ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಸರ್ಕಾರವು ೨೦೨೫ರ ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯ ವ್ಯಾಪ್ತಿಗೆ ಚಿಕ್ಕಮಗಳೂರು, ಕಡೂರು, ಕೊಪ್ಪ, ಮೂಡಿಗೆರೆ, ಎನ್.ಆರ್.ಪುರ, ಶೃಂಗೇರಿ, ತರೀಕೆರೆ, ಅಜ್ಜಂಪುರ ಹಾಗೂ ಕಳಸ ತಾಲ್ಲೂಕುಗಳನ್ನು ಒಳಪಡಿಸಲಾಗಿದೆ.
ವಿಮಾ ಯೋಜನೆಗೆ ಬೆಳೆ ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಮುಂಗಾರು ಹಂಗಾಮಿನ ತೋಟಗಾರಿಕೆ ಬೆಳೆಗಳಿಗೆ ಬ್ಯಾಂಕ್ಗಳಲ್ಲಿ ಅರ್ಜಿ ಸಲ್ಲಿಸಲು ಜುಲೈ ೩೧ ಅಂತಿಮ ದಿನವಾಗಿದೆ. ತೋಟಗಾರಿಕೆ ಬೆಳೆಗಳ ವಿಮಾ ಕಂತು ವಿಮಾ ಮೊತ್ತದ ಶೇ.೫ರಷ್ಟಿದೆ.
ಯೋಜನೆ ಅನುಷ್ಠಾನಕ್ಕೆ ಯೋಜನೆವಾರು, ಬೆಳೆವಾರು ರೈತರ ವಿವರಗಳನ್ನು ಆನ್ಲೈನ್ ಪೋರ್ಟಲ್ (sಚಿmಡಿಚಿಞshಚಿಟಿe.ಞಚಿಡಿಟಿಚಿಣಚಿಞಚಿ.gov.iಟಿ) ಮೂಲಕ ನೋಂದಾಯಿಸಲು ಆದೇಶಿಸಲಾಗಿದೆ. ಎಫ್ಆರ್ಯುಐಟಿಎಸ್ (ಫಟ್ಸ್) ತಂತ್ರಾಂಶದಲ್ಲಿ ರೈತರ ನೋಂದಣಿ ಕಡ್ಡಾಯವಾಗಿದೆ.
ಅಡಿಕೆ ಬೆಳೆಗೆ ವಿಮಾ ಮೊತ್ತ ೧,೨೮,೦೦೦ ರೂ. ಆಗಿದ್ದು, ವಿಮಾ ಮೊತ್ತ ೬,೪೦೦ ರೂ. ಆಗಿದೆ. ಕರಿಮೆಣಸು ಬೆಳೆಗೆ ವಿಮಾ ಮೊತ್ತ ೪೭,೦೦೦ ಆಗಿದ್ದು, ಕಂತು ೨,೩೫೦ ರೂ. ಆಗಿದೆ. ಹಸಿರು ಮೆಣಸಿನಕಾಯಿಗೆ ೭೧,೦೦೦ ರೂ.ವಿಮಾ ಮೊತ್ತ ಆಗಿದ್ದರೆ, ಕಂತು ೩,೫೫೦ ರೂ. ಆಗಿದೆ. ದಾಳಿಂಬೆಗೆ ೧,೨೭,೦೦೦ ರೂ. ವಿಮಾ ಮೊತ್ತ ಆಗಿದ್ದರೆ,
ಕಂತು ೬,೩೫೦ ರೂ. ಆಗಿದೆ. ಮಾವಿಗೆ ೮೦,೦೦೦ ರೂ. ವಿಮಾ ಮೊತ್ತವಾಗಿದ್ದರೆ, ಕಂತು ೪,೦೦೦ ರೂ. ಆಗಿದೆ. ಹೆಚ್ಚಿನ ಮಾಹಿತಿಗೆ ರೈತರು ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕಿ ಪೂರ್ಣಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


