Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ಯಾನ್ಸರ್ ರೋಗದ ಬಗ್ಗೆ ಎಚ್ಚರ ವಹಿಸಿ-ಸಣ್ಣ ರಂಗಮ್ಮ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜೋಗಿ ಮಟ್ಟಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ದಿನಾಚರಣೆ ಮಾಡಲಾಯಿತು.
ಜಿಲ್ಲಾ ಪೌಷ್ಟಿಕ ಅಧಿಕಾರಿ ಸಣ್ಣ ರಂಗಮ್ಮ ಅವರು ಸಭೆಗೆ ಸೇರಿದ್ದ ಗರ್ಭಿಣಿ ಬಾಣಂತಿಯರು ಇತರರಿಗೆ ಪೌಷ್ಟಿಕ ಆಹಾರಗಳ ಮಾಹಿತಿ, ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ಕುಟುಂಬ ಯೋಜನೆಗಳು ಮತ್ತು ಕ್ಯಾನ್ಸರ್ ಪೀಡಿತ ರೋಗ ಲಕ್ಷಣಗಳ ಬಗ್ಗೆ ಮಾಹಿತಿ ನೀಡಿದರು.


3 ವಾರಗಳಿಗಿಂತ ಹೆಚ್ಚು ಕಾಲ ಬಾಯಿ ಅಥವಾ ನಾಲಿಗೆ ಹುಣ್ಣು ಕಾಣಿಸಿಕೊಂಡಿದ್ದರೆ, ಕೆಮ್ಮು ಅಥವಾ ಕೊಕ್ಕಿನ ಧ್ವನಿ 3 ವಾರಗಳಿಗಿಂತ ಹೆಚ್ಚು ಕಾಲ ಇದ್ದರೆ, ಅಜೀರ್ಣ ಮುಂದುವರಿದರೆ, ರಕ್ತ ಕೆಮ್ಮುವುದು, ಸ್ತನಗಳ ಗಾತ್ರ, ಆಕಾರ ಅಥವಾ ಅನುಭವದ ಬದಲಾವಣೆಗಳು ಕಂಡು ಬಂದಾಗ ಕೂಡಲೇ ವೈದ್ಯರ ಭೇಟಿ ಮಾಡಬೇಕು ಎಂದು ಸಣ್ಣರಂಗಮ್ಮ ಜಾಗೃತಿ ಮೂಡಿಸಿದರು.

ಸ್ತನಗಳ ಮೇಲೆ ಚರ್ಮದ ಯಾವುದೇ ಭಾಗ ಮಬ್ಬಾಗುವುದು ಅಥವಾ ಕೆಂಪು ಬಣ್ಣಕ್ಕೆ ತಿರುಗಿದರೆ, ಋತು ಬಂಧದ ನಂತರ, ಲೈಂಗಿಕತೆಯ ನಂತರ ಯೋನಿಯಲ್ಲಿ ರಕ್ತಸ್ರಾವ ಆಗುತ್ತಿದ್ದರೆ, ಮೂತ್ರದಲ್ಲಿ ರಕ್ತ ಬರುವುದು, ಮೂತ್ರ ವಿಸರ್ಜನೆಯಲ್ಲಿ ತೊಂದರೆ ಕಾಣಿಸುವುದು, ಗಾತ್ರ, ಆಕಾರ ಅಥವಾ ಮಲದ ಬಣ್ಣದಲ್ಲಿ ಬದಲಾವಣೆ ಆಗಿದ್ದರೆ ತುಂಬಾ ಎಚ್ಚರ ವಹಿಸಬೇಕು ಎಂದು ಅವರು ತಿಳಿಸಿದರು.


4 ವಾರಗಳಿಗಿಂತ ಹೆಚ್ಚು ಕಾಲ ನೋವು ಕಾಣಿಸಿಕೊಂಡಿದ್ದರೆ, ಅಸಾಮಾನ್ಯ ರೀತಿಯಲ್ಲಿ ದೇಹದಲ್ಲಿ ಊತ, ತೂಕ ನಷ್ಟ, ರಾತ್ರಿ ಬೆವರುವಿಕೆ ಲಕ್ಷಣಗಳು ಕಂಡು ಬಂದಲ್ಲಿ ಕ್ಯಾನ್ಸರ್ ಗೆ ದಾರಿ ಮಾಡುವ ಸಾಧ್ಯತೆ ಹೆಚ್ಚಿದ್ದು ನಿರ್ಲಕ್ಷ್ಯ ಮಾಡದಂತೆ  ಸಣ್ಣ ರಂಗಮ್ಮ ಎಚ್ಚರಿಸಿದರು.


ಆರೋಗ್ಯ ಕಾರ್ಯಕರ್ತೆ ಏಕಾಂತಮ್ಮ ಇವರು ಜನರಿಗೆ ಎನ್ವಿ ಬಿಡಿಸಿಪಿ ಬಗ್ಗೆ ಮಾಹಿತಿ ನೀಡಿದರು.
ಆಶಾ ಕಾರ್ಯಕರ್ತೆಯರು ಡೆಂಗ್ಯೂ, ಮಲೇರಿಯಾ ಬಗ್ಗೆ ಜನರಿಗೆ ಮನೆಯ ಸುತ್ತಮುತ್ತಲಿನ ಚರಂಡಿಗಳನ್ನ ಸ್ವಚ್ಛತೆಯಿಂದ ನೋಡಿಕೊಳ್ಳಲು ತಿಳಿಸಿದರು.


ಕಾರ್ಯಕ್ರಮದಲ್ಲಿ ಪಿಎಚ್ ಸಿಓ ಏಕಾಂತಮ್ಮ, ಆಶಾ ಕಾರ್ಯಕರ್ತೆಯರಾದ ಸಂಗೀತಾ, ಸುಜಾತ, ಅನ್ನಪೂರ್ಣ, ಅಂಗನವಾಡಿ ಕಾರ್ಯಕರ್ತೆ ಮಮತಾ, ಸಹಾಯಕಿ ಭಾಗ್ಯ ಮತ್ತಿತರರು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ