ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ನಗರದ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ನಿರ್ದೇಶನಾಲಯದ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿ, ದೇಶದ ಗಡಿ ಕಾಯುತ್ತಾ ಪ್ರಾಣತ್ಯಾಗ ಮಾಡಿದ ವೀರ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.
ಸಾಹಸ ಮತ್ತು ತ್ಯಾಗದ ಸಂಕೇತವಾದ ಈ ದಿನದಂದು ದೇಶದ ಸಾರ್ವಭೌಮತ್ವ ಎತ್ತಿಹಿಡಿದ ಯೋಧರ ಸ್ಮರಣೆ ಮಾಡಲಾಯಿತು.
ವೀರ ಯೋಧರ ತ್ಯಾಗ ಅಮರ:
ಕಾರ್ಯಕ್ರಮದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾರ್ಗಿಲ್ ಯುದ್ಧದಲ್ಲಿ ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ತೃಣಸಮಾನವಾಗಿ ಭಾವಿಸಿ ಹೋರಾಡಿದ ಯೋಧರ ತ್ಯಾಗ ಮತ್ತು ಬಲಿದಾನ ಎಂದಿಗೂ ಅಮರ. ಯೋಧರ ದೇಶಪ್ರೇಮ ಮತ್ತು ಶೌರ್ಯ ಪ್ರತಿಯೊಬ್ಬ ಭಾರತೀಯನಿಗೂ ಪ್ರೇರಣೆಯಾಗಿದೆ ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಸೇನಾಧಿಕಾರಿಗಳು, ಹಿರಿಯ ಸೈನಿಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ವೀರ ಹುತಾತ್ಮರಿಗೆ ಅಂಜಲಿ ಸಲ್ಲಿಸಿದರು.



