Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಶ್ರಿ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್‌ರವರ ಜನ್ಮದಿನ ಆಚರಣೆ  

Advertisement
Advertisement

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ರಾಜ್ಯದ ಯಾವ ಮುಖ್ಯಮಂತ್ರಿಗಳು ಇದುವರೆವಿಗೂ ಮಾಡದಂತ ಅಪರೂಪದ ಚರಿತ್ರಾರ್ಹ ಕೆಲಸವನ್ನು ರಾಜಶ್ರಿ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಮಾಡಿರುವುದರಿಂದ ಇಂದಿಗೂ ಜನಮಾನಸದಲ್ಲಿ ಉಳಿದಿದ್ದಾರೆಂದು ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ನಿವೃತ್ತ ಪ್ರಾಚಾರ್ಯ ಜೆ.ಯಾದವರೆಡ್ಡಿ ಗುಣಗಾನ ಮಾಡಿದರು.

ಪ್ರವಾಸಿ ಮಂದಿರದಲ್ಲಿ ನಡೆದ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್‌ರವರ ೧೪೨ ನೇ ಜನ್ಮದಿನದ ಅಂಗವಾಗಿ ಅವರ ಫೋಟೋಗೆ ಪುಷ್ಪರ್ಚಾನೆ ಸಲ್ಲಿಸಿ ಮಾತನಾಡಿದರು.

ಶೇ.೭೨ ಪರ್ಸೆಂಟ್ ಮೀಸಲಾತಿಯನ್ನು ಮೊಟ್ಟ ಮೊದಲು ಕೊಟ್ಟವರು ಮೈಸೂರು ಮಹಾರಾಜರು. ಸಾಮಾಜಿಕ ಸಮಸ್ಯೆ ಚೆನ್ನಾಗಿ ಅರ್ಥಮಾಡಿಕೊಂಡಿದ್ದರಿಂದ ಮಿಲ್ಲರ್ ಆಯೋಗ ರಚಿಸಿದರು. ಇದರಿಂದ ಭಾರತದಲ್ಲಿ ಸಂಚಲನ ಮೂಡಿಸಿತು. ಎಲ್ಲಾ ಜಾತಿಯವರು ಒಟ್ಟಿಗೆ ಕುಳಿತು ಪಾಠ ಕೇಳುವ ವ್ಯವಸ್ಥೆ ಜಾರಿಗೆ ತಂದರು. ಚಾತುರ್ವಣವನ್ನು ಬುಡ ಸಮೇತ ಕಿತ್ತು ಹಾಕುವ ಸಾಹಸ ಮಾಡಿದವರು ಮೈಸೂರು ಮಹಾರಾಜರು ಎಂದು ಹೇಳಿದರು.

ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್‌ರವರು ಮೀಸಲಾತಿಯನ್ನು ಜಾರಿಗೆ ತಂದ ಪರಿಣಾಮ ಹಿಂದುಳಿದವರು ಸೇರಿದಂತೆ ಎಲ್ಲಾ ಜಾತಿಯವರು ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಮುಂದೆ ಬರಲು ಸಾಧ್ಯವಾಯಿತು. ಹಿರಿಯೂರಿನಲ್ಲಿರುವ ವಾಣಿವಿಲಾಸಸಾಗರವನ್ನು ಕಟ್ಟಿಸಿದವರು ಮೈಸೂರು ಮಹಾರಾಜರು, ವಿಶ್ವವಿದ್ಯಾನಿಲಯಗಳು, ಮೈಸೂರು ಲ್ಯಾಂಪ್ಸ್, ಡ್ಯಾಂಗಳು ಆಗಿದ್ದು, ಇವರ ಕಾಲದಲ್ಲಿ. ಇಂತಹ ಜನೋಪಕಾರಿ ಕೆಲಸಗಳನ್ನು ಮಾಡಿರುವ ಮೈಸೂರು ಮಹಾರಾಜರನ್ನು ಪ್ರತಿಯೊಬ್ಬರು ನೆನಪು ಮಾಡಿಕೊಳ್ಳಲೇಬೇಕು. ಅವರ ಕಾಲದಲ್ಲಿದ್ದ ಹದಿಮೂರು ಜಿಲ್ಲೆಗಳಲ್ಲಿ ಅನೇಕ ಅಭಿವೃದ್ದಿಯಾಗಿವೆ. ಈಗಿನ ಮುಖ್ಯಮಂತ್ರಿಗಳು ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್‌ರವರನ್ನು ಅನುಕರಣೆ ಮಾಡಬೇಕೆಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮೈಸೂರು ಮಹಾರಾಜರು ನಾಡಿಗೆ ನೀಡಿರುವ ಕೊಡುಗೆಯನ್ನು ಪರಿಚಯಿಸಬೇಕು. ಸೌಲಭ್ಯಗಳಿಂದ ವಂಚಿತರಾದವರಿಗೆ ಮೊಟ್ಟ ಮೊದಲು ಮೀಸಲಾತಿ ಕೊಡಬೇಕೆಂದು ಆಲೋಚನೆ ಮಾಡಿದವರು ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಎನ್ನುವುದನ್ನು ಮರೆಯುವಂತಿಲ್ಲ. ಮಿಲ್ಲರ್ ಆಯೋಗವನ್ನು ವಿಶ್ವೇಶ್ವರಯ್ಯ ವಿರೋಧಿಸಿದಾಗ ಲೆಕ್ಕಿಸದೆ ಜಾರಿಗೆ ತಂದರು. ಚಿತ್ರದುರ್ಗದ ಸರ್‌ಖಾಜಿರವರು ಮೈಸೂರು ಮಹಾರಾಜರ ಆಸ್ಥಾನದಲ್ಲಿದ್ದ ಸಲಹಾ ಸಮಿತಿಯಲ್ಲಿದ್ದರು ಎನ್ನುವುದನ್ನು ನೆನಪಿಸಿಕೊಂಡರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿನಾಯಕ ಮಾತನಾಡಿ ಸಮಾಜ ಸುಧಾರಣೆ ಬಗ್ಗೆ ಅಪಾರವಾದ ಕಳಕಳಿ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್‌ರವರಲ್ಲಿದ್ದ ಕಾರಣಕ್ಕಾಗಿ ಸರ್ವರಿಗೂ ಸಮಪಾಲು, ಸಮಬಾಳು ಸಿಕ್ಕಿದೆ. ಮೂಢನಂಬಿಕೆ, ಅನಿಷ್ಟ ಪದ್ದತಿಗಳ ನಿರ್ಮೂಲನೆಗಾಗಿ ಧೃಢ ನಿರ್ಧಾರ ತೆಗೆದುಕೊಳ್ಳುತ್ತಿದ್ದರು. ಮಹಿಳೆಯರಿಗೂ ಮೊದಲು ಸಮಾನತೆ ಕೊಟ್ಟವರು ಮೈಸೂರು ಮಹಾರಾಜರು ಎನ್ನುವುದನ್ನು ಸ್ಮರಿಸಿದರು.

ಧಮನಿತರು ಕೂಡ ಸ್ವಾವಲಂಭಿಯಾಗಿ ಬದುಕಲು ಭೂಮಿಯನ್ನು ಹಂಚಿಕೆ ಮಾಡಿದರು. ಕೆರೆ ಕಟ್ಟೆ ಡ್ಯಾಂಗಳನ್ನು ಕಟ್ಟಿ ಸಕಲ ಜೀವರಾಶಿಗಳಿಗೂ ನೀರಿನ ದಾಹ ಇಂಗಿಸಿದರು. ಮೈಸೂರು ದಸರಾದಲ್ಲಿ ಮಹಾರಾಜರ ಸತ್ಕಾರ್ಯಗಳನ್ನು ನೋಡಬಹುದು ಎಂದರು.

ದಲಿತ ಮುಖಂಡ ಬಿ.ರಾಜಣ್ಣ ಮಾತನಾಡಿ ಮೈಸೂರು ಮಹಾರಾಜರು ಒಡವೆಗಳನ್ನು ಮಾರಿ ಡ್ಯಾಂಗಳನ್ನು ಕಟ್ಟಿಸಿ ಜನರಿಗೆ ಕುಡಿಯಲು ನೀರು ಕೊಟ್ಟಿದ್ದಾರೆ. ಮೇಲ್ಜಾತಿಯಿಂದ ಹಿಡಿದು ಕೆಳಸ್ಥರದ ಎಲ್ಲಾ ಜಾತಿಯವರಿಗೆ ಸಮಾನತೆ ಕೊಡಬೇಕೆಂಬ ದೂರದೃಷ್ಟಿ ಮೈಸೂರು ಮಹಾರಾಜರವರಲ್ಲಿತ್ತು ಎಂದು ಹೇಳಿದರು.

ಲೇಖಕ ಹೆಚ್.ಆನಂದ್‌ಕುಮಾರ್, ಎಸ್.ಲಕ್ಷ್ಮಿಕಾಂತ್, ಗ್ರಂಥಾಲಯಾಧಿಕಾರಿ ಬಸವರಾಜ್‌ಕೊಳ್ಳಿ ಇವರುಗಳು ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್‌ರವರ ಸಮಾಜಮುಖಿ ಕಾರ್ಯಗಳ ಕುರಿತು ಮಾತನಾಡಿದರು.

ಆಕಾಶವಾಣಿಯ ನವೀನ್ ಮಸ್ಕಲ್, ಹನುಮಂತಪ್ಪ ಗೋನೂರು, ಪಾಂಡುರಂಗಪ್ಪ, ರಘು, ರಾಮಣ್ಣ, ರಾಜೇಂದ್ರಪ್ರಸಾದ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಂಗಾರದ ಅಂಗಡಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; 5.76 ಲಕ್ಷ ರೂ. ಮೌಲ್ಯದ ಚಿನ್ನಾಬರಣ ವಶಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಗುರುರಕ್ಷೆ ನೀಡಿ ಗೌರವ, ಆಶೀರ್ವಾದಿಸಿದ ವೀರಶೈವ ಶಿವಾಚಾರ್ಯರುಕಾರ್ಮಿಕರ ರಕ್ಷಣಾ ಕಿಟ್ ವಿತರಣೆಯಲ್ಲಿ ನೂರಾರು ಕೋಟಿ ಹಗರಣ: ಜೆಡಿಎಸ್ ವಾಗ್ದಾಳಿ ‘ರೌಡಿ ನಿಗ್ರಹ ದಳ’ ರಚನೆ ರಾಜಕೀಯ ಗಿಮಿಕ್-ಅಶೋಕ್ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಕಾಯುತ್ತಿರುವೆ-ರಾಮಲಿಂಗಾರೆಡ್ಡಿಸಿಎಂ ಸಂಧಾನ ಯಶಸ್ವಿ, ಖಾತೆ ಹಂಚಿಕೆ ಬಿಕ್ಕಟ್ಟು ಸದ್ಯಕ್ಕೆ ಸುಖಾಂತ್ಯಖಾತೆಗಾಗಿ ಕಿತ್ತಾಟ, ವಿಪಕ್ಷಗಳ ನಾಟಕ: ಜನಪರ ಕಾರ್ಯದ ಆಧಾರದ ಮೇಲೆ ಖಾತೆ ಹಂಚಿಕೆಯಾಗಲಿಕೆ.ಎನ್ ರಾಜಣ್ಣ ಅವರನ್ನು ಸಚಿವ ಸಂಪುಟ ಸೇರ್ಪಡೆಗೆ ಪ್ರಾಮಾಣಿಕ ಪ್ರಯತ್ನಅಂಡಮಾನ್ ಕಡಲಾಚೆ ಪ್ರದೇಶದಲ್ಲಿ ಭಾರಿ ಪ್ರಮಾಣದ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆವಿಧಾನ ಪರಿಷತ್ ಗೆ 5ನೇ ಅಭ್ಯರ್ಥಿ ಹೆಸರು ಘೋಷಿಸಿದ ಕಾಂಗ್ರೆಸ್