ಮತದಾರರ ಪಟ್ಟಿ ಪರಿಷ್ಕರಣೆ, ತಕ್ಷಣದ ಹೆಲ್ಪ್ ಡೆಸ್ಕ್ ಸ್ಥಾಪನೆ; ಸಿಎಂ ಡಿ.ಕೆ.ಶಿ ಕಟ್ಟುನಿಟ್ಟಿನ ಆದೇಶಇಲಾಖೆಗಳಲ್ಲಿ ಬಾಕಿ ಉಳಿದಿರುವ ಕೆಲಸಗಳನ್ನು ಮುಂದಿನ 25 ದಿನಗಳೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು- ಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ಅವರಿಗೆ ಸಿದ್ದಗಂಗಾ ಮಠದ ಸ್ವಾಮೀಜಿ ಆಶೀರ್ವಾದ: ಸಮಾಜಮುಖಿ ಕಾರ್ಯಗಳಿಗೆ ಶ್ಲಾಘನೆ