Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮುದ್ರ ಕಳೆಯಿಂದ ಜೈವಿಕ ಇಂಧನ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕೋಶ ಮತ್ತು ಅಣು ತಂತ್ರಜ್ಞಾನ  ಸಂಶೋಧನಾ
, ಅಭಿವೃದ್ಧಿ ಕೇಂದ್ರ(C-CAMP)ದ ಸಹಕಾರದ ಸ್ಟಾರ್ಟ್‌ಅಪ್ ಆದ ಸೀ6 ಎನರ್ಜಿ( Sea6 Energy ), ಸಮುದ್ರ ಕಳೆ ಜೀವರಾಶಿಗಳಿಂದ ಜೈವಿಕ ಇಂಧನ ಮತ್ತು ರಾಸಾಯನಿಕಗಳನ್ನು ಅಭಿವೃದ್ಧಿಪಡಿಸಲು HPCL ಗ್ರೀನ್ R&D ಸೆಂಟರ್ ( HPGRDC) ಜೊತೆ ಮಹತ್ವದ ಒಪ್ಪಂದವನ್ನು (MoU) ಮಾಡಿಕೊಂಡಿದೆ.

ಭಾರತವು ಭಾರೀ ಪ್ರಮಾಣದ ಕಚ್ಚಾ ತೈಲವನ್ನು (80%) ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಇದಕ್ಕೆ ಪರಿಹಾರವಾಗಿ ಶಾಶ್ವತ ಮತ್ತು ಪರಿಸರ ಸ್ನೇಹಿ ಇಂಧನ ಮೂಲಗಳನ್ನು ಬಳಕೆ ಮಾಡಲು ಹೊಸ ಮಾರ್ಗಗಳನ್ನು ಹುಡುಕುವ ಅಗತ್ಯವಿದೆ.

ಸೀ6 ಎನರ್ಜಿ( Sea6 Energy )ಯ ಸುಧಾರಿತ ಸಮುದ್ರ ಕಳೆ ಕೃಷಿ ವಿಧಾನವು ಕೃಷಿ ಭೂಮಿಯನ್ನು ಬಳಸದೆಯೇವ್ಯಾಪಕವಾಗಿ ವಿಸ್ತರಿಸಬಹುದಾದ ಮತ್ತು ಪರಿಸರ ಸ್ನೇಹಿ ಪರಿಹಾರವನ್ನು ಒದಗಿಸುತ್ತದೆ.

ಇದರಿಂದ ಪ್ರಕೃತಿಗೆ ಹಾನಿ ಮಾಡದ, ಮಾಲಿನ್ಯ ರಹಿತ ಇಂಧನದ  ಹೊಸ ಪರಿಹಾರಗಳತ್ತ ಕೆಲಸ ಮಾಡುವ ಸ್ಟಾರ್ಟಪ್‌ಗಳಿಗೆ ಸರ್ಕಾರದಿಂದ ಸಿಗುವ ಬಲವಾದ ಬೆಂಬಲವನ್ನು ಎತ್ತಿ ತೋರಿಸುತ್ತದೆ. ಕರ್ನಾಟಕ ಸರ್ಕಾರವು ಸ್ಟಾರ್ಟ್‌ಅಪ್‌ಗಳಿಗೆ ಅವಶ್ಯಕವಾದ ಸಂಪನ್ಮೂಲಗಳನ್ನು,

ಮಾರ್ಗದರ್ಶನವನ್ನು ಮತ್ತು ಬೆಂಬಲವನ್ನು ಒದಗಿಸಿ, ಅವುಗಳ ಬೆಳವಣಿಗೆಯನ್ನು ಉತ್ತೇಜಿಸಿ, ಮತ್ತು ಅವುಗಳ ಸಾಮರ್ಥ್ಯವನ್ನು ಹೆಚ್ಚುಗೊಳಿಸಲು ಸಹಾಯ ಮಾಡುವ ದೃಢಸಂಕಲ್ಪ ಕೈಕೊಂಡಿದೆ. ಈ ರೀತಿಯ ಬೆಂಬಲವು ರಾಷ್ಟ್ರೀಯ ಆರ್ಥಿಕ ಬೆಳವಣಿಗೆಯನ್ನುಉತ್ತೇಜಿಸಲಿದೆ. ಇದು ಕರ್ನಾಟಕ ಸರ್ಕಾರದ ಶಾಶ್ವತ ಇಂಧನ ಬಳಕೆಗೆ ಮತ್ತು ಪರಿಸರ ಸಂರಕ್ಷಣೆಗೆ ಬದ್ಧತೆಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ತಿಳಿಸಿದೆ.

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ