Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೈಪುರದಲ್ಲಿ ಲಂಚ ಪಡೆದ ಬೆಂಗಳೂರು ಪೊಲೀಸರು: PSI ಸೇರಿ ಮೂವರು ಅಮಾನತು

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ರಾಜಸ್ಥಾನಕ್ಕೆ ಹೋಗಿದ್ದಾಗ ಲಂಚ ಪಡೆಯುತ್ತಿದ್ದ ವೇಳೆ ಜೈಪುರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸಿಕ್ಕಿಬಿದ್ದ ಬೆಂಗಳೂರಿನ ಎಚ್‌ಎಎಲ್ ಮಹಿಳಾ ಪೊಲೀಸ್ ಠಾಣೆಯ ಪಿಎಸ್‌ಐ ಕೆ. ಅನಿತಾ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಅಮಾನತುಗೊಂಡವರಲ್ಲಿ ಪಿಎಸ್‌ಐ ಕೆ. ಅನಿತಾ, ಹೆಡ್‌ಕಾನ್‌ಸ್ಟೇಬಲ್‌ಗಳಾದ ಉಳುವಪ್ಪ ತೆಗೂರು ಮತ್ತು ಯತೀಶ್ ಕುಮಾರ್‌ಸೇರಿದ್ದಾರೆ.

ಪ್ರಕರಣದ ಹಿನ್ನೆಲೆ ಏನು?:
ತನಿಖೆಗೆ ತೆರಳಿದ್ದ ತಂಡ: ಎಚ್‌ಎಎಲ್ ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವೊಂದರ ತನಿಖೆಗಾಗಿ ಪಿಎಸ್‌ಐ ಅನಿತಾ ನೇತೃತ್ವದ ತಂಡ ರಾಜಸ್ಥಾನದ ಜೈಪುರಕ್ಕೆ ತೆರಳಿತ್ತು.

ಲಂಚಕ್ಕೆ ಬೇಡಿಕೆ: ಪ್ರಕರಣದಿಂದ ಹೆಸರು ಕೈಬಿಡಲು ಆರೋಪಿಗಳ ಕುಟುಂಬದವರಿಂದ ಈ ಪೊಲೀಸ್ ತಂಡ 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿತ್ತು.

ಎಸಿಬಿ ಬಲೆಗೆ: ಲಂಚದ ಕಾಟ ತಡೆಯಲಾರದ ಆರೋಪಿಯ ಕುಟುಂಬಸ್ಥರು ರಾಜಸ್ಥಾನದ ಎಸಿಬಿಗೆ ದೂರು ನೀಡಿದ್ದರು. ಜೈಪುರದ 'ಹೋಟೆಲ್ ಗಂಗೌರ್'ನಲ್ಲಿ 40 ಸಾವಿರ ನಗದು ಲಂಚ ಸ್ವೀಕರಿಸುತ್ತಿದ್ದಾಗ ಹೆಡ್ ಕಾನ್‌ಸ್ಟೇಬಲ್ ಉಳುವಪ್ಪ ತೆಗೂರು ಅವರನ್ನು ಎಸಿಬಿ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಬಂಧಿಸಿದರು. ಅವರ ವಿಚಾರಣೆ ಬಳಿಕ ಪಿಎಸ್‌ಐ ಅನಿತಾ ಮತ್ತು ಮತ್ತೊಬ್ಬ ಹೆಡ್ ಕಾನ್‌ಸ್ಟೇಬಲ್ ಯತೀಶ್ ಕುಮಾರ್ ಅವರನ್ನು ವಶಕ್ಕೆ ಪಡೆಯಲಾಯಿತು.

ಹಿರಿಯ ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ: ಗೃಹ ಸಚಿವರ ಎಚ್ಚರಿಕೆ
ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಗೃಹ ಸಚಿವರು
, ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಇಲಾಖೆಯ ಒಳಗಣ್ಣು ಸರಿಪಡಿಸುವ ಭರವಸೆ ನೀಡಿದ್ದಾರೆ.

"ಪಿಎಸ್‌ಐ ಅನಿತಾ ಸೇರಿದಂತೆ ಮೂವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಈ ಲಂಚದ ದಂಧೆಯಲ್ಲಿ ಇಲಾಖೆಯ ಯಾವುದೇ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರಾ ಎಂಬ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಲು ಸೂಚಿಸಿದ್ದೇನೆ. ಯಾರೇ ಶಾಮೀಲಾಗಿದ್ದರೂ ಕಠಿಣ ಕ್ರಮ ಗ್ಯಾರಂಟಿ. ವ್ಯವಸ್ಥೆಯನ್ನು ಬೇರು ಮಟ್ಟದಿಂದ ಸರಿಪಡಿಸಬೇಕಿದೆ, ಇದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ."
ಪ್ರಿಯಾಂಕ್ ಖರ್ಗೆ, ಗೃಹ ಸಚಿವರು.

ಸದ್ಯ ರಾಜಸ್ಥಾನ ಎಸಿಬಿ ವಶದಲ್ಲಿರುವ ಕರ್ನಾಟಕದ ಪೊಲೀಸರ ವಿರುದ್ಧ ಇಲಾಖಾ ತನಿಖೆಯೂ ಚುರುಕುಗೊಂಡಿದ್ದು, ಇಡೀ ಪೊಲೀಸ್ ಇಲಾಖೆಗೆ ಈ ಘಟನೆ ತೀವ್ರ ಮುಜುಗರ ಉಂಟುಮಾಡಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಕೆಲವರ ಮಾತು ಕೇಳಿ ಬಿಡದಿ ಟೌನ್‌ಶಿಪ್ ಕೈಬಿಡಲ್ಲ": ಸಚಿವ ಯತೀಂದ್ರಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲು ಸಿಎಂ ಶಿವಕುಮಾರ್ ಸೂಚನೆಮಹಿಳೆಯರಿಗೆ ಉಚಿತ 'ಸ್ಮಾರ್ಟ್ ಕಾರ್ಡ್'; ಶೀಘ್ರದಲ್ಲೇ ಅಂತಿಮ ರೂಪುರೇಶೆ ಎಂದ ಸಚಿವ ಬೈರತಿ ಸುರೇಶ್ವಿಧಾನ ಪರಿಷತ್ ಚುನಾವಣೆ: ಕ್ರಾಸ್ ವೋಟಿಂಗ್ ಭೀತಿ; ಬಿಡದಿ ರೆಸಾರ್ಟ್‌ಗೆ ಕಾಂಗ್ರೆಸ್ ಶಾಸಕರು ಶಿಫ್ಟ್!ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ; ಬಲವಂತದ ಮತಾಂತರಕ್ಕೆ ಯತ್ನ ಇಬ್ಬರ ಬಂಧನ"ಶ್ರೀರಾಮನೇ ಲೆಕ್ಕ ಕೊಡುವಾಗ ಆರ್‌ಎಸ್‌ಎಸ್ ಯಾಕೆ ಕೊಡಬಾರದು?": ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆದೂರು ದಾಖಲಾಗುವ ಮುನ್ನವೇ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು! ಹೈಕೋರ್ಟ್ ಆಘಾತನಗರಾಭಿವೃದ್ಧಿ ಜವಾಬ್ದಾರಿ ವಹಿಸಿಕೊಂಡ ಕೃಷ್ಣಬೈರೇಗೌಡ; ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ 'ರಾಕೆಟ್ ಸೈನ್ಸ್' ಕ್ಲಾಸ್!ಮಹಜರು ವೇಳೆ ಪೊಲೀಸರ ಮೇಲೆಯೇ ಹಲ್ಲೆ; ಕೊಲೆ ಆರೋಪಿ ಮಧು ಕಾಲಿಗೆ ಬಿದ್ದಿತು ಗುಂಡೇಟು!ರೌಡಿಪಟ್ಟಿಯಿಂದ ಸೈಲೆಂಟ್ ಸುನೀಲ, ಒಂಟೆ ರೋಹಿತ್ ಮುಕ್ತಿ? ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಜ್ಜು!