Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡಾಂಬೆಯ ಕುರಿತು ಬಾನು ಮುಷ್ತಾಕ್ ನೀಡಿದ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ನೀಡಬೇಕು

Advertisement
ಚಂದ್ರವಳ್ಳಿ ನ್ಯೂಸ್, ಮೈಸೂರು:
2023ರಲ್ಲಿ ಕನ್ನಡಾಂಬೆಯ ಕುರಿತು ಬಾನು ಮುಷ್ತಾಕ್ ಅವರು ನೀಡಿದ ಹೇಳಿಕೆಗಳ ಬಗ್ಗೆ ಸ್ಪಷ್ಟನೆ ಕೊಟ್ಟು ವೇದಿಕೆಗೆ ಬರಬೇಕು. ಇಲ್ಲದಿದ್ದರೆ ಅವರು ದಸರಾ ಉದ್ಘಾಟಿಸುವುದಕ್ಕೆ ನಮ್ಮ ವಿರೋಧವಿದೆ ಎಂದು ಸಂಸದ ಹಾಗೂ ರಾಜವಂಶಸ್ಥ ಯಧುವೀರ್ ಒಡೆಯರ್ ಹೇಳಿದರು.

ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಕರಾಗಿ ಆಯ್ಕೆಯಾಗಿದ್ದಾರೆ. 2023ರಲ್ಲಿ ಭುವನೇಶ್ವರಿ ವೇದಿಕೆಯಲ್ಲಿ ಬಾನು ಮುಷ್ತಾಕ್ ಆಡಿದ ಮಾತಿಗೆ ಸ್ಪಷ್ಟನೆ ಕೊಡಬೇಕು. ಇಲ್ಲಿಯವರೆಗೆ ಅವರು ಸ್ಪಷ್ಟನೆ ನೀಡಿಲ್ಲ. ಸ್ಪಷ್ಟನೆ ನೀಡಲು ನಾವು ಆಗ್ರಹಿಸಿದ್ದೇವೆ ಎಂದು ಸಂಸದರು ತಿಳಿಸಿದರು.


ಧಾರ್ಮಿಕತೆ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದರೆ ಉದ್ಘಾಟನೆಗೆ ನಮ್ಮ ಅಭ್ಯಂತರವಿಲ್ಲ. ಮುಖ್ಯವಾಗಿ, ನಮ್ಮ ಧಾರ್ಮಿಕ ಭಾವನೆಯ ಬಗ್ಗೆ ಮತ್ತು ಆಚರಣೆಗಳ ಬಗ್ಗೆ ಸ್ಪಷ್ಟನೆ ಕೊಟ್ಟು ಬರಬೇಕು ಎಂದು ಯಧುವೀರ್ ಒತ್ತಾಯಿಸಿದರು.

ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಸರ್ಕಾರ ಆಯ್ಕೆ ಮಾಡಿದ ನಂತರ ನಾವು ಆಯ್ಕೆ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದ್ದೆವು. ಆದರೆ 2023ರಲ್ಲಿ ಭುವನೇಶ್ವರಿ ವೇದಿಕೆಯಲ್ಲಿ ಅವರು ಆಡಿರುವ ಮಾತು ಬಹಿರಂಗವಾದ್ದರಿಂದ ಸ್ಪಷ್ಟನೆ ಕೇಳಿದ್ದೇವೆ. ಅಲ್ಲದೇ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಆಚರಣೆಯಲ್ಲಿ ಯಾವುದೇ ಹಿಂದೂಗಳ ಭಾವನೆಗೆ ಧಕ್ಕೆಯಾಗದಂತೆ ಅವರ ನಡೆ ಇರಲಿದೆಯೇ ಎಂದು ನಾವು ಪ್ರಶ್ನೆ ಮಾಡಿದ್ದೇವೆ ಎಂದು ಹೇಳಿದರು.

ಐತಿಹಾಸಿಕ ದಸರಾ ಒಂದು ಸಾಂಸ್ಕೃತಿಕ ಹಾಗೂ ಧಾರ್ಮಿಕ ವೇದಿಕೆ. ಈ ವೇದಿಕೆಗೆ ಅವರು ನಮ್ಮ ಧಾರ್ಮಿಕ ಭಾವನೆಗಳೊಂದಿಗೆ ಬರುತ್ತಾರಾ ಎಂಬುದು ನಮ್ಮ ಪ್ರಶ್ನೆಯಾಗಿದೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಾಮುಂಡಿ ಬೆಟ್ಟದ ಬಗ್ಗೆ ನೀಡಿರುವ ಹೇಳಿಕೆ ಕುರಿತು ಮಾತನಾಡಿದ ಯಧುವೀರ್, ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಬೇಜವಾಬ್ದಾರಿಯುತವಾಗಿದೆ. ಚಾಮುಂಡಿ ಬೆಟ್ಟ ಹಿಂದೂಗಳ ಧಾರ್ಮಿಕ ಸ್ಥಳ. ಭಾರತದ ಶಕ್ತಿಪೀಠಗಳಲ್ಲಿ ತಾಯಿ ಚಾಮುಂಡೇಶ್ವರಿ ಕ್ಷೇತ್ರವೂ ಒಂದು. ಋಷಿ ಮಾರ್ಕಂಡೇಯ ಅವರು ಚಾಮುಂಡೇಶ್ವರಿ ವಿಗ್ರಹ ಕೆತ್ತಿದ ಇತಿಹಾಸವಿದೆ. ಆದ್ದರಿಂದ, ಚಾಮುಂಡಿ ಬೆಟ್ಟ ಹಿಂದೂಗಳ ಧಾರ್ಮಿಕ ಕ್ಷೇತ್ರವಾಗಿದೆ. ಇಂತಹ ಬೇಜವಾಬ್ದಾರಿಯುತ ಹೇಳಿಕೆಯನ್ನು ಏಕೆ ನೀಡಿದ್ದಾರೆ ಎಂದು ಅವರೇ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ