ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಲೆಕ್ಟ್ರಾನಿಕ್ ಸಿಟಿಯ ಕೃಷ್ಣ ಆರೋಗ್ಯ ವಿಜ್ಞಾನ ಸಂಸ್ಥೆಗೆ (KIMS) ಭೇಟಿ ನೀಡಿ, ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯೋಜನಾ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಯಲ್ಲಿ ಸಚಿವರನ್ನು ಭೇಟಿ ಮಾಡಿದ ಮುಖ್ಯಮಂತ್ರಿಗಳು, ಅವರಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ವೈದ್ಯರಿಂದ ವಿವರವಾದ ಮಾಹಿತಿ ಪಡೆದರು. ಬಳಿಕ ಸುಧಾಕರ್ ಅವರ ಕುಟುಂಬ ಸದಸ್ಯರೊಂದಿಗೆ ಮಾತನಾಡಿ, ಧೈರ್ಯ ತುಂಬಿದರು. ಸಚಿವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಸಿಎಂ ಇದೇ ಸಂದರ್ಭದಲ್ಲಿ ಹಾರೈಸಿದರು.
ಗಣ್ಯರ ಭೇಟಿ:
ಮುಖ್ಯಮಂತ್ರಿಗಳ ಜೊತೆಯಲ್ಲಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಬೈರತಿ ಸುರೇಶ್, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹಾಗೂ ಮಾಯಕೊಂಡ ಶಾಸಕ ಬಸವಂತಪ್ಪ ಅವರು ಉಪಸ್ಥಿತರಿದ್ದು, ಸಚಿವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.


ಸದ್ಯ ಸಚಿವ ಸುಧಾಕರ್ ಅವರು ವೈದ್ಯರ ನಿಗಾದಲ್ಲಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.


