Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಂಕೆಯನ್ನು ಜೀವಂತವಾಗಿ ನುಂಗಿದ್ದ ಬೃಹತ್ ಗಾತ್ರದ ಹೆಬ್ಬಾವು ಸೆರೆ

Advertisement
Advertisement

 ಚಂದ್ರವಳ್ಳಿ ನ್ಯೂಸ್, ಮಂಡ್ಯ:
ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದಲ್ಲಿ ಜಿಂಕೆಯೊಂದನ್ನು ಜೀವಂತವಾಗಿ ನುಂಗಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಉರಗ ತಜ್ಞರು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.

ಬೆಂಗಳೂರು ಜಲಮಂಡಳಿಯ ನೀರು ಸರಬರಾಜು ಮಾಡುವ ಮುಖ್ಯ ಪೈಪ್‌ಲೈನ್ ಬಳಿ ಈ ರೋಮಾಂಚನಕಾರಿ ಘಟನೆ ನಡೆದಿದೆ.

ಜಿಂಕೆ ನುಂಗಿ ಕದಲಲಾಗದೆ ಬಿದ್ದಿದ್ದ ಹೆಬ್ಬಾವು!
ನೆಟ್ಕಲ್ ಗ್ರಾಮದ ಜಲಮಂಡಳಿ ಪೈಪ್‌ಲೈನ್ ಬಳಿ ಸುಮಾರು
10 ಅಡಿ ಉದ್ದ ಹಾಗೂ 30 ಕೆಜಿಗೂ ಹೆಚ್ಚು ತೂಕವಿದ್ದ ಬೃಹತ್ ಹೆಬ್ಬಾವೊಂದು ಪ್ರತ್ಯಕ್ಷವಾಗಿತ್ತು. ಹತ್ತಿರದ ಕಾಡಿನಿಂದ ಬಂದಿದ್ದ ಈ ಹೆಬ್ಬಾವು, ಅಲ್ಲಿ ಸಿಕ್ಕ ದೊಡ್ಡ ಜಿಂಕೆಯೊಂದನ್ನು ಸಂಪೂರ್ಣವಾಗಿ ನುಂಗಿ ಹಾಕಿತ್ತು. ಜಿಂಕೆಯನ್ನು ತಿಂದಿದ್ದರಿಂದ ಭಾರ ಹೆಚ್ಚಾಗಿ, ಮುಂದೆ ಸಾಗಲು ಸಾಧ್ಯವಾಗದೆ ಹೆಬ್ಬಾವು ಒಂದೇ ಕಡೆ ಮಲಗಿತ್ತು.

ಕಾಡಿಗೆ ಸೇರಿದ ಅತಿಥಿ-
ಪೈಪ್‌ಲೈನ್ ಬಳಿ ದೈತ್ಯ ಹಾವನ್ನು ಕಂಡು ಆತಂಕಗೊಂಡ ಸ್ಥಳೀಯ ಗ್ರಾಮಸ್ಥರು
, ತಕ್ಷಣವೇ ಅರಣ್ಯ ಇಲಾಖೆಗೆ ವಿಷಯ ಮುಟ್ಟಿಸಿದ್ದಾರೆ.

ಸುರಕ್ಷಿತ ಕಾರ್ಯಾಚರಣೆ: ಮಾಹಿತಿ ಸಿಗುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಉರಗ ತಜ್ಞರು ಜಂಟಿ ಕಾರ್ಯಾಚರಣೆ ನಡೆಸಿದರು. ಜಿಂಕೆ ನುಂಗಿ ಜಾಗ ಬಿಟ್ಟು ಕದಲದಿದ್ದ ಹಾವನ್ನು ಅತ್ಯಂತ ಸೂಕ್ಷ್ಮವಾಗಿ ಮತ್ತು ಸುರಕ್ಷಿತವಾಗಿ ಸೆರೆಹಿಡಿಯಲಾಯಿತು.

ಬಳಿಕ ಸಾರ್ವಜನಿಕರ ಆತಂಕ ದೂರ ಮಾಡಿದ ತಜ್ಞರು, ಸೆರೆಸಿಕ್ಕ ಹೆಬ್ಬಾವನ್ನು ಸುರಕ್ಷಿತವಾಗಿ ಸಮೀಪದ ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಕೊಂಡೊಯ್ದು ಕಾಡಿನ ಮಧ್ಯೆ ಮುಕ್ತವಾಗಿ ಬಿಟ್ಟಿದ್ದಾರೆ. ಹಾವನ್ನು ಕಾಡಿಗೆ ಬಿಟ್ಟ ನಂತರವೇ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಿರುಮಗೊಂಡನಹಳ್ಳಿ ರೈಲ್ವೇ ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಲು ಸಾರ್ವಜನಿಕರ ಆಗ್ರಹಕನ್ನಡ ಸಿನಿಮಾ ನಿರ್ಲಕ್ಷ್ಯ ಮಾಡಿದ ವಿದ್ಯಾವಂತರು -ಡಾ.ಕೆ.ಪುಟ್ಟಸ್ವಾಮಿ ರಾಜ್ಯ ಯೋಗ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ನಿಸರ್ಗ ಯೋಗ ಕೇಂದ್ರದ ವಿದ್ಯಾರ್ಥಿಗಳಿಂದ ಅಪೂರ್ವ ಸಾಧನೆಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ...ಆಯುರ್ವೇದ ಹಾಗೂ ಯೋಗದ ಬಗ್ಗೆ ಇಡೀ ಜಗತ್ತು ಶ್ಲಾಘಿಸುತ್ತಿದೆ-ಬಿ. ಎಸ್. ಯಡಿಯೂರಪ್ಪಪೋಸ್ಟರ್ ಅನಾವರಣಗೊಳಿಸಿ ಶುಭ ಹಾರೈಸಿದ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ಹಳ್ಳಿ ಮಕ್ಕಳಿಗೂ ಸಿಗಲಿ ಎಲ್.ಕೆ.ಜಿ/ಯು.ಕೆ.ಜಿ ಭಾಗ್ಯ: ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ಕರೆಮೋದಿ ಸರ್ಕಾರದ 12 ವರ್ಷಗಳ ಆಡಳಿತ: ದೇಶದ ಅಭಿವೃದ್ಧಿ ಶ್ಲಾಘಿಸಿದ ಆರ್. ಅಶೋಕ್ತುಮಕೂರು-ಯಶವಂತಪುರ ರೈಲ್ವೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ವಿ. ಸೋಮಣ್ಣಕಾರ್ಮಿಕರ ಕಿಟ್ ಹಗರಣ: ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಜೆಡಿಎಸ್