Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಕ್ಷಾತೀತವಾಗಿ ಸನ್ಮಾನಕ್ಕೊಳಗಾದ ಸಭಾಪತಿ ಬಸವರಾಜ್ ಹೊರಟ್ಟಿ

Advertisement
ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ಸಭಾಪತಿ ಬಸವರಾಜ್ ಹೊರಟ್ಟಿಯವರನ್ನು ಪಕ್ಷಾತೀತವಾಗಿ ಸನ್ಮಾನಿಸಲಾಗಿದೆ.
ಸಭಾಪತಿ ಬಸವರಾಜ್ ಹೊರಟ್ಟಿ ಅವರ ರಾಜಕೀಯ ಬದುಕಿಗೆ 45 ವಸಂತಗಳು ತುಂಬಿದ ನೆನಪಿಗಾಗಿ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ "ಗೌರವ ಸನ್ಮಾನ ಸಮಾರಂಭ"ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು.

ಎಲ್ಲ ಪಕ್ಷದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಹೊರಟ್ಟಿಯವರು ಅಜಾತಶತ್ರು. ನೇರ ನುಡಿಯ ದಿಟ್ಟ ವ್ಯಕ್ತಿತ್ವದ ರಾಜಕಾರಣಿಯಾಗಿದ್ದಾರೆ. 1980 ರಲ್ಲಿ ವಿಧಾನಪರಿಷತ್ತಿನ ಶಾಸಕರಾಗಿದ್ದ ಇವರೊಂದಿನ ನನ್ನ ಸ್ನೇಹ ನಾಲ್ಕು ದಶಕಗಳದ್ದು. ಆಡಂಬರವಿಲ್ಲದ ಸ್ನೇಹಜೀವಿಯಾಗಿರುವ ಹೊರಟ್ಟಿಯವರು ಶಿಕ್ಷಕರ ಕ್ಷೇತ್ರದಿಂದ ಎಂಟು ಬಾರಿ ಶಾಸಕರಾಗಿದ್ದು, ಶಿಕ್ಷಕರ ಸಮಸ್ಯೆಗಳಿಗೆ ಧ್ವನಿಯಾಗಿದ್ದಾರೆ.

1983ರಲ್ಲಿ ಶಾಸಕರಾದ ನಂತರ ಹೊರಟ್ಟಿಯವರೊಂದಿಗೆ ಸ್ನೇಹ ಬೆಳೆಯಿತು. ಹಳ್ಳಿಗಾಡಿನ ನಂಟಿರುವ ಇಬ್ಬರೂ ಸಾಮಾನ್ಯಕುಟುಂಬದಿಂದ ಬಂದವರು. ಅಧಿಕಾರ ಮತ್ತು ಹುದ್ದೆಯೊಂದಿಗೆ ವ್ಯಕ್ತಿತ್ವದ ನಂಟು ಹೊಂದುವ ವರ್ಗ ಒಂದಾದರೆ, ಅಧಿಕಾರದ ಹಿರಿಮೆಯನ್ನು ಕಾಯ್ದುಕೊಳ್ಳುವ ವರ್ಗವಿದ್ದು ಹೊರಟ್ಟಿಯವರದು ಎರಡನೇ ವರ್ಗವಾಗಿದೆ. 45 ವರ್ಷಗಳ ರಾಜಕೀಯ ಬದುಕಿನಲ್ಲಿ ಅವರೆಂದಿಗೂ ಅಹಂಕಾರ ತೋರಿದವರಲ್ಲ. ನಾವು ಒಂದೇ ಪಕ್ಷದಲ್ಲಿದ್ದಾಗ ಜೆಡಿಯು ಮತ್ತು ಜೆಡಿಎಸ್ ಪಕ್ಷಗಳನ್ನು ಒಂದುಗೂಡಿಸಲು ಬಹುವಾಗಿ ಪ್ರಯತ್ನಿಸಿದರು, ಆದರೆ ಹಿರಿಯ ನಾಯಕರು ಒಪ್ಪದಿದ್ದ ಕಾರಣ, ಅವರ ಈ ಪ್ರಯತ್ನಕ್ಕೆ ಫಲ ದೊರೆಯಲಿಲ್ಲ.

ನನಗೂ ಅವರಿಗೂ ಆತ್ಮೀಯತೆ ಇದ್ದರೂ ಸಭಾಪತಿ ಕುರ್ಚಿಯಲ್ಲಿ ಕುಳಿತಾಗ ಅದಕ್ಕೆ ನ್ಯಾಯ ಒದಗಿಸುತ್ತಾರೆ. ನನಗೆ ಸ್ನೇಹವಿದೆ ಎಂದು ಹೆಚ್ಚು ಉತ್ತೇಜನ ನೀಡುವುದಾಗಲಿ, ನನ್ನ ಪರವಾಗಿ ಮಾತನಾಡುವುದಾಗಲಿ ಮಾಡಿಲ್ಲ. ಮುಂದೆಯೂ ಮಾಡುವುದಿಲ್ಲ. ನಮಗೆ ಬಹುಮತ ಕಡಿಮೆಯಿದ್ದು ಮುಂದಿನ ಚುನಾವಣೆಯಲ್ಲಿ ಬಹುಮತ ಬರಬಹುದು. ಅಲ್ಲಿಯವರೆಗೆ ಇವರೇ ಮುಂದುವರೆಯುತ್ತಾರೆ. ಸದನ ಉತ್ತಮವಾಗಿ ನಡೆಯುತ್ತಿದೆ. ಸರ್ಕಾರಕ್ಕೆ ಮುಜುಗರವನ್ನುಂಟು ಮಾಡುವ ಕೆಲಸವನ್ನು ಅವರು ಯಾವತ್ತೂ ಮಾಡಿಲ್ಲ.

ಸತತವಾಗಿ ಎಂಟು ಬಾರಿ ವಿಧಾನ ಪರಿಷತ್ ಸದಸ್ಯರಾಗಿರುವುದು ವಿಶ್ವದಾಖಲೆಯಾಗಿದೆ. ಅವರ ವಿಜಯಪಥ ಸದಾ ಮುಂದುವರೆಯಲಿ ಎಂದು ಹಾರೈಸುತ್ತೇನೆ. ಆದರೆ ಬಸವರಾಜ ಹೊರಟ್ಟಿಯವರು ಕಾಂಗ್ರೆಸ್ ಹೊರತುಪಡಿಸಿ, ಬೇರೆ ಯಾವುದೇ ಪಕ್ಷವನ್ನು ಪ್ರತಿನಿಧಿಸಿದರೆ, ಅವರ ವಿರುದ್ಧವೇ ಪ್ರಚಾರ ನಡೆಸುವುದು ಗ್ಯಾರಂಟಿ. ಆದಾಗ್ಯೂ ಹೊರಟ್ಟಿಯವರು ಗೆಲ್ಲಲಿ ಎಂದು ವೈಯಕ್ತಿಕವಾಗಿ ಆಶಿಸುತ್ತೇನೆ. ಸರ್ಕಾರಕ್ಕೆ, ವಿಧಾನಮಂಡಲಕ್ಕೆ ಅವರ ಮಾರ್ಗದರ್ಶನ ಮತ್ತಷ್ಟು ದೊರೆಯಲಿ ಎಂದು ಹಾರೈಸುತ್ತೇನೆ.

ಹೊರಟ್ಟಿ ಅವರು ತಮ್ಮ ಹಳ್ಳಿಯಲ್ಲಿ ಒಂದು ಶಾಲೆಯನ್ನು ಮಾದರಿ ಶಾಲೆಯನ್ನಾಗಿಸಿದ್ದಾರೆ. ಯಾವುದೇ ಖಾಸಗಿ ಶಾಲೆಗಿಂತಲೂ ಅದು ಕಡಿಮೆ ಇಲ್ಲ. ಅವರು ಕಲಿತ ಶಾಲೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಪ್ರತಿಯೊಬ್ಬರೂ ಅವರು ಕಲಿತ ಶಾಲೆಯನ್ನು ಅಭಿವೃದ್ಧಿಪಡಿಸಿದರೆ ಅದರಿಂದ ಹೆಚ್ಚು ಅನುಕೂಲವಾಗಲಿದೆ.

ಬಸವರಾಜ ಹೊರಟ್ಟಿ ಅವರನ್ನು ಹೋರಾಟದ ಹೊರಟ್ಟಿ ಎಂದು ಕರೆಯುತ್ತಾರೆ. ಈಗಾಗಲೇ ದಾಖಲೆ ನಿರ್ಮಾಣ ಮಾಡಿದ್ದು ಮತ್ತೊಬ್ಬರು ಶಿಕ್ಷಕರ ಕ್ಷೇತ್ರದಿಂದ ಈ ದಾಖಲೆಯನ್ನು ಮುರಿಯಲು ಸಾಧ್ಯವಿಲ್ಲ. ನಮ್ಮ ಪಕ್ಷದ ಅಭ್ಯರ್ಥಿಯ ಪರ ಪ್ರಚಾರಕ್ಕಾಗಿ ಒಮ್ಮೆ ಹೋಗಿದ್ದರೂ ನಮ್ಮ ಅಭ್ಯರ್ಥಿ ಗೆಲ್ಲಲಿಲ್ಲ. ನಮ್ಮ ಮಧ್ಯೆ ಸ್ನೇಹವಿದ್ದರೂ ಅವರನ್ನು ಸೋಲಿಸಲು ಹೋಗಿದ್ದೆ. ರಾಜಕಾರಣ ಬೇರೆ, ಸ್ನೇಹ ಬೇರೆ. ಬಸವರಾಜ್ ಬೊಮ್ಮಾಯಿ ಹಾಗೂ ಅವರ ತಂದೆ ನನಗೆ ಬಹಳ ಆತ್ಮೀಯರು. ಆದರೆ ಅವರ ಮಗನನ್ನು ಚುನಾವಣೆಯಲ್ಲಿ ಸೋಲಿಸಬೇಕಾಯಿತು.

ಸಭಾಪತಿಯಾಗಿ ಹೊರಟ್ಟಿಯವರು ನಿಷ್ಪಕ್ಷಪಾತವಾಗಿ ಸದನ ನಡೆಸುತ್ತಾರೆ. ಅಲ್ಲಿ ಕುಳಿತಾಗ ಕಾನೂನಿನ ಪ್ರಕಾರ ಸಭೆ ನಡೆಸುವ ವ್ಯಕ್ತಿತ್ವವನ್ನು ರೂಪಿಸಿಕೊಂಡಿದ್ದಾರೆ. ಪರಿಷತ್ತಿನಲ್ಲಿರುವ ಮೂರೂ ಪಕ್ಷದವರೂ ಅವರನ್ನು ಗೌರವದಿಂದ ಕಾಣುತ್ತಾರೆ. ಕೆಲವೊಮ್ಮೆ ಏಕವಚನ ಬಳಸಿದರು ಯಾರೂ ಕೋಪಿಸಿಕೊಳ್ಳುವುದಿಲ್ಲ. ಅಷ್ಟರಮಟ್ಟಿನ ವ್ಯಕ್ತಿತ್ವ ಅವರದ್ದು. ಅವರ ಅನುಭವದ ಆಧಾರದ ಮೇಲೆ ಸದನಕ್ಕೆ ಮಾರ್ಗದರ್ಶನ ಮಾಡುತ್ತಾರೆ. ಸಂಸದೀಯ ಪಟು ಆಗಿರುವುದರಿಂದ ಯಾವುದಕ್ಕೆ ಎಷ್ಟು ಒತ್ತು ಕೊಡಬೇಕೆಂದು ಅವರಿಗೆ ಗೊತ್ತಿದೆ, ಯಾವುದೇ ಪಕ್ಷದವರನ್ನಾಗಲಿ ಬೆದರಿಸಿ ಸುಮ್ಮನೆ ಕೂರಿಸುತ್ತಾರೆ. ಇವರಲ್ಲದೇ ಬೇರೆ ಯಾರೇ ಆಗಿದ್ದರೂ ಅದನ್ನು ಒಪ್ಪುತ್ತಿದ್ದುದ್ದು ಕಷ್ಟ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ