ಚಂದ್ರವಳ್ಳಿ ನ್ಯೂಸ್,ವಿಜಯನಗರ:
ಬೈಕ್ಗೆ ಅಡ್ಡ ಬಂದ ಹಂದಿ ತಪ್ಪಿಸಲು ಹೋಗಿ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲೂಕಿನ ಕಮಲಾಪುರದ ವಿವಿ ರಸ್ತೆಯ ಹಾಸ್ಟೆಲ್ ಬಳಿ ನಡೆದಿದೆ.
ಮೃತ ಯುವಕನನ್ನು ಕಮಲಾಪುರ ನಿವಾಸಿ ಉಮಾಪತಿ (35) ಎಂದು ಗುರುತಿಸಲಾಗಿದೆ. ಖಾಸಗಿ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಉಮಾಪತಿ, ರಾತ್ರಿ ಕರ್ತವ್ಯ ಮುಗಿಸಿಕೊಂಡು ಮನೆಗೆ ವಾಪಸ್ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ವಿವಿ ರಸ್ತೆಯ ಹಾಸ್ಟೆಲ್ ಬಳಿ ಬೈಕ್ನಲ್ಲಿ ತೆರಳುತ್ತಿದ್ದಾಗ ಏಕಾಏಕಿ ಹಂದಿಯೊಂದು ಅಡ್ಡ ಬಂದಿದೆ. ಹಂದಿಯನ್ನು ತಪ್ಪಿಸಲು ಪ್ರಯತ್ನಿಸಿದ ಯುವಕನೇ ಸಾವನ್ನಪ್ಪಿರುವ ಘಟನೆ ಜರುಗಿದೆ.



