Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 20 ಕೋಟಿ ನಗದು

Advertisement
ಚಂದ್ರವಳ್ಳಿ ನ್ಯೂಸ್, ಅಹಮದಾಬಾದ್:
2025ರ ಐಪಿಎಲ್-18ನೇ ಆವೃತ್ತಿಯ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 20 ಕೋಟಿ ನಗದು ಬಹುಮಾನ ದೊರೆತಿದೆ. ರನ್ನರ್ ಅಪ್ ಪಂಜಾಬ್ ಕಿಂಗ್ಸ್ 13 ಕೋಟಿ ಹಣ ಸಿಕ್ಕಿದೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಆರು ರನ್ ಗಳ ಅಂತರದಿಂದ ಸೋಲಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18 ವರ್ಷಗಳ ನಂತರ ಮೊದಲ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡು ಬೀಗಿತು.

ವಿಶ್ವದ ಅತಿದೊಡ್ಡ ಐಪಿಎಲ್ 2025 18 ನೇ ಆವೃತ್ತಿಯ ಸಮಾರೋಪ ಸಮಾರಂಭದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಡೈನಾಮಿಕ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಈ ಬಾರಿಯ ಅತ್ಯಂತ ಮೌಲ್ಯಯುತ ಆಟಗಾರ ಪ್ರಶಸ್ತಿಗೆ ಭಾಜನರಾದರು.

ಗುಜರಾತ್ ಟೈಟನ್ಸ್ ತಂಡದ ಸ್ಟಾರ್ ಬ್ಯಾಟರ್ ಸಾಯಿ ಸುದರ್ಶನ್ ಉದಯೋನ್ಮುಖ ಆಟಗಾರ ನಾಗಿ ಹೊರಹೊಮ್ಮಿದರು. ಫೈನಲ್ ಪಂದ್ಯ ಮುಗಿದ ನಂತರ ಟೀಂ ಇಂಡಿಯಾ ಟಿ-20 ನಾಯಕ ಸೂರ್ಯ ಕುಮಾರ್ ಯಾದವ್ ಅತ್ಯಂತ ಮೌಲ್ಯಯುತ ಆಟಗಾರ ಪ್ರಶಸ್ತಿ ಸ್ವೀಕರಿಸಿದರು.
ಈ ಬಾರಿಯ ಟೂರ್ನಿಯಲ್ಲಿ ಅವರು
65.18 ರ ಸರಾಸರಿಯಲ್ಲಿ ಐದು ಅರ್ಧ ಶತಕಗಳೊಂದಿಗೆ 717 ರನ್ ಗಳಿಸಿದ್ದಾರೆ.

ಐಪಿಎಲ್ ನಲ್ಲಿ ಇದೇ ಮೊದಲ ಬಾರಿಗೆ ಆರಂಭಿಕರಲ್ಲದ ಆಟಗಾರನಾಗಿ 700 ರನ್ ಗಳಿಸಿದ ಹೆಗ್ಗಳಿಕೆಗೆ ಅವರು ಪಾತ್ರರಾದರು.

ಈ ಮಧ್ಯೆ ಸಾಯಿ ಸುದರ್ಶನ್ ಅತಿ ಹೆಚ್ಚು 759 ರನ್ ಗಳಿಸುವ ಮೂಲಕ ಆರಂಜ್ ಕ್ಯಾಪ್ ಮುಡಿಗೇರಿಸಿಕೊಂಡರು. ಪ್ರಸಿದ್ಧ್ ಕೃಷ್ಣ ಅತಿ ಹೆಚ್ಚು 25 ವಿಕೆಟ್ ಪಡೆಯುವ ಮೂಲಕ ಪರ್ಪಲ್ ಕ್ಯಾಪ್ ಪಡೆದರು.

ಪ್ರಶಸ್ತಿ ವಿಜೇತರ ಪಟ್ಟಿ:
ಈ ಬಾರಿಯ ಮೌಲ್ಯಯುತ ಆಟಗಾರ: ಸೂರ್ಯಕುಮಾರ್ ಯಾದವ್
ಆರೆಂಜ್ ಕ್ಯಾಪ್ ವಿಜೇತ: ಸಾಯಿ ಸುದರ್ಶನ್ (
759 ರನ್)
ಅತ್ಯಂತ ಹೆಚ್ಚಿನ ಕ್ಯಾಚ್ ಪಡೆದ ಆಟಗಾರ: ಕಮಿಂದು ಮೆಂಡಿಸ್


ಪರ್ಪಲ್ ಕ್ಯಾಪ್ ವಿಜೇತ: ಪ್ರಸಿದ್ಧ್ ಕೃಷ್ಣ (25 ವಿಕೆಟ್), ಫೇರ್‌ಪ್ಲೇ ಪ್ರಶಸ್ತಿ: ಚೆನ್ನೈ ಸೂಪರ್ ಕಿಂಗ್ಸ್, ಉದಯೋನ್ಮುಖ ಆಟಗಾರ: ಸಾಯಿ ಸುದರ್ಶನ್ಸಾಯಿ ಸುದರ್ಶನ್ ಅವರು ಉದಯೋನ್ಮುಖ ಆಟಗಾರ, ಹೆಚ್ಚು ಬೌಂಡರಿ ಬಾರಿಸಿದ ಆಟಗಾರ ಮತ್ತಿತರ ಪ್ರಶಸ್ತಿಗೆ ಭಾಜನರಾದರು. ಇವರೆಲ್ಲರೂ ತಲಾ 10 ಲಕ್ಷ ನಗದು ಬಹುಮಾನ ಸ್ವೀಕರಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ