Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎರಡು ತಿಂಗಳಲ್ಲಿ ಹೊಳಲ್ಕೆರೆಗೆ ಭದ್ರಾ ನೀರು-ಶಾಸಕ ಚಂದ್ರಪ್ಪ

Advertisement
ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ :
ಎರಡು ತಿಂಗಳೊಳಗೆ ಹೊಳಲ್ಕೆರೆ ತಾಲ್ಲೂಕು ಹಾಗೂ ಚಿತ್ರದುರ್ಗ ಜಿಲ್ಲೆಗೆ ಅಪ್ಪರ್‌ ಭದ್ರಾದಿಂದ ನೀರು ಹರಿಯುವುದರಲ್ಲಿ ಸಂಶಯವಿಲ್ಲವೆoದು ಹೊಳಲ್ಕೆರೆ ಶಾಸಕ ಡಾ.ಎಂ.ಚoದ್ರಪ್ಪ ಭರವಸೆ ನೀಡಿದರು.

ಚಿಕ್ಕಮಗಳೂರು ಜಿಲ್ಲೆ ಲಕ್ಕವಳ್ಳಿ ಬಳಿ ಭದ್ರಾ ಜಲಾಶಯಕ್ಕೆ ರೈತರು ಮತ್ತು ಅಪಾರ ಕಾರ್ಯಕರ್ತರೊಂದಿಗೆ ತೆರಳಿ ಭಾನುವಾರ ಬಾಗಿನ ಸಮರ್ಪಿಸಿ ಮಾತನಾಡಿದರು.

ಹೊಳಲ್ಕೆರೆ ತಾಲ್ಲೂಕಿನ ೩೭ ಕೆರೆಗಳಿಗೆ ಹಾಗೂ ಚಿತ್ರದುರ್ಗ ಜಿಲ್ಲೆಗೆ ಇಲ್ಲಿಂದ ನೀರು ಹರಿಯಲಿದೆ. ಇದರಿಂದ ರೈತರ ಬಹುದಿನಗಳ ಕನಸು ನನಸಾಗಲಿದೆ. ರಾಜ್ಯದ ಹದಿಮೂರು ಜಿಲ್ಲೆಗಳಲ್ಲಿ ಬರಗಾಲವಿದೆ. ಇನ್ನು ೧೨೦ ಮೀಟರ್ ಕಾಲುವೆ ಕಾಮಗಾರಿ ಪೂರ್ಣಗೊಂಡರೆ ಹೊಳಲ್ಕೆರೆ ಲೆಫ್ಟ್ ಕೆನಾಲ್‌ಗೆ ನೀರು ಬರುತ್ತದೆ. ಮುಂದೆ ಪಾವಗಡದವರೆಗೂ ನೀರು ಹರಿಯುತ್ತದೆ ಎಂದು ಹೇಳಿದರು.

ಚಿಕ್ಕಮಗಳೂರು ಭಾಗದ ರೈತರು ಅಡ್ಡಿಪಡಿಸುತ್ತಿರುವ ಪರಿಣಾಮವಾಗಿ ಕಾಮಗಾರಿಯಲ್ಲಿ ಸ್ವಲ್ಪ ತಡವಾಗಿದೆ. ಕೋರ್ಟ್ನಲ್ಲಿ ಕೇಸಿದೆ. ಎಲ್ಲವನ್ನು ಕಾನೂನಾತ್ಮಕವಾಗಿ ಬಗೆಹರಿಸಿಕೊಳ್ಳೋಣ ಎಂದು ತರಿಕೆರೆ ಶಾಸಕ ಶ್ರೀನಿವಾಸ್ ಮಾತು ಕೊಟ್ಟಿದ್ದಾರೆ. ಹಾಗಾಗಿ ರೈತರು ನಿರಾಸೆಯಾಗುವುದು ಬೇಡ.

ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಿ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಗಮನಕ್ಕೆ ತರುತ್ತೇನೆ. ಕಳೆದ ವಿಧಾನಸಭೆ ಅಧಿವೇಶನದಲ್ಲಿಯೂ ನಮ್ಮ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದಾರೆAದಿದ್ದಕ್ಕೆ ರಾಜ್ಯ ಸರ್ಕಾರ ಸ್ಪಂದಿಸಿದೆ. ರೈತರ ಪರವಾಗಿರುವ ಈ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಬಾರದು. ಹಣ ನೀಡಿ ಚಿನ್ನ ಖರೀಧಿಸಬಹುದು.

ಆದರೆ ನೀರು ಸಿಗುವುದು ಕಷ್ಟವಾಗಿದೆ. ಯಾವಾಗ ನೀರು ಬರುತ್ತದೋ ಎಂದು ರೈತರು ಕಾಯುತ್ತಿದ್ದಾರೆ. ೧೨೦ ಮೀಟರ್ ಚಾನಲ್ ಆದರೆ ಗಂಗಸಮುದ್ರ ಕೆರೆಗೆ ನೀರು ಬರುತ್ತದೆ. ಅಲ್ಲಿಂದ ಹೊಳಲ್ಕೆರೆ ತಾಲ್ಲೂಕಿನ ೩೭ ಕೆರೆಗಳಿಗೂ ನೀರು ಸೇರುತ್ತದೆ ಎಂದರು.

ಹೊಳಲ್ಕೆರೆ ಬಿಜೆಪಿ. ಮಂಡಲ ಅಧ್ಯಕ್ಷ ನಾರದಮುನಿ ವಸಂತಕುಮಾರ್, ರೈತ ಮುಖಂಡರುಗಳಾದ ಬಸ್ತಿಹಳ್ಳಿ ಸುರೇಶ್‌ಬಾಬು, ಮಂಜುನಾಥ್, ಚಿತ್ರಹಳ್ಳಿ ಲವಕುಮಾರ್

ನಾಗರಾಜ್, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಶಿವಕುಮಾರ್, ಯಶವಂತ್‌ಕುಮಾರ್, ಮಾರುತೇಶ್, ಶ್ರೀನಿವಾಸ್, ಮಹೇಶಣ್ಣ, ಕುಮಾರಣ್ಣ, ರೂಪ ಸುರೇಶ್, ನಾಗರಾಜ್‌ಬೇದ್ರೆ ಭದ್ರಾಮೇಲ್ದಂಡೆ ಮುಖ್ಯ ಇಂಜಿನಿಯರ್‌ಗಳಾದ ಎಫ್.ಹೆಚ್.ಲಮಾಣಿ, ಕವಿತಾ, ಬಾರಿಕರ್ ಚಂದ್ರಪ್ಪ,ನಾಗರಾಜ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ