Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡದಿ ಟೌನ್‌ಶಿಪ್ ಯೋಜನೆ, ಡಿಕೆಶಿ ವಿರುದ್ಧ ಜಾರಕಿಹೊಳಿ ಅಸಮಾಧಾನ, ಯೋಜನೆ ಕೈಬಿಡಲು ಒತ್ತಾಯ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಮನಗರ ಜಿಲ್ಲೆಯ ಬಿಡದಿ ಸುತ್ತಮುತ್ತಲು ಉದ್ದೇಶಿತ ಹೈಟೆಕ್ ಟೌನ್‌ಶಿಪ್ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಈಗ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಒಳಗೇ ತೀವ್ರ ಅಪಸ್ವರ ಎದ್ದಿದೆ. ಈ ಯೋಜನೆ ರೈತ ವಿರೋಧಿ ಮತ್ತು ಜನ ವಿರೋಧಿಯಾಗಿದ್ದು, ಸರ್ಕಾರಕ್ಕೆ ಭಾರಿ ಹೊರೆಯಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆತಂಕ ವ್ಯಕ್ತಪಡಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

​ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಈ ಯೋಜನೆಗೆ ಸ್ವಪಕ್ಷದ ಸಚಿವರಿಂದಲೇ ವಿರೋಧ ವ್ಯಕ್ತವಾಗಿರುವುದು ಸರ್ಕಾರಕ್ಕೆ ತೀವ್ರ ಮುಜುಗರ ತಂದಿಟ್ಟಿದೆ.

​ರೈತರ ಸಮಾಧಿಯ ಮೇಲೆ ರಿಯಲ್ ಎಸ್ಟೇಟ್ ವ್ಯವಹಾರ?:
​ಬಿಡದಿ ಸುತ್ತಮುತ್ತಲಿನ ಅತ್ಯಂತ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಂಡು ಟೌನ್‌ಶಿಪ್ ನಿರ್ಮಿಸಲು ಹೊರಟಿರುವ ಡಿ.ಕೆ. ಶಿವಕುಮಾರ್ ಅವರ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ನಾಡಿನ ಅನ್ನದಾತರ ಹಿತರಕ್ಷಣೆ ಮಾಡುವುದನ್ನು ಬಿಟ್ಟು, ತಮ್ಮ ರಾಜಕೀಯ ಸ್ವಾರ್ಥ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರಕ್ಕಾಗಿ ಈ ಯೋಜನೆಗೆ ಕೈಹಾಕಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

​"ಫಲವತ್ತಾದ ಕೃಷಿ ಭೂಮಿಯಲ್ಲಿ ಟೌನ್‌ಶಿಪ್ ನಿರ್ಮಾಣ ಮಾಡುವುದು ರೈತರಿಗೆ ಬರೆಯುವ ಮರಣಶಾಸನವಾಗಿದೆ. ಯಾವುದೋ ಒಂದು ಸ್ಕೀಂ ಮಾಡಲು ಹೋಗಿ ಜನರಿಗೆ ಮತ್ತು ಸರ್ಕಾರಕ್ಕೆ ಧಕ್ಕೆ ತರುವುದು ಬೇಡ ಎಂಬ ಸತ್ಯ ಈಗ ಕಾಂಗ್ರೆಸ್ ಸಚಿವರಿಗೇ ಅರ್ಥವಾಗಿದೆ."

​450 ದಿನಗಳ ಮೀರಿದ ರೈತರ ಹೋರಾಟ:
​ಬಿಡದಿ ಸುತ್ತಮುತ್ತಲ ಹಳ್ಳಿಗಳ ರೈತರು ತಮ್ಮ ಭೂಮಿಯನ್ನು ಬಿಟ್ಟುಕೊಡಲು ಯಾವುದೇ ಕಾರಣಕ್ಕೂ ಸಿದ್ಧರಿಲ್ಲ. "ನಮ್ಮ ಭೂಮಿ
, ನಮ್ಮ ಹಕ್ಕು" ಹಾಗೂ "ಟೌನ್‌ಶಿಪ್ ಬೇಡವೇ ಬೇಡ" ಎಂದು ಆಗ್ರಹಿಸಿ ಕಳೆದ 450ಕ್ಕೂ ಹೆಚ್ಚು ದಿನಗಳಿಂದ ರೈತರು ನಿರಂತರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

​ಈ ಹಿಂದೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಹ ಈ ಯೋಜನೆಯು ರೈತರ ಬದುಕನ್ನು ಬೀದಿಗೆ ತಳ್ಳಲಿದೆ ಎಂದು ತೀವ್ರವಾಗಿ ವಿರೋಧಿಸಿದ್ದರು. ಈಗ ರೈತರ ಈ ಸುದೀರ್ಘ ಹೋರಾಟಕ್ಕೆ ಸ್ವತಃ ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಮತ್ತಷ್ಟು ಬಲ ನೀಡಿದಂತಾಗಿದೆ.

​​ಸ್ವಪಕ್ಷದಲ್ಲೇ ಆಕ್ರೋಶ: ಡಿಕೆಶಿ ನೇತೃತ್ವದ ಯೋಜನೆಗೆ ಸಚಿವ ಸತೀಶ್ ಜಾರಕಿಹೊಳಿ ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ.

​ರೈತರ ಆಕ್ರೋಶ: ಕೃಷಿ ಭೂಮಿ ಸ್ವಾಧೀನ ವಿರೋಧಿಸಿ 450ಕ್ಕೂ ಹೆಚ್ಚು ದಿನಗಳಿಂದ ಅನ್ನದಾತರ ಧರಣಿ ನಡೆಯುತ್ತಿದೆ. ​ಯೋಜನೆ ವಿರುದ್ಧ ಮೊದಲಿನಿಂದಲೂ ಧ್ವನಿ ಎತ್ತಿದ್ದ ಹೆಚ್.ಡಿ. ದೇವೇಗೌಡ ಹಾಗೂ ಹೆಚ್.ಡಿ. ಕುಮಾರಸ್ವಾಮಿ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ.

​ಸ್ವಪಕ್ಷದ ಸಚಿವರೇ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಬಹಿರಂಗವಾಗಿ ಆತಂಕ ವ್ಯಕ್ತಪಡಿಸಿರುವುದರಿಂದ, ರಾಜ್ಯ ಸರ್ಕಾರವು ಇನ್ನಾದರೂ ಎಚ್ಚೆತ್ತುಕೊಂಡು ಈ ವಿವಾದಿತ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಬಲವಾಗಿದೆ.

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
"ಕೆಲವರ ಮಾತು ಕೇಳಿ ಬಿಡದಿ ಟೌನ್‌ಶಿಪ್ ಕೈಬಿಡಲ್ಲ": ಸಚಿವ ಯತೀಂದ್ರಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಲು ಸಿಎಂ ಶಿವಕುಮಾರ್ ಸೂಚನೆಮಹಿಳೆಯರಿಗೆ ಉಚಿತ 'ಸ್ಮಾರ್ಟ್ ಕಾರ್ಡ್'; ಶೀಘ್ರದಲ್ಲೇ ಅಂತಿಮ ರೂಪುರೇಶೆ ಎಂದ ಸಚಿವ ಬೈರತಿ ಸುರೇಶ್ವಿಧಾನ ಪರಿಷತ್ ಚುನಾವಣೆ: ಕ್ರಾಸ್ ವೋಟಿಂಗ್ ಭೀತಿ; ಬಿಡದಿ ರೆಸಾರ್ಟ್‌ಗೆ ಕಾಂಗ್ರೆಸ್ ಶಾಸಕರು ಶಿಫ್ಟ್!ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಅತ್ಯಾಚಾರ; ಬಲವಂತದ ಮತಾಂತರಕ್ಕೆ ಯತ್ನ ಇಬ್ಬರ ಬಂಧನ"ಶ್ರೀರಾಮನೇ ಲೆಕ್ಕ ಕೊಡುವಾಗ ಆರ್‌ಎಸ್‌ಎಸ್ ಯಾಕೆ ಕೊಡಬಾರದು?": ಪ್ರಿಯಾಂಕ್ ಖರ್ಗೆ ನೇರ ಪ್ರಶ್ನೆದೂರು ದಾಖಲಾಗುವ ಮುನ್ನವೇ ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು! ಹೈಕೋರ್ಟ್ ಆಘಾತನಗರಾಭಿವೃದ್ಧಿ ಜವಾಬ್ದಾರಿ ವಹಿಸಿಕೊಂಡ ಕೃಷ್ಣಬೈರೇಗೌಡ; ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ 'ರಾಕೆಟ್ ಸೈನ್ಸ್' ಕ್ಲಾಸ್!ಮಹಜರು ವೇಳೆ ಪೊಲೀಸರ ಮೇಲೆಯೇ ಹಲ್ಲೆ; ಕೊಲೆ ಆರೋಪಿ ಮಧು ಕಾಲಿಗೆ ಬಿದ್ದಿತು ಗುಂಡೇಟು!ರೌಡಿಪಟ್ಟಿಯಿಂದ ಸೈಲೆಂಟ್ ಸುನೀಲ, ಒಂಟೆ ರೋಹಿತ್ ಮುಕ್ತಿ? ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರ ಸಜ್ಜು!