Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗ ಕೇಂದ್ರಿಯ ವಿದ್ಯಾಲಯ: ಬೋಧಕ ಹಾಗೂ ಬೋಧಕೇತರ ಹುದ್ದೆ ಭರ್ತಿಗೆ ನೇರ ಸಂದರ್ಶನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದ ಕೇಂದ್ರಿಯ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿವಿಧ ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಏಪ್ರಿಲ್ 13 ರಂದು ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.


ವಿವಿಧ ವಿಷಯಗಳವಾರು ಪ್ರಾಥಮಿಕ ಶಾಲಾ ಶಿಕ್ಷಕರು, ಕಂಪ್ಯೂಟರ್, ಯೋಗ ಹಾಗೂ ಕ್ರೀಡಾ ತರಬೇತುದಾರರು, ಸಂಗೀತ ಶಿಕ್ಷಕರು, ನರ್ಸ್, ವಿಶೇಷ ಶಿಕ್ಷಕರು ಮತ್ತು ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಸಂದರ್ಶನವು ಇದೇ ಏಪ್ರಿಲ್ 13 ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿರುವ ಪಿಎಂ ಶ್ರೀ ಕೇಂದ್ರಿಯ ವಿದ್ಯಾಲಯದಲ್ಲಿ ಬೆಳಿಗ್ಗೆ 11:30 ರಿಂದ ಆರಂಭವಾಗುವುದು. ಅಭ್ಯರ್ಥಿಗಳು ಬೆಳಿಗ್ಗೆ 9 ಗಂಟೆಯಿAದ 11 ಗಂಟೆಯ ಒಳಗಾಗಿ ವರದಿ ಮಾಡಿಕೊಳ್ಳಬೇಕು.

ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳು, ಒಂದು ಸೆಟ್ ಸ್ವಯಂ ದೃಢೀಕೃತ ಛಾಯಾಪ್ರತಿಗಳು, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಭರ್ತಿ ಮಾಡಿದ ಅರ್ಜಿ ನಮೂನೆಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನಕ್ಕೆ ಹಾಜರಾಗುವ ಮುನ್ನ ಅಭ್ಯರ್ಥಿಗಳು ಕಡ್ಡಾಯವಾಗಿ ಅಧಿಕೃತ ಪೋರ್ಟಲ್  https://samvida-sathi.kvs.gov.in/    ನಲ್ಲಿ ನೋಂದಾಯಿಸಿಕೊಳ್ಳಬೇಕು.

ಶೈಕ್ಷಣಿಕ ಅರ್ಹತೆಗಳು ಕೇಂದ್ರಿಯ ವಿದ್ಯಾಲಯದ ನಿಯಮಾವಳಿಗಳ ಪ್ರಕಾರ ಇರಲಿದ್ದು, ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ವಿದ್ಯಾಲಯದ ನೋಟಿಸ್ ಬೋರ್ಡ್ ಅಥವಾ ಅಧಿಕೃತ ವೆಬ್‌ಸೈಟ್ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ