Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ನೆಲದ ವೈಚಾರಿಕ ಪ್ರಜ್ಞೆ ಜಾಗೃತಗೊಳಿಸಿದ ಬಸವಣ್ಣ

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ: 
ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ಜಗಜ್ಯೋತಿ ಬಸವಣ್ಣ ಜಯಂತ್ಯುತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬಸವಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಶ್ರೀ ದೇವರಾಜ್‌ಅರಸ್‌ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ,  ತಳಸಮುದಾಯಗಳ ದನಿಯಾಗಿ, ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸಿದ ಬಸವಣ್ಣನವರು ಮಹತ್ತರವಾದ ವಚನಗಳ ಮೂಲಕ ಸಮಾಜದ ದನಿಯಾಗಿದ್ದಾರೆ. ಎಲ್ಲ ಕಾಲಕ್ಕೂ ಸಲ್ಲುವ ಮೌಲ್ಯಗಳನ್ನು ಕಟ್ಟಿಕೊಟ್ಟಿದ್ದಾರೆ. ಸಮಸಮಾಜ ನಿರ್ಮಾಣದ ಆಶಯವನ್ನು 12ನೇ ಶತಮಾನದಲ್ಲೇ ಪ್ರತಿಪಾದಿಸಿದರು. ಆದರೆ ಇಂದಿಗೂ ಮರ್ಯಾದಾ ಹತ್ಯೆಯಂತಹ ಪ್ರಕರಣಗಳು ಸಮಾಜದಲ್ಲಿ ನಡೆಯುತ್ತಿರುವುದು ವಿಷಾದನೀಯ ಎಂದರು.

ಸಾಮಾಜಿಕ ನ್ಯಾಯದ ಹೋರಾಟಗಾರ:
ಬಸವಣ್ಣನವರ ವೈಚಾರಿಕ ನಿಲುವುಗಳ ಕುರಿತು ಉಪನ್ಯಾಸ ನೀಡಿದ ಲಯನ್ಸ್‌ಕ್ಲಬ್‌ಅಧ್ಯಕ್ಷ ಪ್ರೊ.ಕೆ.ಆರ್.ರವಿಕಿರಣ್
, ಬಸವಣ್ಣನವರು ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಾಯಕ, ವಿಶ್ವಗುರು ಮತ್ತು ಈ ನೆಲದ ಮೊದಲ ಸಾಮಾಜಿಕ ನ್ಯಾಯದ ಹೋರಾಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ವಂಚಿತ ಸಮುದಾಯಗಳನ್ನು ತಬ್ಬಿಕೊಂಡು ನಡೆದದ್ದು ಬಸವ ಚಳುವಳಿ. ಸರ್ವಕಾಯಕಗಳಿಗೆ ವೃತ್ತಿ ಘನತೆಯನ್ನು ತಂದು ಕೊಟ್ಟು ಅವುಗಳನ್ನು ಸತ್ಯಶುದ್ಧ ಕಾಯಕವೆಂದು ಗೌರವಿಸಿದವರು ಬಸವಣ್ಣನವರು.ಕನ್ನಡ ನೆಲದ ವೈಚಾರಿಕ ಪ್ರಜ್ಞೆಯನ್ನು ಜಾಗೃತಗೊಳಿಸಿದ ನಾಯಕ ಅವರು ಎಂದು ತಿಳಿಸಿದರು.

ಮನುಧರ್ಮ ಪ್ರತಿಪಾದಿಸುವ ಚಾತುರ್ ವರ್ಣ ವ್ಯವಸ್ಥೆಯನ್ನು ಬಸವಣ್ಣನವರು ಧಿಕ್ಕರಿಸಿದ್ದರು. ಕೋಮುವಾದ, ಜಾತಿ ತಾರತಮ್ಯ, ಮೂಢನಂಬಿಕೆ, ಕಂದಾಚಾರ ಮೊದಲಾದ ಸಾಮಾಜಿಕ ಪಿಡುಗುಗಳೆಲ್ಲ ಮತ್ತೆ ತಲೆ ಎತ್ತಲು ಪ್ರಯತ್ನಿಸುತ್ತಿರುವ ಈ ಹೊತ್ತಿನಲ್ಲಿ, ಅದರ ವಿರುದ್ಧದ ಹೋರಾಟಕ್ಕೆ ನಮಗಿರುವ ಅಸ್ತ್ರಗಳೆಂದರೆ ಬುದ್ಧ, ಬಸವಣ್ಣ, ಅಂಬೇಡ್ಕರ್ ಮೊದಲಾದವರ ತತ್ವ-ಸಿದ್ಧಾಂತಗಳು. ಇದರ ಮೂಲಕವಷ್ಟೇ ಸಂವಿಧಾನದ ಮೂಲ ಆಶಯವಾದ ಸಮಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂಬುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಪ್ರಾಂಶುಪಾಲ ಡಾ.ಪಿ.ವಿಜಯಕಾರ್ತಿಕ್‌ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಡಾ.ಆರ್.ಎಂ.ಸುನಿಲ್‌ಕುಮಾರ್, ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಡಾ.ನರಸಿಂಹರೆಡ್ಡಿ, ವಿಭಾಗಗಳ ಮುಖ್ಯಸ್ಥರಾದ ಡಾ.ಬಸವರಾಜ ಪಾಲ್‌, ಡಾ.ಪ್ರಚಲಿತ್‌, ದೈಹಿಕ ಶಿಕ್ಷಣ ನಿರ್ದೇಶಕ ದಾದಾಫೀರ್‌, ವ್ಯವಸ್ಥಾಪಕ ಎಸ್.ಯತಿನ್‌, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ