Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕಕ್ಕೆ ಆಗಿರುವ ಅನ್ಯಾಯ ಬಗ್ಗೆ ಪ್ರಶ್ನಿಸಿ-ಸಿಎಂ

Advertisement
ಚಂದ್ರವಳ್ಳಿ ನ್ಯೂಸ್, ಹುಬ್ಬಳ್ಳಿ:
ತೆರಿಗೆ ವಿಚಾರದಲ್ಲಿ ಕೇಂದ್ರದಿಂದ ಅನ್ಯಾಯವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ 16 ನೇ ಹಣಕಾಸು ಆಯೋಗದವರು ಬೆಂಗಳೂರಿಗೆ ಭೇಟಿ ನೀಡಿದಾಗ 15 ನೇ ಹಣಕಾಸು ಆಯೋಗದಿಂದ  ಕರ್ನಾಟಕಕ್ಕೆ  ಅನ್ಯಾಯವಾಗಿರುವ  ಬಗ್ಗೆ ಗಮನ ಸೆಳೆದಿದ್ದೇವೆ.

ಸುಮಾರು 4.50 ಲಕ್ಷ  ಕೋಟಿ ರೂ.ಗಳಿಗೂ ಹೆಚ್ಚು ಮೊತ್ತವನ್ನು ವರ್ಷಕ್ಕೆ ತೆರಿಗೆ  ನೀಡುತ್ತಿದ್ದೇವೆ. ಅದರಲ್ಲಿ ನಮಗೆ ವಾಪಸ್ಸು ಬರುವುದು 55 ರಿಂದ 60  ಸಾವಿರ ಕೋಟಿ ರೂಪಯಿಗಳಷ್ಟು ಮಾತ್ರ. ಇದು ನ್ಯಾಯವೇ? ಎಂದು ಪ್ರಶ್ನಿಸಿದರು.

ಈ ಬಗ್ಗೆ ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ. ಬಿಜೆಪಿಯ ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ  ಮಾತನಾಡಿದ್ದಾರೆಯೇಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದರೆ ಅದು ರಾಜಕೀಯ  ಎಂದರು ಇದಕ್ಕೆ ಏನು ಹೇಳಬೇಕು? ಎಂದರು . ನ್ಯಾಯಾಲಯಕ್ಕೆ ಹೋದರೆ ನ್ಯಾಯ ಸಿಗುತ್ತದೆ ಎಂದು ಭಾವಿಸಿಲ್ಲಏಕೆಂದರೆ 5 ವರ್ಷಕ್ಕೊಮ್ಮೆ ಸಂವಿಧಾನದ ಪ್ರಕಾರ ಹಣಕಾಸಿನ  ಆಯೋಗ ರಚನೆಯಾಗುತ್ತದೆ.

ಅವರ ಶಿಫಾರಸ್ಸಿನ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೋಗಬೇಕಾದ ತೆರಿಗೆ ಬಗ್ಗೆ  ನಿರ್ಧಾರವಾಗುತ್ತದೆ. 15 ನೇ ಹಣಕಾಸು ಆಯೋಗ ಕೆಲವು ಶಿಫಾರಸ್ಸು ಮಾಡಿದ್ದಾರೆ. 5495 ಕೋಟಿ ರೂಪಾಯಿಗಳನ್ನು ವಿಶೇಷ ಅನುದಾನ ನೀಡಬೇಕೆಂದು ಹೇಳಿದರು.

ಪೇರಿಫೆರಲ್ ರಿಂಗ್ ರೋಡ್  ಹಾಗೂ ಕೆರೆಗಳ ಅಭಿವೃದ್ಧಿಗೆ ತಲಾ 3000 ಕೋಟಿ ರೂಪಾಯಿ ನೀಡಲು ಶಿಫಾರಸು  ಮಾಡಿದ್ದರು. ಒಟ್ಟು 11495 ಕೋಟಿಗಳನ್ನು ಕೊಟ್ಟರೆ. ಇದನ್ನು ನಾವು ಕೇಳಬೇಕು.

ಪ್ರಹ್ಲಾದ ಜೋಶಿಯವರು ಇದನ್ನು ಕೇಂದ್ರದಿಂದ ಕೇಳಬೇಕಲ್ಲವೇ ಎಂದು ಪ್ರಶ್ನಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ