Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಭದ್ರಾ ಮೇಲ್ದಂಡೆ ಯೋಜನೆ: ಸೆಪ್ಟೆಂಬರ್‌ನಲ್ಲಿ ಚಿತ್ರದುರ್ಗ ಜಿಲ್ಲೆಯ ಕೆರೆಗಳಿಗೆ ಹರಿಯಲಿದೆ ನೀರು!

ಚಂದ್ರವಳ್ಳಿ ನ್ಯೂಸ್, ಹಿರಿಯೂರು: 
ಜಿಲ್ಲೆಯ ಬಹು ನಿರೀಕ್ಷಿತ ಭದ್ರಾ ಮೇಲ್ದಂಡೆ ಯೋಜನೆಯ ಶಾಖಾ ಕಾಲುವೆ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು
, ಸೆಪ್ಟೆಂಬರ್ ಮೊದಲ ವಾರದಲ್ಲೇ ಚಿತ್ರದುರ್ಗ ಜಿಲ್ಲೆಯ ವ್ಯಾಪ್ತಿಯ ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಯಲಿದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಯ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ ತಿಳಿಸಿದರು.

ಅಜ್ಜಂಪುರ ತಾಲೂಕಿನ ಹೆಬ್ಬೂರು ಗ್ರಾಮದ ಸಮೀಪವಿರುವ ಭದ್ರಾ ಮೇಲ್ದಂಡೆ ಯೋಜನೆಯ ವೈ-ಜಂಕ್ಷನ್, ಅಬ್ಬಿನಹೊಳಲು ಹಾಗೂ ಹೆಗ್ಗಡಿಹಳ್ಳಿ ಬಳಿ ಹಾದು ಹೋಗಿರುವ 16 ಕಿ.ಮೀ ವ್ಯಾಪ್ತಿಯ ಚಿತ್ರದುರ್ಗ ಶಾಖಾ ನಾಲೆ ಕಾಮಗಾರಿ ಸ್ಥಳಕ್ಕೆ ಮಂಗಳವಾರ ಹಿರಿಯೂರು ತಾಲೂಕಿನ ನೂರಾರು ರೈತ ಮುಖಂಡರೊಂದಿಗೆ ಭೇಟಿ ನೀಡಿ, ಪರಿವೀಕ್ಷಣೆ ನಡೆಸಿದ ನಂತರ ಅವರು ಮಾತನಾಡಿದರು.

Advertisement

ಕಾಮಗಾರಿ ಪ್ರಗತಿ ಹಾಗೂ ಪ್ರಾಯೋಗಿಕ ನೀರು ಪೂರೈಕೆ:
ತಮ್ಮ ಅಧಿಕಾರಾವಧಿಯಲ್ಲಿ ಯೋಜನೆಗೆ ಅಡ್ಡಿಯಾಗಿದ್ದ ಭೂಸ್ವಾಧೀನ ಸಮಸ್ಯೆಯನ್ನು ಯಶಸ್ವಿಯಾಗಿ ಬಗೆಹರಿಸಲಾಗಿತ್ತು. ಇದರ ಪರಿಣಾಮವಾಗಿ 16 ಕಿ.ಮೀ ದೂರದ ಶಾಖಾ ನಾಲೆ ಕಾಮಗಾರಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಸಂಪೂರ್ಣಗೊಳ್ಳಲಿದೆ. ತದನಂತರ
, ಚಿತ್ರದುರ್ಗ ಜಿಲ್ಲೆಯ 114 ಕಿ.ಮೀ ದೂರದಲ್ಲಿರುವ ಗೋಣೂರು ಹಾಗೂ ಹಿರಿಯೂರು ತಾಲೂಕಿನ ಐಮಂಗಲ, ಧರ್ಮಪುರ, ಕಸಬಾ ಮತ್ತು ಜವನಗೊಂಡನಹಳ್ಳಿ ಹೋಬಳಿಗಳ ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಅವರು ವಿವರಿಸಿದರು.

೬೪ ಕೆರೆಗಳಿಗೆ ನೀರು ತುಂಬಿಸುವ ಬೃಹತ್ ಯೋಜನೆ: ಕಳೆದ 2025ರ ಸಾಲಿನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯಿಂದ ವಾಣಿ ವಿಲಾಸ ಸಾಗರ (ವಿವಿ ಸಾಗರ) ಜಲಾಶಯ ಭರ್ತಿಯಾಗಿದ್ದು, ತಾಲೂಕಿನಲ್ಲಿ ಜಲಸಮೃದ್ಧಿಯ ಹೊಸ ಅಧ್ಯಾಯ ಆರಂಭವಾಗಿದೆ. ಪ್ರಸ್ತುತ ಪೈಪ್‌ಲೈನ್ ಮೂಲಕ ಕಾಮಗಾರಿ ಮುಂದುವರಿದಿದ್ದು, ಮುಖ್ಯ ನಾಲೆಯಿಂದ ಚಿತ್ರದುರ್ಗ ಜಿಲ್ಲೆಯ ಶಂಕರನಹಳ್ಳಿ, ಭರಂಪುರ, ಚಿಕ್ಕಸಿದ್ದವನಹಳ್ಳಿ, ಕೋವೇರಹಟ್ಟಿ ಹಾಗೂ ತವಂದಿ ಪ್ರದೇಶಗಳ ವ್ಯಾಪ್ತಿಯ ಸುಮಾರು 64 ಕೆರೆಗಳಿಗೆ ನೀರು ತುಂಬಿಸುವ ಜವಾಬ್ದಾರಿಯುತ ಉದ್ದೇಶ ಹೊಂದಲಾಗಿದೆ ಎಂದರು.

ಸ್ಥಳದಲ್ಲಿದ್ದ ರೈತ ಮುಖಂಡರು ಕಾಮಗಾರಿಯ ವೇಗವನ್ನು ಕಂಡು ಹರ್ಷ ವ್ಯಕ್ತಪಡಿಸಿದ್ದು, ಕಾಮಗಾರಿ ಮುಗಿಯುತ್ತಿದ್ದಂತೆ ವಿಳಂಬ ಮಾಡದೆ ತಕ್ಷಣವೇ ಕೆರೆಗಳಿಗೆ ನೀರು ಹರಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಯಶವಂತರಾಜು, ಪ್ರಮುಖ ರೈತ ಮುಖಂಡರಾದ ಎಚ್.ಆರ್. ತಿಮ್ಮಯ್ಯ, ಆಲೂರು ಸಿದ್ದರಾಮಣ್ಣ, ಆನಂದಮೂರ್ತಿ, ಬಿ.ಕೆ. ಉಗ್ರಮೂರ್ತಿ, ಎಸ್.ಎಲ್. ಗಿರಿ, ಸಿ. ನಾಗರಾಜ್, ರೇಣುಕಮ್ಮ, ವೇದಾ, ಮಮತಾ, ಭಾಗ್ಯ ಸೇರಿದಂತೆ ನೂರಾರು ರೈತರು ಉಪಸ್ಥಿತರಿದ್ದರು.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಲಿಗುಂದಿ ಸಿದ್ದೇಶ್ವರಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆಕಣಿವೆಮಾರಮ್ಮ ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗೆ ಮನವಿಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣಾ ಶಿಬಿರಚಿಕ್ಕಮ್ಮನಹಟ್ಟಿ ಗ್ರಾಮದ ಯಶೋಧ ಕಣ್ಮರೆ: ಗುರುತು ಪತ್ತೆ ಮನವಿಗೌರಸಮುದ್ರ ಶ್ರೀ ಮಾರಮ್ಮ ಜಾತ್ರೆ: ಸೆ.14 ಮತ್ತು 15 ರಂದು ಮದ್ಯ ಮಾರಾಟ ನಿಷೇಧಸರ್ಕಾರಿ ಯೋಜನೆ ಹೆಸರಲ್ಲಿ ಖಾಸಗಿ ಫೈನಾನ್ಸ್ ವಂಚನೆ- ಎಂ.ಪಿ.ಪ್ರವೀಣ್ ಮನವಿಘಾಟಿ ಸುಬ್ರಮಣ್ಯದ ತೇರಿನ ಬೀದಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಶಿರವಾರ ಗ್ರಾಮದಲ್ಲಿ ಕೃಷಿ ಕೆಲಸದ ಅನುಭವ ಕಾರ್ಯಕ್ರಮಭದ್ರೆಗೆ ಗೋನೂರು ಕೆರೆ ಬಳಿ ಅದ್ದೂರಿ ಸ್ವಾಗತ, ಸಂಸದ, ಹಲವು ಮಠಾಧಿಪತಿಗಳು ಭಾಗಿಇಡಿ ದಾಳಿ: ಸತೀಶ್‌ ಜಾರಕಿಹೊಳಿ ಬೆಂಬಲಕ್ಕೆ ನಿಂತ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌