Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಬಿ ಜಿ ರಾಮ್ ಜಿ ಕಾಯ್ದೆಯ ಜಾರಿಗೆ ಚಂದ್ರಬಾಬು ನಾಯ್ಡು ಆತಂಕ

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ವಿಬಿ ಜಿ ರಾಮ್ ಜಿ ಕಾಯ್ದೆಯ ಜಾರಿ ಬಗ್ಗೆ ವ್ಯಕ್ತಪಡಿಸಿರುವ ಆತಂಕ, ರಾಜಕೀಯವಾಗಿ ಮಹತ್ವದ್ದಾಗಿದೆ ಮತ್ತು ಕೇಂದ್ರ- ರಾಜ್ಯ ಸಂಬಂಧದ ದೃಷ್ಟಿಯಿಂದ ಗಂಭೀರ ಪರಿಣಾಮಗಳ ಬಗ್ಗೆ ಯೋಚನೆ ಮಾಡುವಂತೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಶೇಷವಾಗಿ ಈ ಕಾಯ್ದೆಯಲ್ಲಿ ಅನುದಾನ ಹಂಚಿಕೆಯ ಹೊಸ ಮಾದರಿ ಹಾಗೂ ರಾಜ್ಯಗಳ ಮೇಲೆ ಬರುವ ಹೆಚ್ಚುವರಿ ಆರ್ಥಿಕ ಹೊರೆಯ ಕುರಿತು ಚಂದ್ರಬಾಬು ನಾಯ್ಡು ಅವರು ವ್ಯಕ್ತಪಡಿಸಿರುವ ಭೀತಿಯನ್ನು ಎಲ್ಲ ರಾಜ್ಯ ಸರ್ಕಾರಗಳು ಅರ್ಥಮಾಡಿಕೊಳ್ಳಬೇಕಾಗಿದೆ.

ಈ ಆತಂಕಗಳು ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಅಸ್ತಿತ್ವಕ್ಕಾಗಿ ನೆಚ್ಚಿಕೊಂಡಿರುವ ಮೈತ್ರಿ ಪಕ್ಷದಿಂದಲೇ ಬಂದಿರುವುದು ವಿಶೇಷ.

ಕಳೆದ ಹಲವು ತಿಂಗಳುಗಳಿಂದ ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕ ಸೇರಿದಂತೆ ಬಿಜೆಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳು ವಿಬಿ‌ ಜಿ‌ ರಾಮ್ ಜಿ ಕಾಯ್ದೆಯು ಒಕ್ಕೂಟ ವ್ಯವಸ್ಥೆಯ ಪರಸ್ಪರ ಸಹಕಾರದ ಆಶಯಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಎಚ್ಚರಿಸುತ್ತಿವೆ. ಈ ಕಾಯ್ದೆಯು ಹಣಕಾಸಿನ ಹೊಣೆಗಾರಿಕೆಯನ್ನು‌ ರಾಜ್ಯಗಳ‌ ಹೆಗಲಿಗೆ ವರ್ಗಾಯಿಸುತ್ತದೆ ಎಂಬುದು ನಮ್ಮ ಆಕ್ಷೇಪ.

ಈಗ ಬಿಜೆಪಿಯೊಂದಿಗಿನ ಮೈತ್ರಿಕೂಟದ ಮುಖ್ಯಮಂತ್ರಿ ಇದೇ ಆತಂಕಗಳನ್ನು ವ್ಯಕ್ತಪಡಿಸಿರುವುದು, ಎನ್‌ಡಿಎ ಮೈತ್ರಿ ಒಳಗಿನ ಒಡಕನ್ನು ಬಹಿರಂಗಪಡಿಸುತ್ತಿದೆ ಮತ್ತು ಈ ಕಾಯ್ದೆಯ ಬಗ್ಗೆ ಬಿಜೆಪಿಯ ಸಮರ್ಥನೆ ಕೂಡ ಎಂತಹ ಪೊಳ್ಳು ಎಂಬುದಕ್ಕೆ ಸಾಕ್ಷ್ಯ ನೀಡಿದಂತಿದೆ. ಇದೇ ರೀತಿಯ ಆಕ್ಷೇಪಣೆಗಳನ್ನು ಹಿಂದೆ ನಾವು ಮಾಡಿದಾಗ ಅದನ್ನು ರಾಜಕೀಯ ಪ್ರೇರಿತ ಟೀಕೆ ಎಂದು ತಳ್ಳಿ ಹಾಕಿದವರು, ಈಗೇನು ಹೇಳುತ್ತಾರೆ? ಎಂದು ಸಿಎಂ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಎರಡು ಕಾಯ್ದೆಗಳ ನಡುವಿನ ವ್ಯತ್ಯಾಸ ಸ್ಪಷ್ಟವಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ ಅಡಿಯಲ್ಲಿ ಗ್ರಾಮೀಣ ಉದ್ಯೋಗವು ಕಾನೂನುಬದ್ಧ ಹಕ್ಕಾಗಿದ್ದು, ಕೇಂದ್ರ ಸರ್ಕಾರದ ನಿಶ್ಚಿತ ಅನುದಾನದಿಂದ ಜಾರಿಯಾಗುತ್ತಿತ್ತು. ಆದರೆ ಹೊಸ ಕಾಯ್ದೆಯಡಿಯಲ್ಲಿ ಆ ಗ್ಯಾರಂಟಿ ಇಲ್ಲವಾಗಿದೆ. ರಾಜ್ಯಗಳು ಕಾಮಗಾರಿಗಳನ್ನು ಅನುಷ್ಠಾನ ಮಾಡಲು ವೆಚ್ಚವನ್ನು ಹಂಚಿಕೊಳ್ಳಬೇಕಾಗಿದೆ, ಅಲ್ಲದೆ ಅನುದಾನ ಸಿಗುವುದಕ್ಕೆ ಯಾವುದೇ ಕಾನೂನಾತ್ಮಕ ಖಾತರಿ ಸಹ ಇಲ್ಲ. ಜನರ ಹಕ್ಕಾಗಿದ್ದ ಉದ್ಯೋಗ ಭದ್ರತೆಯನ್ನು ಈಗ ಸಂಧಾನದ ವಿಷಯವನ್ನಾಗಿ ಮಾಡಲಾಗಿದೆ.

ಈ ಬದಲಾವಣೆಯ ಪರಿಣಾಮಗಳು ಅತ್ಯಂತ ಗಂಭೀರ ಸ್ವರೂಪದ್ದಾಗಿವೆ. ಒಬ್ಬ ಮುಖ್ಯಮಂತ್ರಿ ಪರ್ಯಾಯ ಆರ್ಥಿಕ ನೆರವಿಗಾಗಿಖಾಸಗಿ ಮಾತುಕತೆ" ನಡೆಸಬೇಕಾಗಿರುವ ಸ್ಥಿತಿ ಉದ್ಭವಿಸಿದೆ ಎಂದರೆ, ಅನುದಾನ ಪಡೆಯುವ ಅವಕಾಶವು ಕಾನೂನಾತ್ಮಕವಾಗಿರದೆ, ರಾಜಕೀಯ ಲೆಕ್ಕಾಚಾರಗಳ‌ ಮೇಲೆ ನಿರ್ಧರಿತವಾಗಿದೆ ಎಂಬ ಅಂಶ ಸ್ಪಷ್ಟ.

ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ, ಅನುದಾನ ಹಂಚಿಕೆಯು ರಾಜಕೀಯ ಹೊಂದಾಣಿಕೆಯ ಮೇಲೆ ನಿರ್ಧರಿತವಾಗುವ ಅಪಾಯವಿದೆ. ಕರ್ನಾಟಕ ಸೇರಿದಂತೆ ಬಿಜೆಪಿಯೇತರ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ಇದು ಮಾರಕವಾಗಲಿದೆ.

ಎನ್‌ಡಿಎ ಮೈತ್ರಿಕೂಟದ ಪಾಲುದಾರರು, ವಿಶೇಷವಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿಗಳಿಗೆ ಈ ಹೊಸ ನಿಯಮಗಳಲ್ಲಿ ಅಸ್ಥಿರತೆ ಕಂಡುಬಂದರೆ ಖಂಡಿತವಾಗಿಯೂ ಇದನ್ನು ಸಂಸತ್ತಿನಲ್ಲಿ ಬಹಿರಂಗವಾಗಿ ಚರ್ಚಿಸಬೇಕು. ಅದನ್ನು ಬಿಟ್ಟು ವಿಶೇಷ ಅನುದಾನವೋ ಅಥವಾ ಖಾಸಗಿ ಭರವಸೆಗಳ ಮೂಲಕವೋ ಇದಕ್ಕೆ ಪರಿಹಾರ ಕಂಡುಕೊಳ್ಳುವುದು ಸರಿಯಲ್ಲ.

ಈ ಎಲ್ಲಾ ಬೆಳವಣಿಗೆಗಳಿಂದ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ರದ್ದು ಮಾಡಿ, ಅಗತ್ಯ ಸುಧಾರಣೆಗಳೊಂದಿಗೆ ಮನರೇಗಾ ಕಾಯ್ದೆಯನ್ನು ಮರುಸ್ಥಾಪಿಸಲೇಬೇಕು ಎಂಬಂಶ ಸ್ಪಷ್ಟವಾಗಿ ಗೋಚರಿಸುತ್ತಿದೆ. ಉದ್ಯೋಗ ಭದ್ರತೆಯನ್ನು ಅನಿಶ್ಚಿತತೆಗೆ ಒಡ್ಡಲು ಸಾಧ್ಯವಿಲ್ಲ. ನಿಶ್ಚಿತ ಅನುದಾನ ಮತ್ತು ಎಲ್ಲಾ ರಾಜ್ಯಗಳಿಗೂ ಸಮಾನ ನ್ಯಾಯದ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಸಾಧ್ಯವಿದೆಯೇ ಹೊರತು, ರಾಜಕೀಯ ಹೊಂದಾಣಿಕೆಯ ಲೆಕ್ಕಾಚಾರಗಳಿಂದಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ