Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಫಲವಾದ ಪರಿವರ್ತಕ ಬದಲಾವಣೆ: ಹಣ ನೀಡದಂತೆ ಬೆಸ್ಕಾಂ ಸೂಚನೆ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಫಲವಾದ  ಪರಿವರ್ತಕದ ಬದಲಾವಣೆಗೆ ಮಧ್ಯವರ್ತಿ, ಏಜೆನ್ಸಿ, ಅಧಿಕಾರಿ ಹಾಗೂ ನೌಕರರಿಗೆ ಹಣ ನೀಡಬಾರದು ಎಂದು ರೈತರಿಗೆ ಹಾಗೂ ಸಾರ್ವಜನಿಕರಿಗೆ ಬೆಸ್ಕಾಂ ಸೂಚನೆ ನೀಡಿದೆ.

  ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ ಬರುವ ಚಿತ್ರದುರ್ಗ ಗ್ರಾಮೀಣ, ಹೊಳಲ್ಕೆರೆ, ಹೊಸದುರ್ಗ, ಶ್ರೀರಾಂಪುರ ಉಪವಿಭಾಗದ ವ್ಯಾಪ್ತಿಯಲ್ಲಿ ಪರಿವರ್ತಕಗಳು ವಿಫಲವಾದರೆ ನಗರ ವ್ಯಾಪ್ತಿಯಲ್ಲಿ 24 ಗಂಟೆಯೊಳಗಾಗಿ

ಹಾಗೂ ಗ್ರಾಮೀಣ ವ್ಯಾಪ್ತಿಯಲ್ಲಿ 72 ಗಂಟೆಯೊಳಗೆ ಪರಿವರ್ತಕವನ್ನು ಬದಲಾಯಿಸಲು ನಿಯಮವಿದ್ದು, ಬಫರ್ಸ್ಟಾಕ್ ಅಡಿಯಲ್ಲಿ ಎಲ್ಲಾ ಉಪವಿಭಾಗಗಳಿಗೆ ಪರಿವರ್ತಕಗಳನ್ನು ಹಂಚಿಕೆ ಮಾಡಲಾಗುತ್ತಿದ್ದು, ಪರಿವರ್ತಕಗಳನ್ನು ಚಿತ್ರದುರ್ಗ ನಗರ ಮತ್ತು ಗ್ರಾಮೀಣ ಉಪವಿಭಾಗದಲ್ಲಿ ಗಜಲಕ್ಷ್ಮೀ ಎಂಟರ್ಪ್ರೈಸೆಸ್ ಅವರು ಹೊಳಲ್ಕೆರೆ ಉಪವಿಭಾಗದಲ್ಲಿ ಸಾಯಿರಾಮ್ ಎಂಟರ್ಪ್ರೈಸ್ಸಸ್ ಅವರು ಹಾಗೂ ಹೊಸದುರ್ಗ ಮತ್ತು

ಶ್ರೀರಾಂಪುರ ಉಪವಿಭಾಗದಲ್ಲಿ ವಿಘೇಶ್ವರ ಎಂಟರ್ಪ್ರೈಸಸ್ ಏಜೆನ್ಸಿ ಅವರಿಗೆ ನೀಡಲಾಗಿದ್ದು, ಪರಿವರ್ತಕಗಳನ್ನು ರಿಪೇರಿ ಮಾಡಿ ಸರಬರಾಜು ಮಾಡುತ್ತಿದ್ದಾರೆ.

ವಿಫಲವಾದ ಪರಿವರ್ತಕ ಬದಲಾವಣೆಗೆ ಯಾರಾದರೂ ಹಣ ಕೇಳಿದ್ದಲ್ಲಿ ಹಾಗೂ ದೂರುಗಳಿಗಾಗಿ ಬೆಸ್ಕಾಂ ಚಿತ್ರದುರ್ಗ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ದೂರವಾಣಿ ಸಂಖ್ಯೆ 9448279014 ಹಾಗೂ ಸಹಾಯಕ ಕಾರ್ಯನಿರ್ವಾಹಕ ಇಚಿಜಿನಿಯರ್ ಅವರ ದೂರವಾಣಿ ಸಂಖ್ಯೆ 9449842739 ಗೆ ಸಂಪರ್ಕಿಸಬಹುದು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ತಿಮ್ಮರಾಯ ತಿಳಿಸಿದ್ದಾರೆ.



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ