ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಭಾರತೀಯ ಜನತಾ ಪಕ್ಷದ ಹಿರಿಯೂರು ಮಂಡಲದ ನೂತನ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ನೇಮಕಗೊಂಡಿರುವ ಸಿದ್ದಮ್ಮ ಅವರಿಗೆ ಪಕ್ಷದ ವತಿಯಿಂದ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.
ಬಿಜೆಪಿ ಹಿರಿಯೂರು ಮಂಡಲದ ಕಾರ್ಯಕಾರಿ ಸಮಿತಿ ಸದಸ್ಯರಾದ ಟಿ. ಬಸವರಾಜ ನಾಯಕ ಅವರು ನೂತನ ಅಧ್ಯಕ್ಷೆ ಸಿದ್ದಮ್ಮ ಅವರನ್ನು ಭೇಟಿಯಾಗಿ, ಮಂಡಲದ ಪರವಾಗಿ ಆತ್ಮೀಯವಾಗಿ ಅಭಿನಂದಿಸಿ ಶುಭ ಕೋರಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಟಿ. ಬಸವರಾಜ ನಾಯಕ ಅವರು, "ಸಿದ್ದಮ್ಮ ಅವರ ನೇತೃತ್ವದಲ್ಲಿ ಹಿರಿಯೂರು ತಾಲ್ಲೂಕಿನಲ್ಲಿ ಮಹಿಳಾ ಮೋರ್ಚಾ ಸಂಘಟನೆಯು ಮತ್ತಷ್ಟು ಬಲಗೊಳ್ಳಲಿದೆ. ಮುಂಬರುವ ದಿನಗಳಲ್ಲಿ ಪಕ್ಷದ ಸಿದ್ಧಾಂತ ಹಾಗೂ ಸರ್ಕಾರದ ಜನಪರ ಯೋಜನೆಗಳನ್ನು ತಳಮಟ್ಟದ ಮಹಿಳೆಯರಿಗೆ ತಲುಪಿಸಲು ಅವರು ಯಶಸ್ವಿಯಾಗಲಿದ್ದಾರೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಿದ್ದಮ್ಮ ಅವರ ನೇಮಕದಿಂದಾಗಿ ತಾಲ್ಲೂಕಿನಾದ್ಯಂತ ಇರುವ ಬಿಜೆಪಿ ಮಹಿಳಾ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದ್ದು, ಪಕ್ಷದ ಸಂಘಟನೆಗೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಈ ಸಂದರ್ಭದಲ್ಲಿ ಹಿರಿಯ ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ.



