LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಆಯ್ಕೆಗೆ ಜೂನ್ 15ರಂದು ತರಗತಿ ಪ್ರಾತ್ಯಕ್ಷಿಕೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲು ಜೂನ್ 15ರಂದು ತರಗತಿ ಪ್ರಾತ್ಯಕ್ಷಿಕೆ ಆಯೋಜಿಸಲಾಗಿದೆ.

ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದ್ದು, ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಈ ಪ್ರಾತ್ಯಕ್ಷಿಕೆ ನಡೆಯಲಿದೆ.

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಪದವಿ ಮತ್ತು ಬಿ.ಇಡಿ ಅಂಕಪಟ್ಟಿಗಳು, ಟಿ.ಇ.ಟಿ ಪ್ರಮಾಣಪತ್ರ ಹಾಗೂ ಸೇವಾ ಪ್ರಮಾಣಪತ್ರಗಳ ಮೂಲ ಪ್ರತಿಗಳೊಂದಿಗೆ 2026ರ ಜೂನ್ 15ರ ಸೋಮವಾರ ಬೆಳಿಗ್ಗೆ 10.30ಕ್ಕೆ ಸಂಬಂಧಪಟ್ಟ ಶಾಲೆಗಳಿಗೆ ಹಾಜರಾಗಲು ಸೂಚಿಸಲಾಗಿದೆ.

ಗಣಿತ, ವಿಜ್ಞಾನ, ಕಂಪ್ಯೂಟರ್ ಸೈನ್ಸ್ ಹಾಗೂ ಹಿಂದಿ ವಿಷಯಗಳ ಅಭ್ಯರ್ಥಿಗಳಿಗೆ ಗೂಳಯ್ಯನಹಟ್ಟಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ (ಸಾಮಾನ್ಯ-24) ಪ್ರಾತ್ಯಕ್ಷಿಕೆ ನಡೆಯಲಿದೆ.

 

ಇಂಗ್ಲಿಷ್, ಸಮಾಜ ವಿಜ್ಞಾನ ಹಾಗೂ ದೈಹಿಕ ಶಿಕ್ಷಣ ವಿಷಯಗಳ ಅಭ್ಯರ್ಥಿಗಳಿಗೆ ಚಿತ್ರದುರ್ಗ ನಗರದ ಸೀಬಾರದ ಎನ್.ಹೆಚ್-4 ಕೇತೇಶ್ವರ ಮಠದ ಸಮೀಪದ ಇರುವ ತುರುವನೂರು ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ (ಪ. ವರ್ಗ-59) ಪ್ರಾತ್ಯಕ್ಷಿಕೆ ಆಯೋಜಿಸಲಾಗಿದೆ ಎಂದು ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೆಲ್ಲುಗುದಿಗೆ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಭಕ್ತಿ ಭಾವದಿಂದ ನಡೆದ ನಾಗ ಪಂಚಮಿ ಆಚರಣೆಬ್ಯಾಂಕ್ ಸರ್ಕಲ್ ಫುಟ್ ಪಾತ್ ಒತ್ತುವರಿ:ಸ್ಥಳೀಯರ ಆಕ್ರೋಶಪೌರಕಾರ್ಮಿಕನ ಪುತ್ರನಿಗೆ ಒಲಿದ ಸಚಿವ ಸ್ಥಾನನರಕಸದೃಶ ಬದುಕು - ಚರಂಡಿ ನೀರೆಲ್ಲಾ ರಸ್ತೆಗೆ!, ಸ್ವಚ್ಛತೆ ಇಲ್ಲದ ಊರು, ರೋಗಗಳ ತವರು!ಆ.22 ರಾಜ್ಯ ಮಟ್ಟದ ಕನ್ನಡ ಕರೋಕೆ ಸ್ಪರ್ಧೆ, ಆ.23ರಂದು ಗಾಯನ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆಪೋಷಕರ ಸಹಕಾರದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ : ರೈತ ಮುಖಂಡ ಮಹೇಶ್ವರಪ್ಪಪರಿಸರ ಮತ್ತು ಆಧ್ಯಾತ್ಮದ ಸಮನ್ವಯದ 'ನಾಗರ ಪಂಚಮಿ':ಬೆಂಗಳೂರಿನಲ್ಲಿ ಏಷ್ಯಾದ ಅತಿ ದೊಡ್ಡ 'ಕ್ವಾಂಟಮ್ ಫೌಂಡ್ರಿ' ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆಕಾಂಗ್ರೆಸ್ ಗ್ಯಾರಂಟಿ ಹೆಸರಲ್ಲಿ ಕನ್ನಡಿಗರ ಜೇಬಿಗೆ ಕನ್ನ: ಜೆಡಿಎಸ್ ತೀವ್ರ ಆಕ್ರೋಶ