Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಮುಖ್ಯಮಂತ್ರಿ ಸಿದ್ದರಾಮಯ್ಯ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಶಾಸಕ ರಾಜು ಕಾಗೆ ಅವರೊಂದಿಗೆ ಮಾತುಕತೆ ನಡೆಸಿದರು.


ಸಿದ್ದರಾಮಯ್ಯ ಅವರ ಆಪ್ತರಾಗಿರುವ ಹಿರಿಯ ಶಾಸಕ ಬಿ.ಆರ್ ಪಾಟೀಲ್ ಅವರು ಮನೆ ಹಂಚಿಕೆ ಮಾಡಲು ಲಂಚ ನೀಡಬೇಕಾಗುತ್ತದೆ ಎಂದು ಆರೋಪಿಸಿದ್ದರು ಈ ಆರೋಪವನ್ನು ಕಾಗೆ ಕೂಡ ಬೆಂಬಲಿಸಿದ್ದರು.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೂವರು ನಾಯಕರಿಗೆ ಸಾರ್ವಜನಿಕವಾಗಿ ಮಾತನಾಡುವ ಮೊದಲು ತಮ್ಮೊಂದಿಗೆ ಚರ್ಚಿಸಬೇಕಿತ್ತು ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.


ಕೆಲವು ಸಚಿವರ ಕಾರ್ಯವೈಖರಿಯ ಬಗ್ಗೆ ಹೆಚ್ಚಿನ ಶಾಸಕರು ಅತೃಪ್ತರಾಗಿದ್ದಾರೆ ಎಂಬ ಮಾಹಿತಿ ಹೈಕಮಾಂಡ್‌ಗೆ ಇರುವುದರಿಂದ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಒಂದು ವಾರದಲ್ಲಿ ಆಗಮಿಸಿ ಅವರ ಕುಂದುಕೊರತೆಗಳನ್ನು ಆಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.


ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಸಚಿವ ಎಚ್‌ಸಿ ಮಹದೇವಪ್ಪ ಮತ್ತು ಪಕ್ಷದ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಅವರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರನ್ನು ಬುಧವಾರ ಭೇಟಿಯಾಗಿದ್ದರು. ಎಂಎಲ್ ಸಿ ನಾಮನಿರ್ದೇಶನಗಳಿಗೆ ಸೂಚಿಸಲಾದ ನಾಲ್ಕು ಹೆಸರುಗಳಿಗೆ ಅನುಮತಿ ಪಡೆಯಲು ಸಿಎಂ ಬಯಸಿದ್ದರು. ಆದರೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶದಲ್ಲಿರುವ ಕಾರಣ, ಅವರು ಹಿಂದಿರುಗಿದ ನಂತರ ಹೈಕಮಾಂಡ್ ಈ ಸಂಬಂಧ ನಿರ್ಧಾರ ತೆಗೆದುಕೊಳ್ಳಬಹುದು. ಪಟ್ಟಿಯಲ್ಲಿರುವ ನಾಲ್ಕು ಹೆಸರುಗಳಲ್ಲಿ ಒಂದನ್ನು ಬದಲಾಯಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಹೊಂದಿದ್ದು ಆ ಹುದ್ದೆಯನ್ನು ಬದಲಾಯಿಸಬೇಕೆಂದು ಸಿದ್ದರಾಮಯ್ಯ ಬಯಸಿದ್ದರೂ, ಪಕ್ಷದ ಹೈಕಮಾಂಡ್ ಈ ಹಂತದಲ್ಲಿ ಬದಲಿಸುವ ಮನಸ್ಥಿತಿಯಲ್ಲಿಲ್ಲ ಎನ್ನಲಾಗಿದೆ.

ಲಂಚದ ಆರೋಪದಲ್ಲಿ ತಮ್ಮ ಇಲಾಖೆಯ ಯಾವುದೇ ಪಾತ್ರವಿಲ್ಲ, ಇದಕ್ಕೆ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರೇ ಕಾರಣ ಎಂದು ಜಮೀರ್ ಮುಖ್ಯಮಂತ್ರಿಗೆ ತಿಳಿಸಿದರು ಎಂದು ಮೂಲಗಳು ತಿಳಿಸಿವೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ