Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯೂತ್ ಕಾಂಗ್ರೆಸ್ ಕಾರ್ಯಕರ್ತರು-ಪದಾಧಿಕಾರಿಗಳ ನಡುವೆ ಮಾರಾಮಾರಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಧಾನಿಯ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ನಡುವೆಯೇ ತೀವ್ರ ಮಾರಾಮಾರಿ ನಡೆದಿರುವ ಆಘಾತಕಾರಿ ಘಟನೆ ಸೋಮವಾರ ಸಂಭವಿಸಿದೆ.

ಪದಾಧಿಕಾರಿಗಳ ಉಚ್ಛಾಟನೆ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯ, ಕಡೇ ಕ್ಷಣದಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಪಕ್ಷದ ಆಂತರಿಕ ವಲಯದಲ್ಲಿ ತೀವ್ರ ಮುಜುಗರ ಉಂಟುಮಾಡಿದೆ.

ಸಭೆಯಲ್ಲೇ ಭುಗಿಲೆದ್ದ ಅಸಮಾಧಾನ-
ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ
'NEET' ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ರಾಜ್ಯಾದ್ಯಂತ ಹಮ್ಮಿಕೊಳ್ಳಬೇಕಾದ ಪ್ರತಿಭಟನೆಗಳ ಕುರಿತು ಚರ್ಚಿಸಲು ಕೆಪಿಸಿಸಿ ಕಚೇರಿಯಲ್ಲಿ ಯೂತ್ ಕಾಂಗ್ರೆಸ್‌ನ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಆದರೆ, ಸಭೆ ಆರಂಭವಾಗುತ್ತಿದ್ದಂತೆ ಪ್ರತಿಭಟನೆಯ ವಿಷಯ ಮೂಲೆಗೆ ಸರಿದು, ಆಂತರಿಕ ರಾಜಕೀಯ ಮುನ್ನೆಲೆಗೆ ಬಂದಿದೆ.

ಗಲಾಟೆಗೆ ಅಸಲಿ ಕಾರಣವೇನು?
ರಾಷ್ಟ್ರೀಯ ಯುವ ಕಾಂಗ್ರೆಸ್ ಭಾನುವಾರವಷ್ಟೇ (ಮೇ 17) ದಿಢೀರ್ ಆದೇಶವೊಂದನ್ನು ಹೊರಡಿಸಿ
, ಕರ್ನಾಟಕದ ಹಲವು ಪ್ರಮುಖ ಯುವ ಕಾಂಗ್ರೆಸ್ ಪದಾಧಿಕಾರಿಗಳನ್ನು ಅವರ ಸ್ಥಾನಗಳಿಂದ ಕಿತ್ತು ಹಾಕಿತ್ತು. ಈ ಉಚ್ಛಾಟನೆಯು ಕಾರ್ಯಕರ್ತರಲ್ಲಿ ತೀವ್ರ ಅಸಮಾಧಾನ ಮೂಡಿಸಿತ್ತು.

ಸೋಮವಾರದ ಸಭೆಯಲ್ಲಿ ಇದೇ ವಿಷಯವಾಗಿ ಚರ್ಚೆ ಆರಂಭವಾದಾಗ, ನಾಯಕರ ನಡುವೆ ವಾಗ್ವಾದ ತಾರಕಕ್ಕೇರಿದೆ.
ಬಣಗಳ ನಡುವೆ ಸಂಘರ್ಷ: ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಅವರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ.

ಕೈಕೈ ಮಿಲಾಯಿಸಿದ ಕಾರ್ಯಕರ್ತರು: ಕೇವಲ ಮಾತಿಗೆ ಸೀಮಿತವಾಗದ ಈ ಗಲಾಟೆ, ಕೆಲವೇ ಕ್ಷಣಗಳಲ್ಲಿ ವಿಕೋಪಕ್ಕೆ ತಿರುಗಿ ಉಭಯ ಬಣಗಳ ಕಾರ್ಯಕರ್ತರು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಕೆಪಿಸಿಸಿ ಕಚೇರಿಯ ಆವರಣದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಜಿದ್ದಿಗೆ ಬಿದ್ದವರಂತೆ ಹೊಡೆದಾಡಿಕೊಂಡ ದೃಶ್ಯಗಳು ಕಂಡುಬಂದಿವೆ.

ಪಕ್ಷಕ್ಕೆ ತೀವ್ರ ಮುಜುಗರ-
ಪ್ರಮುಖ ಶೈಕ್ಷಣಿಕ ಹಗರಣದ ವಿರುದ್ಧ ಹೋರಾಟ ರೂಪಿಸಲು ಸೇರಿದ್ದ ಸಭೆಯು
, ಸ್ವಪಕ್ಷೀಯರ ಬೀದಿ ಜಗಳಕ್ಕೆ ವೇದಿಕೆಯಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮುಜುಗರ ತಂದಿಟ್ಟಿದೆ. ಶಿಸ್ತಿನ ಸಿಪಾಯಿಗಳಾಗಬೇಕಿದ್ದ ಯುವ ನಾಯಕರೇ ಪಕ್ಷದ ಕಚೇರಿಯಲ್ಲಿ ರಂಪಾಟ ನಡೆಸಿರುವುದು ಹಿರಿಯ ನಾಯಕರ ಕೆಂಗಣ್ಣಿಗೆ ಕಾರಣವಾಗಿದೆ ಎನ್ನಲಾಗಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಿರುಮಗೊಂಡನಹಳ್ಳಿ ರೈಲ್ವೇ ಗೇಟ್ ಬಳಿ ಮೇಲ್ಸೇತುವೆ ನಿರ್ಮಿಸಲು ಸಾರ್ವಜನಿಕರ ಆಗ್ರಹಕನ್ನಡ ಸಿನಿಮಾ ನಿರ್ಲಕ್ಷ್ಯ ಮಾಡಿದ ವಿದ್ಯಾವಂತರು -ಡಾ.ಕೆ.ಪುಟ್ಟಸ್ವಾಮಿ ರಾಜ್ಯ ಯೋಗ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ನಿಸರ್ಗ ಯೋಗ ಕೇಂದ್ರದ ವಿದ್ಯಾರ್ಥಿಗಳಿಂದ ಅಪೂರ್ವ ಸಾಧನೆಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ...ಆಯುರ್ವೇದ ಹಾಗೂ ಯೋಗದ ಬಗ್ಗೆ ಇಡೀ ಜಗತ್ತು ಶ್ಲಾಘಿಸುತ್ತಿದೆ-ಬಿ. ಎಸ್. ಯಡಿಯೂರಪ್ಪಪೋಸ್ಟರ್ ಅನಾವರಣಗೊಳಿಸಿ ಶುಭ ಹಾರೈಸಿದ ದೊಡ್ಮನೆ ಸೊಸೆ ಅಶ್ವಿನಿ ಪುನೀತ್ಹಳ್ಳಿ ಮಕ್ಕಳಿಗೂ ಸಿಗಲಿ ಎಲ್.ಕೆ.ಜಿ/ಯು.ಕೆ.ಜಿ ಭಾಗ್ಯ: ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ ಕರೆಮೋದಿ ಸರ್ಕಾರದ 12 ವರ್ಷಗಳ ಆಡಳಿತ: ದೇಶದ ಅಭಿವೃದ್ಧಿ ಶ್ಲಾಘಿಸಿದ ಆರ್. ಅಶೋಕ್ತುಮಕೂರು-ಯಶವಂತಪುರ ರೈಲ್ವೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ವಿ. ಸೋಮಣ್ಣಕಾರ್ಮಿಕರ ಕಿಟ್ ಹಗರಣ: ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಜೆಡಿಎಸ್