Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಂತಿಯುತವಾಗಿ ಹಬ್ಬ ಆಚರಿಸಿ ಕಾನೂನು ಸುವ್ಯವಸ್ಥೆ ಕಾಪಾಡಿ-ಅಮರೇಶ್ ಗೌಡ

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಗೌರಿ ಗಣೇಶ ಹಬ್ಬದ ಹಿನ್ನೆಲೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣ ಇನ್ಸ್ಪೆಕ್ಟರ್ ಅಮರೇಶ್ ಗೌಡ ಸಾರ್ವಜನಿಕರಿಗೆ ಒಂದಿಷ್ಟು ಮಾಹಿತಿ ನೀಡಿದ್ದು, ಶಾಂತಿಯುತವಾಗಿ ಹಬ್ಬದ ಆಚರಣೆ ಮಾಡುವ ಮೂಲಕ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು ಪೊಲೀಸ್ ಇಲಾಖೆ, ನಗರಸಭೆ,ಬೆಸ್ಕಾಂ, ಹಾಗೂ ಅಗ್ನಿಶಾಮಕದಳದ ಸಹಯೋಗದೊಂದಿಗೆ ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಏಕಗವಾಕ್ಷಿ ವ್ಯವಸ್ಥೆ ಮಾಡಲಾಗಿದ್ದು. ಎಲ್ಲ ಇಲಾಖೆಗಳ ಅನುಮತಿಯನ್ನು ಸಾರ್ವಜನಿಕರು ಒಂದೆಡೆಯೇ ಪಡೆಯುವಂತೆ ಯೋಜನೆ ರೂಪಿಸಲಾಗಿದೆ. ಈ ಹಿಂದೆ ಪ್ರತಿ ಇಲಾಖೆಗೂ ಪ್ರತ್ಯೇಕವಾಗಿ ಅಫಿಡವಿಟ್ ಹಾಗೂ ದಾಖಲೆಗಳನ್ನು ಸಾರ್ವಜನಿಕರು ಸಲ್ಲಿಸಬೇಕಿತ್ತು ಆದರೆ ಪೋಲಿಸ್ ಅಧಿಕ್ಷಕರು ಹಾಗೂ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಾರ್ವಜನಿಕರ ಉಪಯೋಗಕ್ಕಾಗಿ ಸಿಂಗಲ್ ವಿಂಡೋ ಪದ್ಧತಿಯನ್ನು ಆಯೋಜನೆ ಮಾಡಲಾಗಿದೆ ಸಾರ್ವಜನಿಕರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.

 ಕ್ಯೂಆರ್ ಸ್ಕ್ಯಾನ್ ಮಾಡುವ ಮೂಲಕ ಅನುಮತಿ ಪಡೆಯಲು ಸಲ್ಲಿಸಬೇಕಾಗಿರುವ ಅಗತ್ಯ ದಾಖಲಾತಿಗಳ ಮಾಹಿತಿಯನ್ನು ಪಡೆಯಬಹುದಾಗಿದೆ. ನಿಗದಿತ ಶುಲ್ಕ ಪಾವತಿ ಮಾಡಿ ತ್ವರಿತ ಗತಿಯಲ್ಲಿ ಅನುಮತಿ ಪಡೆಯಬಹುದಾಗಿದೆ ಎಂದರು.

 ಗಣೇಶ ಪ್ರತಿಷ್ಠಾಪನೆಗೆ ಮುಖ್ಯವಾಗಿ ಅನುಸರಿಸಬೇಕಾದ ಕ್ರಮಗಳು-*ಕಾರ್ಯಕ್ರಮ ಆಯೋಜನೆ ಮಾಡುವ ಸ್ಥಳ ಯಾವುದು ವಿವಾದಕ್ಕೆ ಒಳಗಾಗಿರಬಾರದು. ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಯೋಜನೆ ಮಾಡುವುದಾದರೆ ಸಾರ್ವಜನಿಕರ ಸಂಚಾರಕ್ಕೆ ಹಾಗೂ ಶಾಲಾ ಕಾಲೇಜುಗಳಿಗೆ ತೊಂದರೆಯಾಗದಂತಿರಬೇಕು. ಖಾಸಗಿ ಸ್ಥಳದಲ್ಲಿ ಕಾರ್ಯಕ್ರಮ ಯೋಜನೆ ಮಾಡುವುದಾದರೆ ಸದರಿ ಸ್ಥಳದ ಮಾಲೀಕರಿಂದ ಅನುಮತಿ ಪತ್ರ ಪಡೆಯಬೇಕು ಹಾಗೂ ಮಾಲೀಕರ ದಾಖಲಾತಿಗಳನ್ನು ಸಲ್ಲಿಸಬೇಕು.

 ಗಣೇಶ ಪ್ರತಿಷ್ಠಾಪನ ಸ್ಥಳದಲ್ಲಿ ಹಗಲು ಮತ್ತು ರಾತ್ರಿ ಪಾಳಿಯದಲ್ಲಿ ಸ್ವಯಂ ಸೇವಕರು ಕಾವಲು ಇರುವ ಮೂಲಕ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು. ಕಾರ್ಯಕ್ರಮದ ಸ್ಥಳದಲ್ಲಿ ವಿವಾದಿತ ಬ್ಯಾನರ್ ಗಳು, ಅಶ್ಲೀಲ ನೃತ್ಯ, ಅಶ್ಲೀಲ ಹಾಡುಗಳನ್ನು ಹಾಕುವುದು ನಿರ್ಬಂಧಿಸಿದೆ.

 ಬೆಳಿಗ್ಗೆ 6:00ಯಿಂದ ರಾತ್ರಿ 10:00 ವರೆಗೆ ಮಾತ್ರ ಧ್ವನಿವರ್ಧಕ ಬಳಸಲು ಅವಕಾಶ ಕಲ್ಪಿಸಲಾಗಿದೆ. ರಾತ್ರಿ 10:00 ನಂತರ ಯಾವುದೇ ಕಾರಣಕ್ಕೂ ಧ್ವನಿವರ್ಧಕ ಬಳಸುವಂತಿಲ್ಲ. ಸರ್ಕಾರದ ಆದೇಶದಂತೆ ಡಿಜೆ ಬಳಸುವಂತಿಲ್ಲ, ಈ ಕುರಿತು ನಿರ್ಬಂಧ ಹೇರಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿಸುವಂತಿಲ್ಲ, ಸಾರ್ವಜನಿಕರಿಗೆ ತೊಂದರೆಯಾಗದ ಸ್ಥಳಗಳಲ್ಲಿ, ಹಸಿರು ಪಟಾಕಿ ಬಳಸಲು ಅವಕಾಶ ಕಲ್ಪಿಸಲಾಗಿದೆ.

ಗಣೇಶ ಮೂರ್ತಿ ವಿಸರ್ಜನೆಯನ್ನು ರಾತ್ರಿ 10 ಗಂಟೆ ಒಳಗೆ ನಿಗದಿತ ಪ್ರದೇಶದಲ್ಲಿ ನೆರವೇರಿಸುವಂತೆ ಸೂಚಿಸಲಾಗಿದೆ. ಕಾರ್ಯಕ್ರಮವನ್ನು ಅನ್ಯಧಾರ್ಮಿಯರಿಗೆ ತೊಂದರೆಯಾಗದಂತೆ,ನೆರವೇರಿಸುವ ಮೂಲಕ ಸಹಕರಿಸಲು ಕೋರಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ