Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿಗೆ ಬಿಗ್ ಶಾಕ್: ವಿಜಯೇಂದ್ರಗೆ ಸತ್ಯಶೋಧನಾ ಸಮಿತಿ ಮಧ್ಯಂತರ ವರದಿ ಸಲ್ಲಿಕೆ!

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಕ್ರಾಸ್ ವೋಟಿಂಗ್(ಅಡ್ಡ ಮತದಾನ) ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೈಕಮಾಂಡ್ ಮಹತ್ವದ ಹೆಜ್ಜೆ ಇಟ್ಟಿದೆ.

ಸಿ.ಟಿ.ರವಿ ನೇತೃತ್ವದ ತ್ರಿಸದಸ್ಯ ಸತ್ಯಶೋಧನಾ ಸಮಿತಿಯು ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರನ್ನು ಭೇಟಿಯಾಗಿ, ತನ್ನ ಆಂತರಿಕ ತನಿಖೆಯ ಮಧ್ಯಂತರ ವರದಿಯನ್ನು ಸೀಲ್ಡ್ ಕವರ್‌ನಲ್ಲಿ ಸಲ್ಲಿಕೆ ಮಾಡಿದೆ.

ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ಕೇವಲ ನಾಲ್ಕೇ ದಿನಗಳಲ್ಲಿ ತನಿಖೆ ಮುಗಿಸಿರುವ ಸಮಿತಿಯು, ಒಟ್ಟು 3 ಪುಟಗಳ ಸುದೀರ್ಘ ವರದಿಯನ್ನು ಸಿದ್ಧಪಡಿಸಿ ಹಸ್ತಾಂತರಿಸಿದೆ.

ವರದಿಯ ಪ್ರಮುಖ ಹೈಲೈಟ್ಸ್:
ಸಿ.ಟಿ. ರವಿ, ಮಹೇಶ್ ಟೆಂಗಿನಕಾಯಿ ಹಾಗೂ ಎನ್. ಮಹೇಶ್ ಅವರನ್ನೊಳಗೊಂಡ ತ್ರಿಸದಸ್ಯ ಸಮಿತಿ ನೀಡಿರುವ ವರದಿಯ ಪ್ರಮುಖ ಅಂಶಗಳು ಇಲ್ಲಿವೆ.

12 ಮತಗಳ ಕ್ರಾಸ್ ವೋಟಿಂಗ್: ಎನ್‌ಡಿಎ (ಬಿಜೆಪಿ-ಜೆಡಿಎಸ್) ಮೈತ್ರಿಕೂಟದಿಂದ ಒಟ್ಟು 12 ಮತಗಳು ಅಡ್ಡ ಮತದಾನವಾಗಿವೆ.

ಬಿಜೆಪಿಗೆ ನಾಲ್ಕರ ಪೆಟ್ಟು: ಬಿಜೆಪಿಯಿಂದ ಒಟ್ಟು 4 ಮತಗಳು ಕೈತಪ್ಪಿವೆ. ಇದರಲ್ಲಿ 3 ಅಡ್ಡ ಮತಗಳಾಗಿದ್ದರೆ, 1 ಮತ ಅಸಿಂಧುವಾಗಿದೆ.

ಜೆಡಿಎಸ್‌ನಲ್ಲೂ ಭಾರಿ ಸೋರಿಕೆ: ಉಳಿದ ಬಹುಪಾಲು ಅಡ್ಡ ಮತಗಳು ಮೈತ್ರಿ ಪಕ್ಷವಾದ ಜೆಡಿಎಸ್‌ನಿಂದಲೇ ಚಲಾವಣೆಯಾಗಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಹೆಸರುಗಳು ಗೌಪ್ಯ: ವರದಿಯಲ್ಲಿ ಸದ್ಯಕ್ಕೆ ಅಡ್ಡ ಮತ ಚಲಾಯಿಸಿದ ಶಾಸಕರ ನಿಖರ ಹೆಸರುಗಳನ್ನು ಬಹಿರಂಗಪಡಿಸಿಲ್ಲ, ಕೇವಲ ಸಂಖ್ಯೆಯನ್ನು ಮಾತ್ರ ಉಲ್ಲೇಖಿಸಲಾಗಿದೆ.

ಶಾಸಕರ ಮೇಲೆ ತೀವ್ರ ನಿಗಾ: ಸದ್ಯಕ್ಕೆ ತೀವ್ರ ಅನುಮಾನವಿರುವ ಶಾಸಕರ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಅವರ ಚಟುವಟಿಕೆಗಳ ಮೇಲೆ ಕಣ್ಣಿಡಲು ಸಮಿತಿ ಶಿಫಾರಸು ಮಾಡಿದೆ.

ಇದು ಕಾಂಗ್ರೆಸ್ ಅಭಿಮಾನದ ಮತಗಳಲ್ಲ: ಸಿ.ಟಿ. ರವಿ ಆಕ್ರೋಶ
ವರದಿ ಸಲ್ಲಿಕೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಮಿತಿ ಸಂಚಾಲಕ ಸಿ.ಟಿ. ರವಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

"ಇದು ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿ ನಡೆ. ಈ ಅಡ್ಡ ಮತಗಳು ಕಾಂಗ್ರೆಸ್ ಮೇಲಿನ ಅಭಿಮಾನದಿಂದ ಬಂದಿವೆ ಎಂದು ಅವರಾರೂ ಭ್ರಮಿಸಬೇಕಾಗಿಲ್ಲ. ಇವೆಲ್ಲವೂ ಅನೈತಿಕ ಕ್ರಾಸ್ ವೋಟಿಂಗ್. ಬೇರೆ ಚುನಾವಣೆಗಳಲ್ಲಿ ಕ್ರಾಸ್ ವೋಟಿಂಗ್ ಮಾಡುವ ಕಾಂಗ್ರೆಸ್‌ಗೆ ಇದನ್ನು ಪ್ರಶ್ನಿಸುವ ಯಾವುದೇ ನೈತಿಕತೆ ಇಲ್ಲ."
ಸಿ.ಟಿ ರವಿ, ಬಿಜೆಪಿ ನಾಯಕ.

ತನಿಖೆ ನಡೆದಿದ್ದು ಹೇಗೆ?:
ನಾಲ್ಕು ದಿನಗಳ ಕಾಲ ಸಮಿತಿಯ ಮೂವರೂ ಸದಸ್ಯರು ಒಮ್ಮತದಿಂದ ಈ ವರದಿ ಸಿದ್ಧಪಡಿಸಿದ್ದಾರೆ. ಅನುಮಾನಾಸ್ಪದವಾಗಿ ಕಂಡುಬಂದ ಶಾಸಕರ ಪಟ್ಟಿ ಮಾಡಿ, ಅವರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ. ಅಷ್ಟೇ ಅಲ್ಲದೆ ಅಭ್ಯರ್ಥಿಗಳು, ಜೆಡಿಎಸ್ ನಾಯಕರು, ಬಿಜೆಪಿ ಪ್ರಮುಖರು ಹಾಗೂ ಸ್ಥಳೀಯ ಸಾಂದರ್ಭಿಕ ಸಾಕ್ಷ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಆಂತರಿಕ ವರದಿ ಸಿದ್ಧಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಮುಂದಿನ ನಡೆ ಏನು?:
ಇದು ಪಕ್ಷದ ಆಂತರಿಕ ತನಿಖಾ ವರದಿಯಾಗಿರುವುದರಿಂದ ಸದ್ಯಕ್ಕೆ ಹೆಚ್ಚಿನ ಮಾಹಿತಿ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಸಮಿತಿ ಹೇಳಿದೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಈ ವರದಿಯನ್ನು ಮುಂದಿನ ಕ್ರಮಕ್ಕಾಗಿ ಹೈಕಮಾಂಡ್‌ಗೆ ರವಾನಿಸುವ ಸಾಧ್ಯತೆಯಿದೆ. ಬಿಜೆಪಿಯ ಮುಂಬರುವ ಕೋರ್ ಕಮಿಟಿ ಸಭೆಯಲ್ಲಿ ಈ ವರದಿಯ ಆಧಾರದ ಮೇಲೆ ಕ್ರಾಸ್ ವೋಟಿಂಗ್ ಮಾಡಿದ ಶಾಸಕರ ವಿರುದ್ಧ ಯಾವ ರೀತಿಯ ಶಿಸ್ತು ಕ್ರಮ ಕೈಗೊಳ್ಳಬೇಕು ಎಂಬುದನ್ನು ಅಂತಿಮಗೊಳಿಸಲಾಗುತ್ತದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾವಣ್ಯ ಕಾಲೇಜಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಜಿಕೆವಿಕೆಯಲ್ಲಿ ವೈವಿಧ್ಯಮಯ ‘ರೈತ ಸಂತೆ’: ಗೋಧಿ ಪಾಯಸ, ಬಟರ್ ಫ್ರೂಟ್ ಹಾಗೂ ಅವರೆಕಾಳು ಸಿಪ್ಪೆ ತೆಗೆಯುವ ಯಂತ್ರಕ್ಕೆ ಭಾರಿ ಬೇಡಿಕೆಜುಲೈ 10 ರಿಂದ 12ರವರೆಗೆ ಬೆಂಗಳೂರಿನ ಜಿಕೆವಿಕೆಯಲ್ಲಿ “ಸಸ್ಯ ಸಂತೆ” ಆಯೋಜನೆ, ಮಳಿಗೆ ಕಾಯ್ದಿರಿಸಲು ಅವಕಾಶಉಪರಾಷ್ಟ್ರಪತಿ ರಾಧಾಕೃಷ್ಣನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‘ಕಲ್ಲಿನ ಕೋಟೆ ಕಾವ್ಯೋತ್ಸವ’ ವೈಭವ: ಆರು ಪ್ರಮುಖ ಕೃತಿಗಳ ಲೋಕಾರ್ಪಣೆ, ಕವಿಗೋಷ್ಠಿ ಯಶಸ್ವಿ!ಜೂನ್ 29ರಂದು ಜಿ.ಎಸ್.ಉಜ್ಜನಪ್ಪ ಅವರ ನೆನಪಿನಲ್ಲಿ “ಸ್ವಾತಂತ್ರ್ಯದ ಓಟ” ನಾಟಕ ಪ್ರದರ್ಶನಕೆಂಪೇಗೌಡರ ದೂರದೃಷ್ಟಿ ಆಡಳಿತಗಾರರಿಗೆ ಆದರ್ಶ- ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ50 ವರ್ಷಗಳ ಬಳಿಕ ಒಂದಾದ ಬಾಲ್ಯದ ಗೆಳೆಯರು: ಕಣ್ಣಾಲಿಗಳು ತುಂಬಿ ಬಂದ ಚಿನ್ಮುಲ್ಲಾದ್ರಿ ಶಾಲೆಯ ‘ಸುವರ್ಣ ಸಂಭ್ರಮ’!ಸಿಎಂಗೆ ಸೋಮಣ್ಣ ಕಿವಿಮಾತು, ವಿಜಯೇಂದ್ರಗೆ ನಿರಾಣಿ ಸಲಹೆ: ದಾವಣಗೆರೆಯಲ್ಲಿ ಬಿಜೆಪಿ ನಾಯಕರ ಭರ್ಜರಿ ಬ್ಯಾಟಿಂಗ್!ಬೆಂಗಳೂರಿಗೆ ಸಿಕ್ತು ಹೊಸ ಮೆಗಾ ಕನೆಕ್ಟಿವಿಟಿ: ಎಸ್.ಎಂ. ಕೃಷ್ಣ ಹೆಸರಿನ ಭವ್ಯ 'ದಶಪಥ ರಸ್ತೆ' ಲೋಕಾರ್ಪಣೆ!