Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಸರ್ಕಾರದ "ಸರ್ಕಾರಿ ಪ್ರಾಯೋಜಿತ ಭೂಹಗರಣ"ದ ವಿರುದ್ಧ ಬಿಡದಿ ರೈತರ ಆಕ್ರೋಶ:

Advertisement
Advertisement

 ಚಂದ್ರವಳ್ಳಿ ನ್ಯೂಸ್, ರಾಮನಗರ:
ಬಿಡದಿಯ ಫಲವತ್ತಾದ ಕೃಷಿ ಭೂಮಿಯನ್ನು ರಿಯಲ್ ಎಸ್ಟೇಟ್ ದಂಧೆಕೋರರಿಗೆ ಒಪ್ಪಿಸಲು ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿ ಧೋರಣೆ ತಳೆದಿದೆ ಎಂದು ಆರೋಪಿಸಿ ಬಿಡದಿಯ ನೂರಾರು ರೈತರು ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

​ರಾಜ್ಯ ಸರ್ಕಾರದ ಈ ನೀತಿಯನ್ನು "ಸರ್ಕಾರಿ ಪ್ರಾಯೋಜಿತ ಭೂಹಗರಣ" ಎಂದು ಕರೆದಿರುವ ರೈತರು, "ನಮ್ಮ ಭೂಮಿ, ನಮ್ಮ ಹಕ್ಕು" ಎಂಬ ಘೋಷಣೆಯೊಂದಿಗೆ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರಿಗೆ ನೇರವಾಗಿ ಪತ್ರ ಬರೆಯುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

​ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಜನಪರ ಹೋರಾಟದ ಕರೆಗೆ ಬಿಡದಿ ಭಾಗದ ರೈತರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಸರ್ಕಾರದ ವಿರುದ್ಧ ಬೃಹತ್ ಹೋರಾಟದ ಮುನ್ಸೂಚನೆ ಸಿಕ್ಕಿದೆ.

​ರಾಜ್ಯ ಸರ್ಕಾರಕ್ಕೆ ಜೆಡಿಎಸ್ ಕೇಳಿರುವ ನೇರ ಪ್ರಶ್ನೆಗಳು:
​ಬಡವರ ವಿರೋಧಿ ನೀತಿ ಯಾರ ಹಿತಕ್ಕಾಗಿ
?
ಭೂಸ್ವಾಧೀನದಿಂದಾಗಿ ಬೀದಿಗೆ ಬೀಳುತ್ತಿರುವವರಲ್ಲಿ ಶೇಕಡಾ
80 ರಷ್ಟು ಮಂದಿ ಸಣ್ಣ ಹಿಡುವಳಿದಾರರು, ದಲಿತರು ಹಾಗೂ ಹಿಂದುಳಿದ ವರ್ಗದವರಾಗಿದ್ದಾರೆ. ಇಂತಹ ಬಡ ರೈತರ ಹಕ್ಕನ್ನು ಕಸಿಯುತ್ತಿರುವುದು ಯಾರ ಹಿತಾಸಕ್ತಿ ಕಾಯಲು ಎಂದು ಜೆಡಿಎಸ್ ಪ್ರಶ್ನಿಸಿದೆ.

​ಕಾನೂನು ಉಲ್ಲಂಘಿಸಿ ಏಕಪಕ್ಷೀಯ ಅಧಿಸೂಚನೆ ಏಕೆ?
2013ರ ಭೂಸ್ವಾಧೀನ ಕಾಯ್ದೆಯನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ. ಸಾರ್ವಜನಿಕರಿಂದ ಯಾವುದೇ ಅಹವಾಲು ಆಲಿಸದೇ, ಕನಿಷ್ಠ ರೈತರ ಒಪ್ಪಿಗೆಯನ್ನೂ ಪಡೆಯದೇ ಸರ್ಕಾರ ಏಕಪಕ್ಷೀಯವಾಗಿ ಅಧಿಸೂಚನೆ ಹೊರಡಿಸಿರುವುದರ ಹಿಂದಿನ ಮರ್ಮವೇನು ಎಂದು ತರಾಟೆಗೆ ತೆಗೆದುಕೊಂಡಿದೆ.

33,000 ಕೋಟಿ ದಂಧೆಯ ಲಾಭ ಯಾರಿಗೆ?
ಖುದ್ದು ಆರ್ಥಿಕ ಇಲಾಖೆಯೇ ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರೂ
, ಹಡ್ಕೋ ಸಂಸ್ಥೆಯಿಂದ ಸಾವಿರಾರು ಕೋಟಿ ಸಾಲ ಪಡೆದು ರೈತರ ಜಮೀನು ಕಿತ್ತುಕೊಳ್ಳಲಾಗುತ್ತಿದೆ. ಈ ರೀತಿ ರೈತರ ಜಮೀನನ್ನು ಕಾರ್ಪೊರೇಟ್‌ಸಂಸ್ಥೆಗಳಿಗೆ ಕೋಟ್ಯಂತರ ರೂಪಾಯಿಗೆ ಮಾರಾಟ ಮಾಡುವ ಸಂಚು ಯಾರಿಗೆ ಲಾಭ ಮಾಡಿಕೊಡಲು ರೂಪಿಸಲಾಗಿದೆ ಎಂದು ಜೆಡಿಎಸ್ ನೇರವಾಗಿ ಸವಾಲು ಹಾಕಿದೆ.

​ಜೆಡಿಎಸ್ ಕಠಿಣ ನಿಲುವು:
"ರೈತರನ್ನು ಬಲವಂತವಾಗಿ ಒಕ್ಕಲೆಬ್ಬಿಸಿ, ಅವರ ಒಪ್ಪಿಗೆಯಿಲ್ಲದೆ ಒಂದು ಇಂಚು ಭೂಮಿಯನ್ನೂ ಮುಟ್ಟಲು ನಾವು ಬಿಡುವುದಿಲ್ಲ. ಅನ್ನ ನೀಡುವ ರೈತರಿಗೆ ಸಂಪೂರ್ಣ ನ್ಯಾಯ ಸಿಗುವವರೆಗೂ ಜೆಡಿಎಸ್ ಪಕ್ಷ ಈ ಬಿಡದಿ ಟೌನ್‌ಶಿಪ್‌ಯೋಜನೆ ವಿರುದ್ಧ ಅವಿರತವಾಗಿ ಹೋರಾಟ ನಡೆಸಲಿದೆ."

​ಬಿಡದಿ ಟೌನ್‌ಶಿಪ್‌ಹೆಸರಿನಲ್ಲಿ ನಡೆಯುತ್ತಿರುವ ಈ ಭೂಸ್ವಾಧೀನ ಪ್ರಕ್ರಿಯೆ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದ್ದು, ಜೆಡಿಎಸ್ ಹಾಗೂ ರೈತರ ಜಂಟಿ ಹೋರಾಟ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ರಾಮೀಣ ಪತ್ರಕರ್ತರ ಬಸ್ ಪಾಸ್, ಮಾಧ್ಯಮ ಸಂಜೀವಿನಿ ಯೋಜನೆ ಶೀಘ್ರ ಜಾರಿಗೆ ಕೆಯುಡಬ್ಲ್ಯೂಜೆ ಆಗ್ರಹಜೂನ್ 20ರಂದು ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮೂತ್ರಕೋಶ ತಪಾಸಣೆಟಿ. ಎಂ. ಸಿ. ಬ್ಯಾಂಕ್ ಸರ್ವ ಸದಸ್ಯರ ಸಭೆದೊಡ್ಡಬಳ್ಳಾಪುರ ತಿರುವಣ್ಣ ಮಲೈ ಮಾರ್ಗದ ಕೆಎಸ್ಆರ್ ಟಿಸಿ ಸೇವೆ ಮುಂದುವರೆಸಲು ಒತ್ತಾಯಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿಗಳಿಂದ ಗೌರವ ಪುರಸ್ಕಾರ"ಸಿಎಂ ಆದ ಮೇಲಾದರೂ ನೀಲಿ ಚಿತ್ರ, ಪೋಸ್ಟರ್ ಮಾಡೋದು ಬಿಡ್ತಾರೆ ಅಂದ್ಕೊಂಡಿದ್ದೆ" – ಡಿಕೆಶಿ ವಿರುದ್ಧ ಹೆಚ್‌ಡಿಕೆ ಬಾಂಬ್!ಹಿರಿಯೂರಿನಲ್ಲಿ ರೈತರ ಕುಂದುಕೊರತೆ ಸಭೆ: ವಿವಿಧ ಇಲಾಖೆಗಳಿಂದ ಸ್ಥಳದಲ್ಲೇ ಪರಿಹಾರಮಧ್ಯರಾತ್ರಿ ಸ್ನೇಹಿತನಿಗೆ ಕರೆ ಮಾಡಿ ಪಿಎಸ್‌ಐ ಬಸವರಾಜ ಹೆರೂರ್ ಆತ್ಮಹತ್ಯೆ!ವಿಧಾನ ಪರಿಷತ್ ಚುನಾವಣೆ ತಲ್ಲಣ; ಕ್ರಾಸ್ ವೋಟಿಂಗ್ ಭೀತಿಯಲ್ಲಿ ಕಾಂಗ್ರೆಸ್ ಶಾಸಕರುಪಿಎಚ್‌ಡಿ ವಿದ್ಯಾರ್ಥಿನಿ ಲೈಂಗಿಕ ಸಂಪರ್ಕ; ಪ್ರಾಧ್ಯಾಪಕ ದೇವರಾಜನ್ ಅಮಾನತು