Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಚ್ಚರಿಕೆ.... ಚಂದ್ರ ಗ್ರಹಣ, ಅಲ್ಲ ರಕ್ತ ಚಂದ್ರ ಗ್ರಹಣ?

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಚ್ಚರಿಕೆ.... ಎಚ್ಚರಿಕೆ.... ಎಚ್ಚರಿಕೆ......ಚಂದ್ರ ಗ್ರಹಣ, ಅಲ್ಲ ರಕ್ತ ಚಂದ್ರ ಗ್ರಹಣ, ಅಲ್ಲ ಖಗ್ರಾಸ ಚಂದ್ರ ಗ್ರಹಣ, ಅಲ್ಲ ರಾಹು ಕೇತು ಶನಿ ಪ್ರವೇಶಿದ ಕಾಟ.........

ಹೌದು, ರಕ್ತದ ಬಣ್ಣ ಕೆಂಪು, ಗ್ರಹಣದ ಪರಿಣಾಮ ಘೋರ, ರಕ್ತದ ಅರ್ಥ ಸಾವು ನೋವು. ಇದು ಭಯಂಕರ. ನಮ್ಮ ಕನಸಿನ ಚಂದಮಾಮ ರಕ್ತ ವರ್ಣದಲ್ಲಿ, ಇದು ಸಹಜ ಸ್ವಾಭಾವಿಕ ಅಲ್ಲ. ಇದು ಪ್ರಳಯದ ಮುನ್ಸೂಚನೆ.....

ಅಲ್ಲೆಲ್ಲೋ ಭೂಕಂಪ, ಇನ್ನೆಲ್ಲೋ ಸುನಾಮಿ, ಮತ್ತೆಲ್ಲೋ ಅಗ್ನಿಯ ನರ್ತನ, ಮಗದೆಲ್ಲೋ ಮೇಘ ಸ್ಪೋಟ, ಅಪಘಾತ, ಅಪರಾಧ, ಅನಾರೋಗ್ಯ, ಬಾಂಬ್ ಸ್ಪೋಟ ಪ್ರಖ್ಯಾತರ ಸಾವು, ಅಬ್ಬಬ್ಬಾ............ನಿಮ್ಮ ರಾಶಿ ಯಾವುದು, ಅದಕ್ಕೆ ಅನುಗುಣವಾಗಿ ಗ್ರಹಣದ ಪರಿಣಾಮ ನಿಮ್ಮ ಮೇಲೆ. ಭಯವಾಗುತ್ತಿದೆಯೇ.......

ಆದರೂ ಇದಕ್ಕೆ ಪರಿಹಾರವೂ ಇದೆ. ಹೋಮ, ಹವನ, ಮಂತ್ರ ತಂತ್ರಗಳನ್ನು ಮಾಡಿ, ಜಪ ತಪ ವ್ರತಗಳನ್ನು ಮಾಡಿ, ನೇಮ ನಿಷ್ಠೆಗಳಿಂದ ಇದ್ದರೆ ಇದರ ಪರಿಣಾಮದ ತೀವ್ರತೆ ಕಡಿಮೆಯಾಗುತ್ತದೆ..........

ಇದು ನಿಜವೇ ? ಸುಳ್ಳೇ ? ನಂಬಿಕೆಯೇ ? ಮೂಲ ನಂಬಿಕೆಯೇ ? ಮೂಡ ನಂಬಿಕೆಯೇ ? ವೈಚಾರಿಕತೆಯೇ ? ವಾಸ್ತವವೇ ? ಪ್ರಶ್ನಿಸಬೇಕೆ ಅಥವಾ ಒಪ್ಪಿಕೊಳ್ಳಬೇಕೆ ?

ಸೃಷ್ಟಿಯ ಅಗಾಧತೆಯಲ್ಲಿ ಕಲ್ಪನೆಗೂ ನಿಲುಕದ - ವಿಜ್ಞಾನಕ್ಕೂ ಭೇದಿಸಲಾಗದ ಅಸಂಖ್ಯಾತ ವಿಸ್ಮಯಗಳು ನಡೆಯುತ್ತದೆ. ಅನೇಕ ರಹಸ್ಯಗಳನ್ನು ಅದು ತನ್ನ ಒಡಲೊಳಗೆ ಅಡಗಿಸಿಕೊಂಡಿದೆ. ಕೆಲವೊಮ್ಮೆ ಅದರ ಸಹಜ ವರ್ತನೆಗಳು ಹುಲುಮಾನವರಾದ ನಮಗೆ ಕೌತುಕವನ್ನೂ, ಭಯವನ್ನೂ ಉಂಟುಮಾಡುತ್ತದೆ. ಎಲ್ಲಕ್ಕೂ ಮುಖ್ಯವಾಗಿ ಸಾವು ಸೋಲೆಂಬ ಭಯ ನಮ್ಮನ್ನು ಕಾಡುತ್ತದೆ. ಅದರ ಪರಿಣಾಮವೇ ಚಿತ್ರ ವಿಚಿತ್ರ ಆಲೋಚನೆಗಳು ಮೂಡುತ್ತದೆ. ವಿಜ್ಞಾನಿಗಳು ತಮ್ಮ ಅರಿವಿಗೆ ನಿಲುಕಿದಷ್ಟು ಮುನ್ಸೂಚನೆ ಕೊಡುತ್ತಾರೆ. ಜ್ಯೋತಿಷಿಗಳು ಇದನ್ನೇ ಬಂಡವಾಳ ಮಾಡಿಕೊಂಡು  ತಮ್ಮ  ಜೀವನ ಸಾಗಿಸುತ್ತಾರೆ.

ವಾಸ್ತವವೆಂದರೆ, ನಾವೆಲ್ಲರೂ ಪ್ರಕೃತಿಯ ಕೂಸುಗಳು. ಹೇಗೆ ಅದರ ಎಲ್ಲಾ ಅಂಶಗಳನ್ನು ಅನುಭವಿಸುತ್ತಾ ಸಾಗುತ್ತೇವೆಯೋ  ಹಾಗೆಯೇ ನಮ್ಮಿಂದ ನಿಯಂತ್ರಿಸಲಾಗದ ಅನೇಕ ಸಂಗತಿಗಳೂ ನಡೆಯುವುದನ್ನು ಸಹಜವಾಗಿ ಒಪ್ಪಿಕೊಂಡು ಸಂಕಷ್ಟಗಳು ಎದುರಾದಾಗ ಅದಕ್ಕೆ ಅಷ್ಟೇ ಸಹಜವಾಗಿ ಪ್ರತಿಕ್ರಿಯಿಸುತ್ತಾ ಸಹಸ್ರಾರು ವರ್ಷಗಳ ನಿರಂತರ ಬದಲಾವಣೆಗಳನ್ನು ಗಮನಿಸುತ್ತಾ ಮುನ್ನಡೆಯುವುದೇ ಅತ್ಯಂತ ಸೂಕ್ತ . ಇಲ್ಲದಿದ್ದರೆ ಅನಾವಶ್ಯಕ ಗೊಂದಲ, ಗಾಬರಿಗಳಿಗೆ ಒಳಗಾಗಿ ಮೂರ್ಖರ, ಅಜ್ಞಾನಿಗಳ, ಲಾಭಕೋರರ ಮಾತುಗಳಿಗೆ ಮರುಳಾಗಿ ಸೃಷ್ಟಿಯ ಸಹಜತೆಯನ್ನೇ ಭಯದಿಂದ ನೋಡುವ ಮನಸ್ಥಿತಿ ಬೆಳೆಯುತ್ತದೆ. ಸೃಷ್ಟಿಯ ಶಿಶುಗಳು ನಾವು ಎಂಬುದನ್ನು ಮರೆಯದಿರೋಣ. ನಕಲಿ ಜ್ಯೋತಿಷಿಗಳ ಮಾತಿಗೆ ಮರುಳಾಗದಿರೋಣ. ಸೃಷ್ಟಿಗೆ ನಿಯತ್ತಾಗಿರೋಣ. ಬಂದದ್ದೆಲ್ಲಾ ಬರಲಿ. ಧೈರ್ಯವಾಗಿ ಎದುರಿಸೋಣ ಮತ್ತೆ ಪ್ರಕೃತಿಯಲ್ಲಿ ಲೀನವಾಗುವವರೆಗೂ......

ಇಂತಹ ಪ್ರಾಕೃತಿಕ ವೈಪರೀತ್ಯಗಳ ವಿಷಯದಲ್ಲಿ ಮಾಧ್ಯಮಗಳ ಮೂಲಕ ಯಾಕ್ರೀ ತಲೆ ತಿಂತೀರಾ ? ಸೂರ್ಯ, ಚಂದ್ರ, ಭೂಮಿ, ಆಕಾಶಕಾಯಗಳ ಸಹಜ ನಡವಳಿಕೆಯ ಒಂದು ಭಾಗ ಗ್ರಹಣ. ಸೃಷ್ಟಿಯ ನಿರಂತರ ಮುಂದುವರಿಕೆಯ ಸ್ವಾಭಾವಿಕ ಲಕ್ಷಣ ಗ್ರಹಣ.......

ಒಳ್ಳೆಯದಾದರೂ ಅನುಭವಿಸಬೇಕು, ಕೆಟ್ಟದ್ದಾದರೂ ಅನುಭವಿಸಬೇಕು. ಸಧ್ಯಕ್ಕೆ ಅದನ್ನು ನಿಯಂತ್ರಿಸಲು ಮಾನವರಾದ ನಮಗೆ ಸಾಧ್ಯವಿಲ್ಲ. ಅದರ ಪ್ರಭಾವದಿಂದ ತಪ್ಪಿಸಿಕೊಳ್ಳಲೂ ಸಾಧ್ಯವಿಲ್ಲ. ಅಷ್ಟೇ ಅಲ್ಲದೆ ಅದರ ನೇರ ಅಥವಾ ಪರೋಕ್ಷ ಪರಿಣಾಮಗಳ ಬಗ್ಗೆ ನಮಗೆ ಅರಿವಾಗುವುದಿಲ್ಲ. ಅಕಸ್ಮಾತ್ ಒಂದು ವೇಳೆ ಅದರ ಪರಿಣಾಮಗಳು ಏನಾದರೂ ಇದ್ದರೆ ,

ಇದರ ಬಗ್ಗೆಯೇ ಹಗಲಿರುಳು ಪ್ರತಿ ಕ್ಷಣ ನಿರಂತರವಾಗಿ ಅಧ್ಯಯನ ಮಾಡುತ್ತಿರುವ ಭಾರತ, ಅಮೆರಿಕ, ರಷ್ಯಾ, ಫ್ರಾನ್ಸ್, ಚೀನಾ ಮುಂತಾದ ಇಡೀ ವಿಶ್ವದ ಖಗೋಳ ವಿಜ್ಞಾನಿಗಳು ಅದರ ಬಗ್ಗೆ ಅಧೀಕೃತ ಮಾಹಿತಿ ನೀಡುತ್ತಾರೆ. ನಾವು ತೆಗೆದುಕೊಳ್ಳುವ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸುತ್ತಾರೆ....

ಅದು ಬಿಟ್ಟು ಕೆಂಪಗಿದ್ದರೆ ರಕ್ತ ಚಂದ್ರ ಗ್ರಹಣ ಎಂತಲೂ, ಕಪ್ಪಗಿದ್ದರೆ ಕರಾಳ ಚಂದ್ರ ಗ್ರಹಣ ಎಂತಲೂ, ಬಿಳಿಯಾಗಿ ಕಾಣಿಸಿದರೆ ಶ್ವೇತ ಚಂದ್ರ ಗ್ರಹಣ ಎಂತಲೂ ಏನೇನೂ ಹೆಸರಿನಿಂದ ಕರೆದು ಯಾಕ್ರೀ ಭಯಪಡಿಸುತ್ತೀರಿ.

ಇಲ್ಲಿಯೇ, ಬೆಂಗಳೂರಿನಲ್ಲಿಯೇ ಇಸ್ರೋ ಎಂಬ ಭಾರತದ ಅಧೀಕೃತ ಬಾಹ್ಯಾಕಾಶ ಸಂಸ್ಥೆಯಿದೆ. ಅದರ‌ ವಿಜ್ಞಾನಿಗಳನ್ನು ಭೇಟಿ ಮಾಡಿ ವಿಷಯ ತಿಳಿದು ಅದನ್ನು ಜನರಿಗೆ ತಿಳಿಸಿ.

ಯಾರೋ ಕವಡೆ ಶಾಸ್ತ್ರದ ನಕಲಿ ಜ್ಯೋತಿಷಿಗಳನ್ನು ಮಾತನಾಡಿಸುತ್ತಾ, ಒಬ್ಬೊಬ್ಬರು ಒಂದೊಂದು ಭಯ ಹುಟ್ಟಿಸುತ್ತಾ, ಅದಕ್ಕೆ ನಿರೂಪಕರು ಇನ್ನಷ್ಟು ಮಸಾಲೆ ಸೇರಿಸುತ್ತಾ ಈ ದೇಶವನ್ನು ಹಿಂದಕ್ಕೆ ಎಳೆಯುತ್ತಿದ್ದಾರೆ. ನೋಡಿ ಸತ್ಯ ಮತ್ತು ವಾಸ್ತವವನ್ನು ಜ್ಯೋತಿಷಿಗಳೇ ಹೇಳಲಿ, ವಿಜ್ಞಾನಿಗಳೇ ಹೇಳಲಿ, ಮಕ್ಕಳೇ ಹೇಳಲಿ ನಮಗೇನು. ಅದನ್ನು ಒಪ್ಪೋಣ. ಆದರೆ ಅದು ಸಾರ್ವತ್ರಿಕವಾಗಿರಬೇಕು. ನಿರ್ಧಿಷ್ಟ ಕಾರಣ, ಪರಿಣಾಮ ಮತ್ತು ಕಾಲದ ಅಗ್ನಿ ಪರೀಕ್ಷೆಯಲ್ಲಿ ಪ್ರಾಯೋಗಿಕವಾಗಿ ದೃಢಪಟ್ಟಿರಬೇಕು. ಸರ್ಕಾರವೆಂಬ ಜನರ ಬಹುದೊಡ್ಡ ಮತ್ತು ಏಕೈಕ ಸಂಸ್ಥೆ ಅದನ್ನು ಅಧೀಕೃತ ಎಂದು ದೃಢಪಡಿಸಬೇಕು. ಆಗ ಅದೂ ಸಂಪೂರ್ಣ ಸತ್ಯವಲ್ಲದಿದ್ದರೂ ಇರುವ ಆಯ್ಕೆಯಲ್ಲಿ ಅದೇ ಅಂತಿಮ ಎಂದು ತಿಳಿಯಬಹುದು.

ಟಿವಿಯಲ್ಲಿ ಜ್ಯೋತಿಷಿಗಳು ಹೇಳುವ ಕಾರಣ ,ಪರಿಣಾಮಗಳು ನಿಜವೇ ಆಗಿದ್ದರೆ ಭಾರತ ಸರ್ಕಾರಕ್ಕೆ ಹೇಳಿ ಅವರಿಂದಲೇ ಹೋಮ, ಹವನ ಮಾಡಿಸಿ ಇಡೀ ರಾಷ್ಟ್ರವನ್ನು ದುಷ್ಪರಿಣಾಮಗಳಿಂದ ರಕ್ಷಿಸಿ ಜನರಿಗೆ ಒಳಿತು ಮಾಡಬಹುದಲ್ಲವೇ ?

ಅದುಬಿಟ್ಟು, ದಾರಿಯಲ್ಲಿ ಹೋಗುವ ಪ್ರತಿಯೊಬ್ಬರು ಭೂಮಿಯಿಂದ ಲಕ್ಷಾಂತರ ಮೈಲಿ  ದೂರದಲ್ಲಿರುವ , ಒಮ್ಮೆಯೂ ಬಾಹ್ಯಾಕಾಶ ಯಾತ್ರೆ ಮಾಡದ ಅಥವಾ ಹಿಂದಿನ ಕೆಲವು ಭಾರತೀಯ ತತ್ವಶಾಸ್ತ್ರಜ್ಞರು ಅಧ್ಯಯನ ಮತ್ತು ಅನುಭವದಿಂದ ಹೇಳಿರುವ ಒಂದು ಅಂದಾಜಿನ ಗ್ರಹಗಳ ಚಲನೆಯ ಬಗ್ಗೆ ಮಾಹಿತಿಯೂ ಇಲ್ಲದ, ಇದ್ದರೂ ಅದನ್ನು ಇಂದಿನ ಆಧುನಿಕ ಕಾಲದಲ್ಲಿ  ಪರೀಕ್ಷೆಗೊಡ್ಡದ, ಕೇವಲ ಚಾನಲ್‌ನಲ್ಲಿ ಕಾರ್ಯಕ್ರಮ ಮಾಡಬೇಕು ಎಂಬ ಒಂದೇ ಉದ್ದೇಶದಿಂದ ಜನರನ್ನು ದಾರಿ ತಪ್ಪಿಸುತ್ತಿರುವ ಈ ಮಾಧ್ಯಮಗಳಿಗೆ ಇವತ್ತಿನ ಭಾರತದ ಪರಿಸ್ಥಿತಿಯಲ್ಲಿ ಖಂಡಿತ ಕ್ಷಮೆ ಇಲ್ಲ. ವಿವೇಚನಾರಹಿತರಂತೆ ವರ್ತಿಸುತ್ತಿರುವ ಅವರನ್ನು ಸಮಾಜದ ವೈಜ್ಞಾನಿಕ ಮನೋಭಾವದ ದ್ರೋಹಿಗಳು ಎಂದು ನಿಸ್ಸಂಶಯವಾಗಿ ಕರೆಯಬಹುದು.
ಲೇಖನ-ವಿವೇಕಾನಂದ. ಎಚ್. ಕೆ. 9663750451..
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ