Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೀಟನಾಶಕಗಳ ಬಳಕೆಯಲ್ಲಿ ಮುಂಜಾಗ್ರತೆ ಅಗತ್ಯ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೀಟನಾಶಕಗಳ ಬಳಕೆಯಲ್ಲಿ ರೈತರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿದ್ದರೆ, ಕೃಷಿ ಪೂರಕ ಸೂಕ್ಷ್ಮ ಜೀವಿಗಳ ಅಲಭ್ಯತೆ ರೈತರನ್ನು ಕಾಡಲಿದೆ.   ಕುರಿತಂತೆ ಕೃಷಿ ಮತ್ತು ತೋಟಗಾರಿಕೆ ಅಧ್ಯಯನದ ವಿದ್ಯಾರ್ಥಿಗಳು ರೈತರಿಗೆ ತರಬೇತಿ ಮೂಲಕ ಮನವರಿಕೆ ಮಾಡಿಕೊಟ್ಟರು.

      ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,ಶಿವಮೊಗ್ಗ. ತೋಟಗಾರಿಕೆ ಮಹಾವಿದ್ಯಾಲಯ, ಹಿರಿಯೂರಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಕಸವನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕೀಟನಾಶಕಗಳ ಬಳಕೆಯಲ್ಲಿ ವಹಿಸಬೇಕಾದ ಮುಂಜಾಗ್ರತೆ ಕ್ರಮಗಳ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.

ರೈತರು ವಾಡಿಕೆಯಂತೆ ಹೆಚ್ಚಿನ ಮಟ್ಟದ ಕೀಟನಾಶಕಗಳನ್ನು ಬಳಸುತ್ತಾರೆ. ಸಾಮಾನ್ಯವಾಗಿ ಕೀಟನಾಶಕ ಮಣ್ಣಿನೊಳಗೆ ಸೇರಿಕೊಂಡು ನೇರವಾಗಿ ಮಣ್ಣಿನ ಫಲವತ್ತತೆಯನ್ನು ನಾಶಮಾಡುತ್ತದೆ ಹಾಗೂ ಸೂಕ್ಷ್ಮ ಜೀವಿಗಳ ಲಭ್ಯತೆಯು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಎಂದು ಹೇಳಿದರು.

      ಹೀಗಾಗಿ ರೈತರು ಕೀಟನಾಶಕಗಳನ್ನು ಸರಿಯಾದ ಪ್ರಮಾಣದಲ್ಲಿ ಮತ್ತು ವಿಧಾನದಲ್ಲಿ ಬಳಕೆ ಮಾಡುವುದು ಸೂಕ್ತವೆಂದು ಅಂತಿಮ ವರ್ಷದ ವಿದ್ಯಾರ್ಥಿನಿ ಚೈತ್ರ ಅವರು ರೈತರಿಗೆ ತಿಳಿಸಿದರು. ಕೀಟನಾಶಕಗಳ ಸಿಂಪಡಣೆಯ ಸಂದರ್ಭದಲ್ಲಿ ತಪ್ಪದೇ ಮುಂಜಾಗ್ರತೆ ವಹಿಸಬೇಕು ಎಂದು ಹೇಳಿದರು.

ಸಂರಕ್ಷಿತ ಉಡುಪು, ಮಾಸ್ಕ್ ,ಬೂಟು , ಗ್ಲೌಸ್ ಗಳನ್ನು ಧರಿಸಿ ಕೀಟನಾಶಕ ಸಿಂಪಡಣೆ ಮಾಡಬೇಕು ಎಂದರು. ಸಿಂಪಡಣೆ ಮಾಡಿದ ನಂತರ ಕಡ್ಡಾಯವಾಗಿ ಚೆನ್ನಾಗಿ ಕೈಗಳನ್ನು ತೊಳೆಯಬೇಕು ಎಂದು ತಿಳಿಸಿದರು. ಕೀಟನಾಶಕ ಸಿಂಪಡಣೆ ಮಾಡುವ ಸಂದರ್ಭದಲ್ಲಿ ಬಳಸಬೇಕಾದ ಉಡುಪನ್ನು ರೈತರಿಗೆ ಮನಮುಟ್ಟುವಂತೆ ಪ್ರಾತ್ಯಕ್ಷಿಕೆ ಮೂಲಕ ಮನವರಿಕೆ ಮಾಡಿಕೊಡಲಾಯಿತು.

     ಕಾರ್ಯಕ್ರಮದಲ್ಲಿ ಪ್ರಗತಿಪರ ರೈತರಾದ ರಾಜಪ್ಪ, ರೈತ ಸಂಘದ ಸದಸ್ಯರಾದ ಕೃಷ್ಣಮೂರ್ತಿ, ಕಸವನಹಳ್ಳಿ ಗ್ರಾಮಸ್ಥರು, ಗ್ರಾಮದ ರೈತರು ಹಾಗೂ ಸ್ತ್ರೀ ಶಕ್ತಿ ಸಂಘದ ಮಹಿಳೆಯರು ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ತೋಟಗಾರಿಕೆ ಮಹಾವಿದ್ಯಾಲಯ ಹಿರಿಯೂರಿನ ವಿದ್ಯಾರ್ಥಿಗಳಾದ ಗೌತಮ್, ಸುದೀಪ್, ಪವನ್, ರಾಕೇಶ್, ಕಾವೇರಿ, ಅಂಜುಮ್, ಬಿಂದುಶ್ರೀ, ರಕ್ಷಿತಾ, ಅಂಬಿಕಾ, ಅಪರ್ಣ, ಶ್ರೇಯಾ, ನವೀನ್, ಜನಾರ್ದನ್ ಕಾರ್ಯಕ್ರಮ ನಡೆಸಿಕೊಟ್ಟರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ