Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿ.ಕೆ. ಶಿವಕುಮಾರ್: ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್!

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಕೆಲಸಕ್ಕೆ ಕೈಹಾಕಿದ್ದಾರೆ. ಇಂದು ವಿಧಾನಸೌಧದಲ್ಲಿ ರಾಜ್ಯದ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಮಹತ್ವದ ಜಂಟಿ ಸಭೆ ನಡೆಸಿದ ಅವರು, ದಕ್ಷ ಹಾಗೂ ಪಾರದರ್ಶಕ ಆಡಳಿತ ನೀಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.

"ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಯಾವುದೇ ಕಾರಣಕ್ಕೂ ಯಾರ ಒತ್ತಡಕ್ಕೂ ಮಣಿಯದೇ ಮುಕ್ತವಾಗಿ ಕೆಲಸ ಮಾಡಿ" ಎಂದು ಸಿಎಂ ಅಧಿಕಾರಿಗಳಿಗೆ ಪೂರ್ಣ ಸ್ವಾತಂತ್ರ್ಯ ಘೋಷಿಸಿದ್ದಾರೆ.

ರೌಡಿಗಳ ಹೆಡೆಮುರಿ ಕಟ್ಟಿ, ಡ್ರಗ್ಸ್ ದಂಧೆ ಬೇರುಸಹಿತ ಕಿತ್ತೊಗೆಯಿರಿ!:
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಕಠಿಣ ಸಂದೇಶ ರವಾನಿಸಿದ್ದಾರೆ.

ಅಕ್ರಮಗಳಿಗೆ ಬ್ರೇಕ್: ಜೂಜು, ಕ್ಲಬ್ ಹಾಗೂ ಡ್ರಗ್ಸ್ ದಂಧೆಯನ್ನು ರಾಜ್ಯದಿಂದ ಬೇರುಸಹಿತ ಕಿತ್ತೊಗೆಯಬೇಕು.

ರೌಡಿಸಂಗೆ ಮುಕ್ತಿ: ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ರೌಡಿಗಳ ಹೆಡೆಮುರಿ ಕಟ್ಟಲು ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ.

ಒತ್ತಡಕ್ಕೆ ಮಣಿಯಬೇಡಿ: ಯಾವುದೇ ರಾಜಕೀಯ ಅಥವಾ ಬಾಹ್ಯ ಪ್ರಭಾವಗಳಿಗೆ ಒಳಗಾಗದೆ, ಕಾನೂನಿನ ಚೌಕಟ್ಟಿನಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ ಎಂದು ಸಿಎಂ ಸೂಚಿಸಿದರು.

'ಸಿಎಸ್ಆರ್' ಫಂಡ್ ದುರ್ಬಳಕೆಗೆ ತಡೆ: 25 ದಿನಗಳ ಗಡುವು!:
ಆಡಳಿತದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಬಗ್ಗೆ ಕಠಿಣ ನಿಲುವು ತಳೆದ ಡಿ.ಕೆ. ಶಿವಕುಮಾರ್, ಅಧಿಕಾರಿಗಳಿಗೆ ಮಹತ್ವದ ಟಾಸ್ಕ್ ಒಂದನ್ನು ನೀಡಿದ್ದಾರೆ.

"ರಾಜ್ಯದಲ್ಲಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿ ದುರ್ಬಳಕೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದಕ್ಕೆ ತಕ್ಷಣವೇ ಬ್ರೇಕ್ ಬೀಳಬೇಕು. ಪ್ರತಿಯೊಂದು ಇಲಾಖೆಯಲ್ಲೂ ಬಾಕಿ ಉಳಿದಿರುವ ಕೆಲಸಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಮುಂದಿನ 25 ದಿನಗಳ ಒಳಗಾಗಿ ನನಗೆ ಸಮಗ್ರ ವರದಿ ನೀಡಬೇಕು."
ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ.

ಜನ ಮೆಚ್ಚುವ ಆಡಳಿತ ನೀಡಿ, ಸರ್ಕಾರಕ್ಕೆ ಹೆಸರು ತನ್ನಿ:
"
ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಆತ್ಮಸಾಕ್ಷಿಗೆ ಒಪ್ಪುವಂತೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು" ಎಂದು ಕಿವಿಮಾತು ಹೇಳಿದ ಸಿಎಂ, ಸಾರ್ವಜನಿಕರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು. ಸರ್ಕಾರದ ಜನಕಲ್ಯಾಣ ಯೋಜನೆಗಳು ಸಮರ್ಥವಾಗಿ ಜನಸಾಮಾನ್ಯರನ್ನು ತಲುಪಬೇಕು. ಆ ಮೂಲಕ ರಾಜ್ಯದ ಅಭಿವೃದ್ಧಿಗೆ ಮೆಟ್ಟಿಲಾಗುವ ಜೊತೆಗೆ, ಜನ ಮೆಚ್ಚುವ ಕೆಲಸ ಮಾಡಿ ಸರ್ಕಾರಕ್ಕೂ ಒಳ್ಳೆಯ ಹೆಸರು ತರಬೇಕು ಎಂದು ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿಗಳು ಕರೆ ನೀಡಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಮ್ಮದ್ದೂ ಒಂದು ಯುಗವಿತ್ತು; ಆರು ವರ್ಷದ ನಂತರ ನಾವು ಸ್ವತಃ ಶಾಲೆಗೆ ಹೋಗುತ್ತಿದ್ದೆವು ಬಸ್ಸಿನಲ್ಲಿ ಬಿಡಿಸುವ ಪದ್ಧತಿ ಇರಲಿಲ್ಲ.ಟೆಕ್ಸಾಸ್‌ನಲ್ಲಿ ಭಾರತದ ರಾಷ್ಟ್ರಧ್ವಜಕ್ಕೆ ಅಪಚಾರ: ವಿಶ್ವದಾದ್ಯಂತ ಭಾರತೀಯರ ತೀವ್ರ ಆಕ್ರೋಶಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿ.ಕೆ. ಶಿವಕುಮಾರ್: ಐಎಎಸ್, ಐಪಿಎಸ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್!ಕಾರ್ಮಿಕರ ಪರ ಹೈಕೋರ್ಟ್ ಮಹತ್ವದ ತೀರ್ಪು: ವಜಾಗೊಂಡಿದ್ದ 84 ಮಂದಿಗೆ ತಲಾ 3 ಲಕ್ಷ ಪರಿಹಾರ ನೀಡಲು ಆದೇಶ!ಆಡಳಿತ ಸುಧಾರಣೆಗೆ ಸಿಎಂ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್: ಎರಡು ಹೊಸ ಸಚಿವಾಲಯಗಳ ರಚನೆ, ರೌಡಿ ನಿಗ್ರಹಕ್ಕೆ ವಿಶೇಷ ಸ್ಕ್ವಾಡ್!"ಪಕ್ಷ ಕಟ್ಟುವವರು ನನ್ನೊಂದಿಗೆ ಬನ್ನಿ, ಅಧಿಕಾರ ಬೇಕಾದವರು ಡಿಕೆಶಿ ಜೊತೆ ಹೋಗಿ!": ಬಿ.ಕೆ. ಹರಿಪ್ರಸಾದ್ ಬ್ಯಾಟಿಂಗ್ಸೌರಶಕ್ತಿ ಉತ್ಪಾದನೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿ ವಿಶ್ವದಲ್ಲೇ ೨ನೇ ಸ್ಥಾನಕ್ಕೆ ಜಿಗಿದ ಭಾರತ!ಮತದಾರರ ಪಟ್ಟಿ ಪರಿಷ್ಕರಣೆ, ತಕ್ಷಣದ ಹೆಲ್ಪ್ ಡೆಸ್ಕ್ ಸ್ಥಾಪನೆ; ಸಿಎಂ ಡಿ.ಕೆ.ಶಿ ಕಟ್ಟುನಿಟ್ಟಿನ ಆದೇಶಇಲಾಖೆಗಳಲ್ಲಿ ಬಾಕಿ ಉಳಿದಿರುವ ಕೆಲಸಗಳನ್ನು ಮುಂದಿನ 25 ದಿನಗಳೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು- ಮುಖ್ಯಮಂತ್ರಿಡಿ.ಕೆ. ಶಿವಕುಮಾರ್ ಅವರಿಗೆ ಸಿದ್ದಗಂಗಾ ಮಠದ ಸ್ವಾಮೀಜಿ ಆಶೀರ್ವಾದ: ಸಮಾಜಮುಖಿ ಕಾರ್ಯಗಳಿಗೆ ಶ್ಲಾಘನೆ