Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಮಂಗಲದಲ್ಲಿ ಸ್ತನ್ಯಪಾನ ಅರಿವು ಕಾರ್ಯಕ್ರಮ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಐಮಂಗಲ ವ್ಯಾಪ್ತಿಯ ಅಂಗನವಾಡಿಗಳಲ್ಲಿ
ವಿಶ್ವ ಸ್ತನ್ಯಪಾನ ದಿನಾಚರಣೆ ಅಂಗವಾಗಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.


ಪಿಎಚ್‌ಸಿ ಐಮಂಗಲ ವ್ಯಾಪ್ತಿಯ ಅಂಗನವಾಡಿಗಳಲ್ಲಿ ಮಂಗಳವಾರ ವಿಶ್ವ ಸ್ತನ್ಯಪಾನ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳವರ ಕಚೇರಿಯಿಂದ ಆಗಮಸಿದ್ಧ ಜಿಲ್ಲಾ ಪೌಷ್ಟಿಕ ಮೇಲ್ವಿಚಾರಕಿ ಸಣ್ಣರಂಗಮ್ಮ ಮಾತನಾಡಿ ಸ್ತನ್ಯಪಾನದ ಮಹತ್ವ, ಸ್ತನ್ಯಪಾನದ ಉದ್ದೇಶ, ಸ್ತನ್ಯಪಾನದ ಪ್ರಯೋಜನಗಳು, ಸ್ತನ್ಯಪಾನದಿಂದ ತಾಯಂದಿರಿಗೆ ಹಾಗೂ ಶಿಶುವಿಗೆ ಸಿಗುವ ಪ್ರಯೋಜನಗಳು, ಆರೋಗ್ಯದ ಅನುಕೂಲತೆಗಲು, ತಾಯಿ ಮತ್ತು ಮಗುವಿನ ಸರ್ವತೋಮುಖ ಆರೋಗ್ಯ ವೃದ್ಧಿಯಲ್ಲಿ ಪೋಷಣೆಯಲ್ಲಿ ಪೌಷ್ಠಿಕಾಂಶಯುಕ್ತ ಆಹಾರಗಳ ಮಹತ್ವ, ಸ್ತನ್ಯಪಾನದ ಮಹತ್ವ ಕುರಿತು ಉಪನ್ಯಾಸ ನೀಡಿದರು.


ಸ್ತನ್ಯಪಾನವು ಮಗುವಿನ ಮತ್ತು ತಾಯಿಯ ಆರೋಗ್ಯಕ್ಕೆ ಬಹಳ ಮುಖ್ಯ. ಎದೆ ಹಾಲು ಮಗುವಿಗೆ ಅತ್ಯುತ್ತಮ ಪೋಷಣೆ ನೀಡುತ್ತದೆ, ರೋಗಗಳಿಂದ ರಕ್ಷಿಸುತ್ತದೆ ಮತ್ತು ತಾಯಿಯೊಂದಿಗಿನ ಬಾಂಧವ್ಯವನ್ನು ಬಲಪಡಿಸುತ್ತದೆ ಎಂದು ಸಣ್ಣರಂಗಮ್ಮ ತಿಳಿಸಿದರು.


ಸ್ತನ್ಯಪಾನವು ಮಗುವಿನ ದವಡೆ ಮತ್ತು ಹಲ್ಲುಗಳ ಸರಿಯಾದ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಭವಿಷ್ಯದಲ್ಲಿ ಅಪೌಷ್ಟಿಕತೆ, ಸ್ಥೂಲಕಾಯತೆ ಮತ್ತು ಹೃದ್ರೋಗದ ಅಪಾಯ ಕಡಿಮೆ ಮಾಡುತ್ತದೆ. ಸ್ತನ್ಯಪಾನವು ತಾಯಿ ಮತ್ತು ಮಗುವಿನ ನಡುವೆ ಬಲವಾದ ಬಾಂಧವ್ಯವನ್ನು ಬೆಳೆಸಲು ಸಹಾಯ ಮಾಡುತ್ತದೆ ಎಂದು ಸಣ್ಣರಂಗಮ್ಮ ಹೇಳಿದರು.


ಆರೋಗ್ಯ ಇಲಾಖೆ ಅಧಿಕಾರಿ ರಮೇಶ್ ಮಾತನಾಡಿ, ಎದೆ ಹಾಲು ಮಗುವಿನ ಬೆಳವಣಿಗೆಗೆ ಅಗತ್ಯವಿರುವ ಪೋಷಕಾಂಶಗಳಾದ ಪ್ರೋಟೀನ್, ಕಾರ್ಬೋಹೈಡ್ರೇಟ್ಗಳು, ಕೊಬ್ಬುಗಳು, ಜೀವಸತ್ವಗಳು ಮತ್ತು ಖನಿಜಗಳನ್ನು ಒಳಗೊಂಡಿದೆ. ಎದೆ ಹಾಲಿನಲ್ಲಿರುವ ಪ್ರತಿಕಾಯಗಳು ಮಗುವನ್ನು ಸೋಂಕುಗಳು ಮತ್ತು ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಅವರು ತಿಳಿಸಿದರು.


ಕಾರ್ಯಕ್ರಮದಲ್ಲಿ ಪಿಎಚ್‌ಸಿ ಐಮಂಗಲ ವೈದ್ಯಾಧಿಕಾರಿ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು, ಬಾಣಂತಿಯರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ