Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸತ್ತ ವ್ಯಕ್ತಿ ಎಟಿಎಂ ಕಾರ್ಡ್‌ನಿಂದ ಹಣ ಪಡೆಯಬಹುದಾ...?

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬ್ಯಾಂಕ್ ನಲ್ಲಿ ಖಾತೆ ತೆರೆದ ನಂತ್ರ ಬ್ಯಾಂಕ್ ಚೆಕ್
, ಎಟಿಎಂ ಕಾರ್ಡ್ ಸೇರಿದಂತೆ ಕೆಲವೊಂದು ಸೌಲಭ್ಯವನ್ನು ನೀಡುತ್ತದೆ. ಚೆಕ್ ಮೂಲಕ ಹಣ ವಿತ್ ಡ್ರಾ ಮಾಡುವ ಸಂದರ್ಭದಲ್ಲಿ ಕೆಲವೊಂದು ಮಾಹಿತಿಯನ್ನು ಅದರಲ್ಲಿ ಭರ್ತಿ ಮಾಡಬೇಕಾಗುತ್ತದೆ.

ಆದ್ರೆ ಎಟಿಎಂ ಮೂಲಕ ಹಣ ವಿತ್ ಡ್ರಾ ಮಾಡುವ ಸಂದರ್ಭದಲ್ಲಿ ಖಾತೆದಾರನ ಯಾವುದೇ ಮಾಹಿತಿಯನ್ನು ಭರ್ತಿ ಮಾಡ್ಬೇಕಾಗಿಲ್ಲ. ಎಟಿಎಂ ಪಿನ್ ಹಾಕಿದ್ರೆ ಸಾಕು. ಈಗಿನ ದಿನಗಳಲ್ಲಿ ಆನ್ಲೈನ್ ಪೇಮೆಂಟ್ ಹೆಚ್ಚಾಗಿದ್ರೂ ಎಟಿಎಂ ಕಾರ್ಡ್ ಬಳಸುವವರ ಸಂಖ್ಯೆ ಸಂಪೂರ್ಣ ನಿಂತಿಲ್ಲ. ಸತ್ತ ವ್ಯಕ್ತಿಯ ಎಟಿಎಂ ಕಾರ್ಡ್ ಬಳಸಿ ಹಣ ವಿತ್ ಡ್ರಾ ಮಾಡ್ಬಹುದಾ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ.

ಸಾಮಾನ್ಯವಾಗಿ ಮನೆಯಲ್ಲಿ ಯಾವುದೇ ವ್ಯಕ್ತಿ ಸಾವನ್ನಪ್ಪಿದ್ರೆ ಮನೆ ಸದಸ್ಯರು ಆತನ ಎಟಿಎಂ ಬಳಕೆ ಮಾಡಿ ಹಣ ವಿತ್ ಡ್ರಾ ಮಾಡ್ತಾರೆ. ನಿಯಮಗಳ ಪ್ರಕಾರ, ಹಣ ವಿತ್ ಡ್ರಾ ಮಾಡುವುದು ಅಪರಾಧ. ಒಂದ್ವೇಳೆ ನೀವು ಸಿಕ್ಕಿಬಿದ್ರೆ ನಿಮಗೆ ಜೈಲು ಶಿಕ್ಷೆಯಾಗುತ್ತದೆ. ನಾಮಿನಿಗೆ ಕೂಡ ಹಣ ಪಡೆಯುವ ಅಧಿಕಾರವಿಲ್ಲ. ಹಾಗಿದ್ರೆ ಮೊದಲು ಏನು ಮಾಡ್ಬೇಕು ಎನ್ನುವ ಪ್ರಶ್ನೆ ಬರುತ್ತದೆ.

ಮನೆಯಲ್ಲಿ ಯಾವುದೇ ವ್ಯಕ್ತಿ ಸಾವನ್ನಪ್ಪಿದ್ರೆ ಮೊದಲು ಬ್ಯಾಂಕ್ ಗೆ ತಿಳಿಸಬೇಕು. ಮೃತ ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿ ನಾಮಿನಿ ಇದ್ದರೆ, ಅವರು ಬ್ಯಾಂಕ್‌ಗೆ ತಿಳಿಸಬೇಕಾಗುತ್ತದೆ. ಒಂದಕ್ಕಿಂತ ಹೆಚ್ಚು ನಾಮಿನಿಗಳ ಸಂದರ್ಭದಲ್ಲಿ, ಒಪ್ಪಿಗೆ ಪತ್ರವನ್ನು ಬ್ಯಾಂಕ್‌ಗೆ ನೀಡಬೇಕು. ಅದರ ನಂತರವೇ ನೀವು ಸತ್ತ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ಹಣವನ್ನು ಹಿಂಪಡೆಯಬಹುದು.

 ಹಣ ಹಿಂಪಡೆಯಲು ಏನೆಲ್ಲ ಮಾಡಬೇಕು...? :
ಬ್ಯಾಂಕ್ ಗೆ ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ನೀಡುವುದು ಮಾತ್ರವಲ್ಲ
, ನಾಮಿನಿ ಕೆಲವು ದಾಖಲೆಗಳನ್ನು ಬ್ಯಾಂಕ್ ಗೆ ನೀಡ್ಬೇಕು. ಖಾತೆಯಲ್ಲಿ ಠೇವಣಿ ಮಾಡಿದ ಹಣವನ್ನು ಕ್ಲೈಮ್ ಮಾಡಲು ಫಾರ್ಮ್ ಭರ್ತಿ ಮಾಡಬೇಕಾಗುತ್ತದೆ. ಫಾರ್ಮ್ ಜೊತೆಗೆ ನೀವು ಸತ್ತವರ ಪಾಸ್‌ಬುಕ್, ಖಾತೆ ಟಿಡಿಆರ್, ಚೆಕ್ ಬುಕ್, ಮರಣ ಪ್ರಮಾಣಪತ್ರ ಮತ್ತು ನಿಮ್ಮ ಆಧಾರ್ ಮತ್ತು ಪ್ಯಾನ್ ಕಾರ್ಡ್ ಅನ್ನು ಸಹ ಲಗತ್ತಿಸಬೇಕು. ನಂತರ ಬ್ಯಾಂಕ್ ಎಲ್ಲವನ್ನೂ ಪರಿಶೀಲಿಸುತ್ತದೆ ಮತ್ತು ಪರಿಶೀಲನೆಯು ಸರಿಯಾಗಿ ಕಂಡುಬಂದ ನಂತರ ನೀವು ಸತ್ತ ವ್ಯಕ್ತಿಯ ಬ್ಯಾಂಕ್ ಖಾತೆಯಿಂದ ಹಣವನ್ನು ಹಿಂಪಡೆಯಬಹುದು.

 ಯಾರು ನೀಡಬಹುದು ದೂರು...?
ಮೃತ ವ್ಯಕ್ತಿ ಖಾತೆಯಿಂದ ಹಣ ವಿತ್ ಡ್ರಾ ಮಾಡಿದ ಮಾಹಿತಿ ಸಿಕ್ಕಿದ್ರೆ
, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲು ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕರಿಗೆ ಹಕ್ಕಿದೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಪ್ರಕಾರ, ಮೃತ ವ್ಯಕ್ತಿಯ ಎಟಿಎಂ ಕಾರ್ಡ್‌ನಿಂದ ಹಣವನ್ನು ಹಿಂಪಡೆಯುವುದು ಕಾನೂನುಬದ್ಧವಲ್ಲ. ಮೃತ ಖಾತೆದಾರನ ವಾರಸುದಾರರಿಗೆ ತಿಳಿಸದೆ ಹಣವನ್ನು ಹಿಂಪಡೆದಿದ್ದಕ್ಕಾಗಿ ಬ್ಯಾಂಕ್ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದು. ಖಾತೆದಾರ ತನ್ನ ಖಾತೆಯಲ್ಲಿ ಯಾವುದೇ ವ್ಯಕ್ತಿಯನ್ನು ನಾಮಿನಿ ಮಾಡದಿದ್ದರೆ, ಖಾತೆದಾರನ ಮರಣದ ನಂತರ, ಅವನ ಎಲ್ಲಾ ಕಾನೂನು ಉತ್ತರಾಧಿಕಾರಿಗಳು, ಉತ್ತರಾಧಿಕಾರ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ಇದರ ನಂತರವೇ ಕ್ಲೈಮ್ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.

ಉಚಿತ ವಿಮೆ :
ಬ್ಯಾಂಕ್ ಗ್ರಾಹಕರಿಗೆ ಡೆಬಿಟ್ ಮತ್ತು ಎಟಿಎಂ ಕಾರ್ಡ್‌ಗಳನ್ನು ನೀಡಿದಾಗ
, ಅಪಘಾತ ಅಥವಾ ಅಕಾಲಿಕ ಮರಣದ ವಿರುದ್ಧ ಉಚಿತ ವಿಮೆಯನ್ನು ಸಹ ನೀಡಲಾಗುತ್ತದೆ. ಎಟಿಎಂ ಕಾರ್ಡ್ ಹೊಂದಿದ್ದ ವ್ಯಕ್ತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ರೆ ಮೃತರ ಸಂಬಂಧಿಕರು ಅಪಘಾತ ವಿಮೆಯನ್ನು ಕ್ಲೈಮ್ ಮಾಡಬಹುದು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ