Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಪಘಾತದಲ್ಲಿ ಮೃತಪಟ್ಟ ಕೋಳಿಗಳು 'ಜೀವಸಂಪತ್ತು': ವಿಮಾ ಪರಿಹಾರ ಎತ್ತಿಹಿಡಿದ ಹೈಕೋರ್ಟ್

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರಕು ಸಾಗಣೆ ವಾಹನ ಅಪಘಾತದಲ್ಲಿ ಸಾವಿಗೀಡಾದ ಬ್ರಾಯ್ಲರ್ ಕೋಳಿಗಳನ್ನು 'ಜೀವಸಂಪತ್ತು' ಹಾಗೂ 'ಸರಕು' ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್‌ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಅಲ್ಲದೆ, ಅಪಘಾತದಲ್ಲಿ ಮೃತಪಟ್ಟ ಕೋಳಿಗಳಿಗೆ ವಿಮಾ ಕಂಪನಿಯು ಪರಿಹಾರ ನೀಡುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದೆ.

ಕೋಳಿಗಳಿಗೆ ಪರಿಹಾರ ನೀಡುವಂತೆ ಮೋಟಾರು ವಾಹನ ಅಪಘಾತಗಳ ಪರಿಹಾರ ನ್ಯಾಯಾಧಿಕರಣ ನೀಡಿದ್ದ ಆದೇಶವನ್ನು ಪ್ರಶ್ನಿಸಿ 'ರಿಲಯನ್ಸ್‌ಜನರಲ್ ಇನ್ಸೂರೆನ್ಸ್ ಕಂಪನಿ' ಸಲ್ಲಿಸಿದ್ದ ಮೇಲ್ಮನವಿ ಹಾಗೂ ಹೆಚ್ಚುವರಿ ಪರಿಹಾರ ಕೋರಿ ಮಾಲೀಕ ಕೆ.ವೀರನಾರಾಯಣ ಸ್ವಾಮಿ ಸಲ್ಲಿಸಿದ್ದ ಅರ್ಜಿಯ ಜಂಟಿ ವಿಚಾರಣೆ ನಡೆಸಿದ ಹೈಕೋರ್ಟ್‌ನ ಧಾರವಾಡ ಪೀಠದ ನ್ಯಾಯಮೂರ್ತಿ ಕೆ.ಬಿ. ಗೀತಾ ಅವರಿದ್ದ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.

Advertisement

"ಕರ್ನಾಟಕ ಮೋಟಾರು ವಾಹನ ನಿಯಮಗಳಲ್ಲಿ ಕೋಳಿಯ:
ಉಲ್ಲೇಖವಿಲ್ಲದಿದ್ದರೂ, ಮೋಟಾರು ವಾಹನ ಕಾಯ್ದೆ-1988ರ ಸೆಕ್ಷನ್ 2(13)ರ ಪ್ರಕಾರ 'ಸರಕು' ಎಂಬ ಪದವು ಜೀವಸಂಪತ್ತನ್ನು ಒಳಗೊಂಡಿರುತ್ತದೆ. ಕೋಳಿಗಳೂ ಸಹ ಜೀವವಿರುವ ಪ್ರಾಣಿ/ಪಕ್ಷಿಗಳಾಗಿರುವುದರಿಂದ ಅವುಗಳನ್ನು ಜೀವಸಂಪತ್ತು ಹಾಗೂ ಸರಕು ಎಂದು ಪರಿಗಣಿಸುವುದು ಸೂಕ್ತ" ಎಂದು ಪೀಠ ತಿಳಿಸಿದೆ.

ಬಡ್ಡಿ ದರ ಶೇ. 6ಕ್ಕೆ ಇಳಿಕೆ:
ಬಳ್ಳಾರಿಯ ಮೋಟಾರು ವಾಹನ ಅಪಘಾತಗಳ ಪರಿಹಾರ ನ್ಯಾಯಾಧಿಕರಣವು ಮಾಲೀಕರಿಗೆ ವಿಧಿಸಿದ್ದ 4,51,000 ಪರಿಹಾರ ಮೊತ್ತವನ್ನು ಹೈಕೋರ್ಟ್ ಎತ್ತಿಹಿಡಿದಿದೆಯಾದರೂ, ನ್ಯಾಯಾಧಿಕರಣ ವಿಧಿಸಿದ್ದ ಶೇ. 7ರಷ್ಟು ಬಡ್ಡಿದರವನ್ನು ಶೇ. 6ಕ್ಕೆ ಇಳಿಸಿ ಆದೇಶಿಸಿದೆ. ಇದೇ ವೇಳೆ, ಹೆಚ್ಚುವರಿ ಪರಿಹಾರ ಕೋರಿ ಮಾಲೀಕ ವೀರನಾರಾಯಣಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿದೆ.

ಪ್ರಕರಣದ ಹಿನ್ನೆಲೆ:
ಬಳ್ಳಾರಿಯ 'ಬಾಲಾಜಿ ಪೌಲ್ಟ್ರಿ ಫಾರ್ಮ್' ಮಾಲೀಕರಾದ ಕೆ.ವೀರ ನಾರಾಯಣಸ್ವಾಮಿ ಅವರು 2013ರ ಜೂನ್ 18ರಂದು ಚಳ್ಳಕೆರೆಯಿಂದ 2,250 ಬ್ರಾಯ್ಲರ್ ಕೋಳಿಗಳನ್ನು ಖರೀದಿಸಿ ಐಚರ್ ವಾಹನದಲ್ಲಿ ಒಯ್ಯುತ್ತಿದ್ದಾಗ, ಜೂನ್ 19ರ ಮುಂಜಾನೆ ವಾಹನ ಪಲ್ಟಿಯಾಗಿ 2,000 ಕೋಳಿಗಳು ಮೃತಪಟ್ಟಿದ್ದವು. ಇದರಿಂದ ತಮಗಾದ ನಷ್ಟಕ್ಕೆ 5,90,000 ಪರಿಹಾರ ಕೋರಿ ಅವರು ನ್ಯಾಯಾಧಿಕರಣ ಮೆಟ್ಟಿಲೇರಿದ್ದರು. ಕೋಳಿಗಳು ಜಾನುವಾರು ಅಥವಾ ಜೀವಸಂಪತ್ತಿನ ವ್ಯಾಪ್ತಿಗೆ ಬರುವುದಿಲ್ಲ ಎಂಬ ವಿಮಾ ಕಂಪನಿಯ ವಾದವನ್ನು ಹೈಕೋರ್ಟ್ ಇದೀಗ ತಳ್ಳಿಹಾಕಿದೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅಜ್ಜ-ಅಜ್ಜಿಯರ ದಿನಾಚರಣೆ: ಹಿರಿಯ ಜೀವಗಳೊಂದಿಗೆ ಮಗುವಾದ ಸಂಭ್ರಮ!ಆತ್ರೇಯ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳ ಅತಂತ್ರ ಭವಿಷ್ಯ: ಸರ್ಕಾರದ ತುರ್ತು ಮಧ್ಯಪ್ರವೇಶಕ್ಕೆ ಬಿ.ಎಸ್.ಚಂದ್ರಶೇಖರ್ ಆಗ್ರಹಸತೀಶ್ ಜಾರಕಿಹೊಳಿ ಮೇಲಿನ ಇ.ಡಿ ದಾಳಿ ರಾಜಕೀಯ ಪ್ರೇರಿತ: ಕಾಂಗ್ರೆಸ್ ಮುಖಂಡರ ತೀವ್ರ ಆಕ್ರೋಶತನ್ನ ಪತ್ನಿಯನ್ನು ಆಕೆಯ ಇಚ್ಛೆಯಂತೆ ಪ್ರಿಯಕರನೊಡನೆ ಮದುವೆ ಮಾಡಿಸಿದ ವಿಶಾಲ ಹೃದಯದ ಪತಿ!ಪತ್ರಕರ್ತ ಜಿ. ಮಹಂತೇಶ್‌ಗೆ ಜೀವ ಬೆದರಿಕೆ ಪ್ರಕರಣ: ವಿಪಕ್ಷಗಳ ತೀವ್ರ ಆಕ್ರೋಶದ ಬೆನ್ನಲ್ಲೇ ಎಫ್‌ಐಆರ್ ದಾಖಲಿಸಿದ ನಂದಿನಿ ಲೇಔಟ್ ಪೊಲೀಸರುಜೈಲಿನಲ್ಲೂ ಮುಂದುವರಿದ ಪ್ರಜ್ವಲ್ ರೇವಣ್ಣ ವಿಕೃತಿ: ಸೆಲ್‌ನಲ್ಲೇ ಪೆನ್ ಡ್ರೈವ್ ಬಳಸಿ ಅಶ್ಲೀಲ ವೀಡಿಯೋ ವೀಕ್ಷಣೆ!ಮಸೀದಿ ಮುಂದೆ ಗಣೇಶ ಮೆರವಣಿಗೆ ನಿಷೇಧ: ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ರೋಶಭಾರತ-ಚೀನಾ ಸಂಬಂಧಕ್ಕೆ ಹೊಸ ಚೈತನ್ಯ: ಭಾರತ ಭೇಟಿಗಾಗಿ ದೆಹಲಿಗೆ ಆಗಮಿಸಿದ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ಇಂಟರ್ನೆಟ್ ಇಲ್ಲದೆಯೂ ಯುಪಿಐ ಪಾವತಿ: ‘ಟ್ಯಾಪ್‌ಆ್ಯಂಡ್‌ಪೇ’ ಹಾಗೂ ‘ಮೈಯುಪಿಐ’ ಹೊಸ ಫೀಚರ್‌ಪರಿಚಯಿಸಿದ ಆರ್‌ಬಿಐನಮಗೆ ಹಾಕಿರುವ ಬೇಡಿ ಬಿಚ್ಚಿದರೆ ಕರ್ನಾಟಕವನ್ನೇ ಸ್ವಚ್ಛ ಮಾಡುತ್ತೇವೆ: ನ್ಯಾ. ಬಿ. ವೀರಪ್ಪ