Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿರಾಶ್ರಿತರಿಗೆ ಹಣ್ಣು ವಿತರಿಸಿ ಜನ್ಮ ದಿನ ಆಚರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಂಗನಾಥ್ ಜ್ಯುಯಲರ್ಸ್ ಮಾಲೀಕರು
, ಸಮಾಜ ಸೇವಕರು ಹಾಗೂ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಕೆ.ಕೃಷ್ಣಪ್ಪ ಅವರು ನಿರಾಶ್ರಿತರಿಗೆ ಹಣ್ಣು ವಿತರಿಸಿ 71ನೇ ಜನ್ಮ ದಿನ ಆಚರಿಸಿಕೊಂಡರು.

ಚಿತ್ರದುರ್ಗ ತಾಲ್ಲೂಕಿನ ಗೋನೂರು ಸಮೀಪದ ಬಚ್ಚಬೋರನಹಟ್ಟಿಯ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಶನಿವಾರ ಒಟ್ಟು 420ಕ್ಕೂ ಹೆಚ್ಚು ನಿರಾಶ್ರಿತರಿಗೆ ಹಣ್ಣು-ಹಂಪಲುಗಳನ್ನು ವಿತರಿಸುವ ಮೂಲಕ ಸರಳ ಮತ್ತು ಸಾರ್ಥಕವಾಗಿ ಜನ್ಮ ದಿನ ಆಚರಿಸಿಕೊಂಡರು.

ಈ ವೇಳೆ ಮಾತನಾಡಿದ ಕೆ.ಕೃಷ್ಣಪ್ಪ, ಮಾನವೀಯತೆ ಮತ್ತು ಕರುಣೆಯೇ ಎಲ್ಲ ಧರ್ಮಗಳ ಮೂಲವಾಗಿದೆ. ಅಸಹಾಯಕರ ಸೇವೆ ಮಾಡುವುದರಲ್ಲಿ ಸಿಗುವ ನೆಮ್ಮದಿ ಮತ್ಯಾವುದರಲ್ಲೂ ಸಿಗುವುದಿಲ್ಲ. ಇಲ್ಲಿನ ನಿರಾಶ್ರಿತರ ಕೇಂದ್ರದ ಅಧಿಕಾರಿಗಳು ಮತ್ತು ಸಿಬ್ಬಂದಿಯು ಪ್ರೀತಿಯಿಂದ ಎಲ್ಲ ನಿರಾಶ್ರಿತರನ್ನು ಆದರಿಸಲಾಗುತ್ತದೆ. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸುವ ಮೂಲಕ ಆಶ್ರಯ ಕಲ್ಪಿಸಿರುವುದು ಶ್ಲಾಘನೀಯ ಎಂದರು.

1955ರಲ್ಲಿ ಹಳ್ಳಿಯೊಂದರಲ್ಲಿ ಜನಿಸಿ, ನಂತರ ಚಿತ್ರದುರ್ಗ ನಗರಕ್ಕೆ ಬಂದು ನೆಲೆಸಿ, ಎಲ್ಲ ಸಮಾಜದ ಬಂಧುಗಳೊಂದಿಗೆ, ಮಠಾಧೀಶರೊಂದಿಗೆ ಬೆರೆತು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದೇನೆ. ಸಮಾಜವು ಕೂಡ ನನ್ನನ್ನು ಗುರುತಿಸಿ ಪ್ರೋತ್ಸಾಹಿಸಿದೆ ಎಂದು ತಿಳಿಸಿದ ಅವರು, ಇಲ್ಲಿನ ನಿರಾಶ್ರಿತರಿಗೆ ಹಣ್ಣು ಹಂಚಿ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಲು ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ ಎಂದರು.

ಈ ಸಂದರ್ಭದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕ ವಿಜಯ್,  ಆಪ್ತ ಸಹಾಯಕ ಎಂ.ಮಹದೇವಯ್ಯ ಸೇರಿದಂತೆ ಎಂ.ಕೃಷ್ಣಪ್ಪ ಅವರ ಪತ್ನಿ ನಗರಸಭೆ ಮಾಜಿ ಸದಸ್ಯ ಗೌರಮ್ಮ, ಪುಷ್ಪ, ರಂಗಸ್ವಾಮಿ ಇದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಂಗಾರದ ಅಂಗಡಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ; 5.76 ಲಕ್ಷ ರೂ. ಮೌಲ್ಯದ ಚಿನ್ನಾಬರಣ ವಶಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಗುರುರಕ್ಷೆ ನೀಡಿ ಗೌರವ, ಆಶೀರ್ವಾದಿಸಿದ ವೀರಶೈವ ಶಿವಾಚಾರ್ಯರುಕಾರ್ಮಿಕರ ರಕ್ಷಣಾ ಕಿಟ್ ವಿತರಣೆಯಲ್ಲಿ ನೂರಾರು ಕೋಟಿ ಹಗರಣ: ಜೆಡಿಎಸ್ ವಾಗ್ದಾಳಿ ‘ರೌಡಿ ನಿಗ್ರಹ ದಳ’ ರಚನೆ ರಾಜಕೀಯ ಗಿಮಿಕ್-ಅಶೋಕ್ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಕಾಯುತ್ತಿರುವೆ-ರಾಮಲಿಂಗಾರೆಡ್ಡಿಸಿಎಂ ಸಂಧಾನ ಯಶಸ್ವಿ, ಖಾತೆ ಹಂಚಿಕೆ ಬಿಕ್ಕಟ್ಟು ಸದ್ಯಕ್ಕೆ ಸುಖಾಂತ್ಯಖಾತೆಗಾಗಿ ಕಿತ್ತಾಟ, ವಿಪಕ್ಷಗಳ ನಾಟಕ: ಜನಪರ ಕಾರ್ಯದ ಆಧಾರದ ಮೇಲೆ ಖಾತೆ ಹಂಚಿಕೆಯಾಗಲಿಕೆ.ಎನ್ ರಾಜಣ್ಣ ಅವರನ್ನು ಸಚಿವ ಸಂಪುಟ ಸೇರ್ಪಡೆಗೆ ಪ್ರಾಮಾಣಿಕ ಪ್ರಯತ್ನಅಂಡಮಾನ್ ಕಡಲಾಚೆ ಪ್ರದೇಶದಲ್ಲಿ ಭಾರಿ ಪ್ರಮಾಣದ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆವಿಧಾನ ಪರಿಷತ್ ಗೆ 5ನೇ ಅಭ್ಯರ್ಥಿ ಹೆಸರು ಘೋಷಿಸಿದ ಕಾಂಗ್ರೆಸ್