ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಂಗನಾಥ್ ಜ್ಯುಯಲರ್ಸ್ ಮಾಲೀಕರು, ಸಮಾಜ ಸೇವಕರು ಹಾಗೂ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಕೆ.ಕೃಷ್ಣಪ್ಪ ಅವರು ನಿರಾಶ್ರಿತರಿಗೆ ಹಣ್ಣು ವಿತರಿಸಿ 71ನೇ ಜನ್ಮ ದಿನ ಆಚರಿಸಿಕೊಂಡರು.
ಚಿತ್ರದುರ್ಗ ತಾಲ್ಲೂಕಿನ ಗೋನೂರು ಸಮೀಪದ ಬಚ್ಚಬೋರನಹಟ್ಟಿಯ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಶನಿವಾರ ಒಟ್ಟು 420ಕ್ಕೂ ಹೆಚ್ಚು ನಿರಾಶ್ರಿತರಿಗೆ ಹಣ್ಣು-ಹಂಪಲುಗಳನ್ನು ವಿತರಿಸುವ ಮೂಲಕ ಸರಳ ಮತ್ತು ಸಾರ್ಥಕವಾಗಿ ಜನ್ಮ ದಿನ ಆಚರಿಸಿಕೊಂಡರು.
ಈ ವೇಳೆ ಮಾತನಾಡಿದ ಕೆ.ಕೃಷ್ಣಪ್ಪ, ಮಾನವೀಯತೆ ಮತ್ತು ಕರುಣೆಯೇ ಎಲ್ಲ ಧರ್ಮಗಳ ಮೂಲವಾಗಿದೆ. ಅಸಹಾಯಕರ ಸೇವೆ ಮಾಡುವುದರಲ್ಲಿ ಸಿಗುವ ನೆಮ್ಮದಿ ಮತ್ಯಾವುದರಲ್ಲೂ ಸಿಗುವುದಿಲ್ಲ. ಇಲ್ಲಿನ ನಿರಾಶ್ರಿತರ ಕೇಂದ್ರದ ಅಧಿಕಾರಿಗಳು ಮತ್ತು ಸಿಬ್ಬಂದಿಯು ಪ್ರೀತಿಯಿಂದ ಎಲ್ಲ ನಿರಾಶ್ರಿತರನ್ನು ಆದರಿಸಲಾಗುತ್ತದೆ. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಲುಪಿಸುವ ಮೂಲಕ ಆಶ್ರಯ ಕಲ್ಪಿಸಿರುವುದು ಶ್ಲಾಘನೀಯ ಎಂದರು.
1955ರಲ್ಲಿ ಹಳ್ಳಿಯೊಂದರಲ್ಲಿ ಜನಿಸಿ, ನಂತರ ಚಿತ್ರದುರ್ಗ ನಗರಕ್ಕೆ ಬಂದು ನೆಲೆಸಿ, ಎಲ್ಲ ಸಮಾಜದ ಬಂಧುಗಳೊಂದಿಗೆ, ಮಠಾಧೀಶರೊಂದಿಗೆ ಬೆರೆತು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದೇನೆ. ಸಮಾಜವು ಕೂಡ ನನ್ನನ್ನು ಗುರುತಿಸಿ ಪ್ರೋತ್ಸಾಹಿಸಿದೆ ಎಂದು ತಿಳಿಸಿದ ಅವರು, ಇಲ್ಲಿನ ನಿರಾಶ್ರಿತರಿಗೆ ಹಣ್ಣು ಹಂಚಿ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಲು ಅವಕಾಶ ಸಿಕ್ಕಿರುವುದು ನನ್ನ ಸೌಭಾಗ್ಯ ಎಂದರು.
ಈ ಸಂದರ್ಭದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕ ವಿಜಯ್, ಆಪ್ತ ಸಹಾಯಕ ಎಂ.ಮಹದೇವಯ್ಯ ಸೇರಿದಂತೆ ಎಂ.ಕೃಷ್ಣಪ್ಪ ಅವರ ಪತ್ನಿ ನಗರಸಭೆ ಮಾಜಿ ಸದಸ್ಯ ಗೌರಮ್ಮ, ಪುಷ್ಪ, ರಂಗಸ್ವಾಮಿ ಇದ್ದರು.



