Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಟಿ ರವಿ-ಲಕ್ಷ್ಮಿ ಹೆಬ್ಬಾಳ್ಕರ್ ಪ್ರಕರಣ ಫೆ.24ಕ್ಕೆ ಮುಂದೂಡಿದ ಕೋರ್ಟ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಸಿಟಿ ರವಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಧ್ಯ ನಡೆದ  ಅವಹೇಳನಕಾರಿ ಹೇಳಿಕೆ ಆರೋಪ ಸಂಬಂಧ ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಪರಿಷತ್ ಸದಸ್ಯ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಫೆ.
24ಕ್ಕೆ ಮುಂದೂಡಿ ಆದೇಶಿಸಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಸಿ.ಟಿ. ರವಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಪರ ವಕೀಲರ ಮನವಿಯ ಮೇರೆಗೆ ವಿಚಾರಣೆ ಮುಂದೂಡಿತು.

ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು ಸಿ.ಟಿ.ರವಿ ಪರ ವಾದ ಮಂಡಿಸಿ, ಅರ್ಜಿಯ ಸಂಬಂಧ ಲಿಖಿತ ಆಕ್ಷೇಪಣೆ ಸಲ್ಲಿಸಲಾಗಿದ್ದು, ಸದನದಲ್ಲಿ ಸದಸ್ಯರಿಗೆ ಸಂಪೂರ್ಣವಾದ ವಿನಾಯಿತಿ ಇರುತ್ತದೆ. ಸದನದಲ್ಲಿ ನಡೆದ ವಿಚಾರವನ್ನು ಆಧರಿಸಿ ಕ್ರಿಮಿನಲ್‌ಅಥವಾ ಸಿವಿಲ್‌ಪ್ರಕರಣ ಹೂಡಲಾಗದು. ಈ ಸಂಬಂಧ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಲಾಗಿದ್ದು, ಅವರು ರೂಲಿಂಗ್‌ನೀಡಿದ್ದಾರೆ. ಹೀಗಾಗಿ ಎಫ್‌ಐಆರ್‌ದಾಖಲಿಸಲು ಅವಕಾಶವಿಲ್ಲ ಎಂದು ಪೀಠಕ್ಕೆ ತಿಳಿಸಿದರು.

ಸದನ ನಡೆಯಲಿ, ನಡೆಯದಿರಲಿ, ಸದಸ್ಯರು ಭಾಗಿಯಾಗಲಿ ಭಾಗಿಯಾಗದಿರಲಿ ಅವರು ಸದನದಲ್ಲಿ ಮಾತನಾಡುವ ಎಲ್ಲ ಮಾತುಗಳಿಗೂ ರಕ್ಷಣೆ ಇರಲಿದೆ. ಅರ್ಜಿದಾರ ಸಿ.ಟಿ ರವಿ ಮತ್ತು ದೂರುದಾರರಾದ ಲಕ್ಷ್ಮೀ ಹೆಬ್ಬಾಳ್ಕರ್ ಸದನದ ಸದಸ್ಯರಾಗಿದ್ದಾರೆ. ಅವರ ಬಗ್ಗೆ ಅರ್ಜಿದಾರರಿಗೆ ಗೌರವ ಇದೆ ಎಂದು ನಾವದಗಿ ತಿಳಿಸಿದರು.

ಸರ್ಕಾರದ ಪರ ವಾದ ಮಂಡಿಸಿದ ಎಸ್ಪಿಪಿ ಬೆಳ್ಳಿಯಪ್ಪ, ಘಟನೆ ಸಂಬಂಧ ನೀಡಿರುವ ವರದಿಯಲ್ಲಿ ಸದನ ನಡೆಯುತ್ತಿರಲಿಲ್ಲ. ಆದರೆ, ಅವಹೇಳನಕಾರಿ ಪದ‌ಬಳಕೆ ಆಗಿದೆ ಎಂದಷ್ಟೇ ತಿಳಿಸಿದ್ದಾರೆ ಎಂದು ವಾದ ಮಂಡಿಸಿದರು. ವಾದ ಆಲಿಸಿದ ಪೀಠ, ವಿಚಾರಣೆಯನ್ನು ಮುಂದೂಡಿ ಆದೇಶಿಸಿದೆ.

ಏನಿದು ಪ್ರಕರಣ:
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರು ಅವಹೇಳನಕಾರಿ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದರು. ಈ ಪ್ರಕರಣ ರದ್ದು ಕೋರಿ ಸಿ. ಟಿ. ರವಿ ಹೈಕೋರ್ಟ್ ಮೆಟ್ಟಿಲೇರಿದ್ದರು.
 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ