Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿದೇಶದಲ್ಲಿ ಅಧ್ಯಯನ - 2026’ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಶಿವಕುಮಾರ್  

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗaಳೂರಿನ ಅರಮನೆ ಮೈದಾನದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ವೃತ್ತಿ ತರಬೇತಿ ಹಾಗೂ ಕೌಶಲ್ಯಾಭಿವೃದ್ಧಿ ನಿಗಮದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ‘ವಿದೇಶದಲ್ಲಿ ಅಧ್ಯಯನ - 2026’ ಬೃಹತ್ ಮಾರ್ಗದರ್ಶನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು

ರಾಜ್ಯದ ವಿದ್ಯಾರ್ಥಿಗಳಿಗೆ ವಿದೇಶಗಳ ಅತ್ಯಂತ ಪ್ರತಿಷ್ಠಿತ: ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಸೂಕ್ತ ಮಾರ್ಗದರ್ಶನ, ಅಧಿಕೃತ ಮಾಹಿತಿ ಮತ್ತು ಅಗತ್ಯ ನೆರವು ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಉದ್ಘಾಟನೆಯ ಬಳಿಕ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು, ಅವರ ಪೋಷಕರು ಹಾಗೂ ವಿವಿಧ ವಿದೇಶಿ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳೊಂದಿಗೆ ನೇರ ಸಂವಾದ ನಡೆಸಿ ಅಭಿಪ್ರಾಯ ಹಂಚಿಕೊಂಡರು.

Advertisement

ಉನ್ನತ ಶಿಕ್ಷಣಕ್ಕೆ ಮಾರ್ಗದರ್ಶನ: ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಲು ಬಯಸುವ ರಾಜ್ಯದ ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲವಿಲ್ಲದೆ ಸರಿಯಾದ ವೇದಿಕೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಈ ಮೇಳವನ್ನು ಆಯೋಜಿಸಲಾಗಿದೆ.  

ಸಂವಾದ ಮತ್ತು ಸಂಕಲ್ಪ: ವಿದ್ಯಾರ್ಥಿಗಳು ಹಾಗೂ ವಿದೇಶಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನೇರ ಸಂವಾದ ನಡೆಸಿದ ಮುಖ್ಯಮಂತ್ರಿಗಳು, ಯುವಜನತೆಯ ವಿದೇಶಿ ಶಿಕ್ಷಣದ ಕನಸುಗಳಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದರು.  

ಪ್ರಮುಖ ಗಣ್ಯರ ಉಪಸ್ಥಿತಿ: ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಆಸ್ಟ್ರೇಲಿಯಾದ ಕಾನ್ಸಲೇಟ್ ಜನರಲ್‌ಸ್ಟೀವೆನ್‌ಕನೋಲಿ, ಕ್ವೀನ್ಸ್‌ಲ್ಯಾಂಡ್‌ವಿಶ್ವವಿದ್ಯಾಲಯದ ನಿರ್ದೇಶಕ ಜೋಗ್ವಾನ್ ಕ್ಲೈನ್ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಶಿವಕಾಂತಮ್ಮ (ಕಾಂತಾ) ನಾಯಕ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನರ ಮನೆ ಬಾಗಿಲಿಗೆ ಸರ್ಕಾರ, ಪ್ರಜಾಸೇವಾ ಆಂದೋಲನಕ್ಕೆ ಸಚಿವ ರಘುಮೂರ್ತಿ ಚಾಲನೆಹಿರಿಯೂರು ನಗರಸಭೆಯಲ್ಲಿ ‘ಪ್ರಜಾಸೇವಾ ಆಂದೋಲನ’: ಸಚಿವರ ಸಮ್ಮುಖದಲ್ಲಿ ವಿವಿಧ ಸೌಲಭ್ಯಗಳ ವಿತರಣೆ!ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ನಿಶ್ಚಿತ್ ಪದಗ್ರಹಣ ಸಮಾರಂಭ ಹಿರಿಯೂರು ಭೋವಿ ಸಮಾಜದ ಅಧ್ಯಕ್ಷರಾಗಿ ತಿಮ್ಮರಾಜು ಆಯ್ಕೆ!ಹುಚ್ಚವ್ವನಹಳ್ಳಿ ಗ್ರಾಮಸ್ಥರ ಆರೋಗ್ಯದ ಜತೆ ಪಿಡಿಒ ಚೆಲ್ಲಾಟ – ಹೆಜ್ಜೆ ಹೆಜ್ಜೆಗೂ ಜನಾಕ್ರೋಶ!ಕೋಟೆನಾಡಿನತ್ತ ಮುಖ ಮಾಡಿದ ಭದ್ರೆ: ಸರ್ಕಾರ ಹಾಗೂ ಹೋರಾಟಗಾರರಿಗೆ ‘ಒಂದೇ ಮಾತರಂ ಜಾಗೃತಿ ವೇದಿಕೆ’ ಧನ್ಯವಾದ!ಸಾರ್ವಜನಿಕರು ಶಿಕ್ಷಕರ ದಿನಾಚರಣೆ ಆಚರಿಸುವಂತಾಗಬೇಕು: ಡಾ ನೆಲ್ಲಿಕಟ್ಟೆ ಸಿದ್ದೇಶ್ಪೌರಕಾರ್ಮಿಕರಿಗೆ ಅವಮಾನ: ಸಚಿವ ಕೃಷ್ಣ ಬೈರೇಗೌಡರು ಬಹಿರಂಗ ಕ್ಷಮೆಯಾಚಿಸಲು ಒತ್ತಾಯರೈತರ ಜನಾಕ್ರೋಶಕ್ಕೆ ಬೆದರಿದ ಸರ್ಕಾರ: ಪಾದಯಾತ್ರೆ ಧಕ್ಕೆಗೆ 'ಡ್ಯಾಮೇಜ್ ಕಂಟ್ರೋಲ್' ತಂತ್ರ ಎಂದ ವಿಪಕ್ಷ!  ಸಾಧಕ ಶಿಕ್ಷಕರ ಶ್ರಮಕ್ಕೆ ಗೌರವ ಸಲ್ಲಿಸಿದ ಆರ್. ಅಶೋಕ್ ಮತ್ತು ತೇಜಸ್ವಿ ಸೂರ್ಯ