Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಮತಗಳ್ಳತನ ವಿರುದ್ಧ 1.12 ಕೋಟಿ ಸಹಿ ಸಂಗ್ರಹ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮ್ಮ ಮತ- ನಮ್ಮ ಹಕ್ಕು! ನಮ್ಮ ಮತ- ನಮ್ಮ ಹಕ್ಕು! ಮತಗಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನ - ಕರ್ನಾಟಕದಲ್ಲಿ 1,12,41,000 ಸಹಿ ಸಂಗ್ರಹ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು, ರಾಜ್ಯದಲ್ಲಿ ನಡೆದ ವೋಟ್ ಚೋರಿ ಸಹಿ ಸಂಗ್ರಹಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.

ಪ್ರಜಾಪ್ರಭುತ್ವದ ಶಕ್ತಿಯಾದ ಮತವನ್ನು ಕದಿಯುವ ಪ್ರಯತ್ನಗಳ ವಿರುದ್ಧ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಕರ್ನಾಟಕದಿಂದಲೇ ಧ್ವನಿ ಎತ್ತಿದ್ದಾರೆ. ಮಹದೇವಪುರ, ಆಳಂದ ಮಾತ್ರವಲ್ಲದೆ ವ್ಯಾಪಕವಾಗಿ ಹೊರ ರಾಜ್ಯಗಳಲ್ಲಿಯೂ ಮತಗಳ್ಳತನ ಪ್ರಕರಣಗಳು ನಡೆದಿರುವ ಬಗ್ಗೆ ಸಾಕ್ಷಿಸಮೇತ ಮಾಹಿತಿ ನೀಡಿ, ಮತದಾರರ ಹಕ್ಕುಗಳ ಉಳಿವಿಗಾಗಿ ಹೋರಾಟ ಮುಂದುವರೆಸಿದ್ದಾರೆ.

ಈ ಹಿಂದೆ ಚಿಲುಮೆ ಸಂಸ್ಥೆಯನ್ನು ಬಳಸಿಕೊಂಡು ಯಾವ ರೀತಿಯಲ್ಲಿ ಮತದಾರರ ಮಾಹಿತಿ ಕಳ್ಳತನ ಮಾಡಲಾಯಿತು ಎಂಬುದು ರಾಜ್ಯದ ಜನರು ಗಮನಿಸಿದ್ದಾರೆ. ಆಳಂದ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಗೆ ಮುನ್ನ 6,018 ಮತಗಳನ್ನು ಅಳಿಸಲು ಪ್ರಯತ್ನ ನಡೆದಿತ್ತು. ಇದೇ ರೀತಿ ರಾಜಸ್ಥಾನ, ಮಹಾರಾಷ್ಟ್ರ ಮತ್ತು ಹರಿಯಾಣ ಸೇರಿದಂತೆ ಹಲವಾರು ಇತರ ರಾಜ್ಯಗಳಲ್ಲಿ ಅಕ್ರಮಗಳು ಕಂಡುಬಂದಿವೆ ಎಂದು ಡಿಸಿಎಂ ಅವರು ಆರೋಪಿಸಿದರು.

ಮತ ಕಳ್ಳತನ ತಡೆದು ಪ್ರಜಾಪ್ರಭುತ್ವ ಉಳಿಸಲು ಕರ್ನಾಟಕದಿಂದ ಧ್ವನಿ ಎತ್ತಿರುವ ರಾಹುಲ್‌ಗಾಂಧಿ ಅವರಿಗೆ ಕಾಂಗ್ರೆಸ್‌ಪಕ್ಷ ಸೇರಿದಂತೆ ಎಲ್ಲಾ ಸಾರ್ವಜನಿಕರು ಪಕ್ಷಬೇಧ ಮರೆತು ಪ್ರತಿಯೊಬ್ಬರು ಸಹಕಾರ ನೀಡಬೇಕಿದೆ.

ಮತದಾನದ ಹಕ್ಕಿನ ರಕ್ಷಣೆಗಾಗಿ ಸಹಿ ಸಂಗ್ರಹ ಅಭಿಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ನಾನು ಕೂಡ ಪಾಲ್ಗೊಂಡಿದ್ದೇವೆ. ವೋಟ್‌ಚೋರಿ ವಿರುದ್ಧದ ಸಹಿ ಸಂಗ್ರಹ ಅಭಿಯಾನದಲ್ಲಿ ರಾಜ್ಯದಲ್ಲಿ ಇದುವರೆಗೆ 1,12,41,000 ಮತದಾರರು ಸಹಿ ಮಾಡಿ ಅಭಿಯಾನಕ್ಕೆ ಕೈಜೋಡಿಸಿದ್ದಾರೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.


ಸಹಿ ಸಂಗ್ರಹಕ್ಕೆ ಸಂಬಂಧಿಸಿದ ದಾಖಲೆಗಳನ್ನು 10ನೇ ತಾರೀಖಿನಂದು ದೆಹಲಿಯ ಎಐಸಿಸಿ ಕಚೇರಿಗೆ ತೆಗೆದುಕೊಂಡು ಹೋಗಿ ಮಾಹಿತಿ ನೀಡಲಾಗುವುದು. ಮತಗಳ್ಳತನ ವಿರುದ್ಧ ರಾಮ್‌ಲೀಲಾ ಮೈದಾನದಲ್ಲಿ ಬೃಹತ್ ಸಭೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವದ ಉಳಿವಿಗಾಗಿ ಮತ ಕಳವು ವಿರುದ್ಧ ಅಭಿಯಾನದಲ್ಲಿ ಭಾಗಿಯಾದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಡಿಸಿಎಂ ಅವರು ತಿಳಿಸಿದರು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಮತಗಳ್ಳತನದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಶಿವಕುಮಾರ್ ಹೇಳಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ