Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಸಿದ್ದರಾಮಯ್ಯ, ಪ್ರಿಯಾಂಕ್ ಖರ್ಗೆ ಕೂಡಲೇ ರಾಜೀನಾಮೆ ನೀಡಬೇಕು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಳಗಾವಿಯ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮನಮೋಹನ್ ಸಿಂಗ್ ಅವರ ಫೋಟೋ ಹಾಕಿದ್ರಾ
? ಎಂದು ಸಂಸದ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದ್ದಾರೆ.

ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವ​ರ ನಿಧನ ಸಂದರ್ಭದಲ್ಲಿಯೂ ಕಾಂಗ್ರೆಸ್ ರಾಜಕೀಯ ಮಾಡ್ತಿದೆ. ಜನರಿಗೆ ತಪ್ಪು ಸಂದೇಶ ನೀಡಲು ಪ್ರಯತ್ನಿಸುತ್ತಿದೆ. ಈಗಾಗಲೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಮಾಧಿಗೆ, ಸ್ಮಾರಕಕ್ಕೆ ಜಾಗ ನೀಡ್ತೀವಿ ಎಂದು ಪ್ರಧಾನಿ ಹೇಳಿದ್ದಾರೆ. ಮನಮೋಹನ್ ಸಿಂಗ್​ಗೆ ಅವಮಾನ ಮಾಡಿದ್ರು ಅಂತಾ ಕಾಂಗ್ರೆಸ್​ನವರು ಹೇಳ್ತಿದ್ದಾರೆ. ಅವರು ಮೃತಪಟ್ಟ ಬಳಿಕ ಕೇವಲ ರಾಜಕಾರಣಕ್ಕಾಗಿ ನೆನಪು ಮಾಡಿಕೊಳ್ತಿದ್ದಾರೆ ಎಂದು ಕಿಡಿಕಾರಿದರು.

 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಇದಕ್ಕೆ ಉತ್ತರ ಕೊಡಬೇಕು. ಕಾಂಗ್ರೆಸ್​ನಲ್ಲಿ ಮೂರು ಜನ ಪದಾಧಿಕಾರಿಗಳಿದ್ದಾರೆ. ಖರ್ಗೆ, ವೇಣುಗೋಪಾಲ್, ಸುರ್ಜೆವಾಲಾ ಪಧಾದಿಕಾರಿಗಳು. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಸರ್ವಾಧಿಕಾರಿಗಳು. ಮಲ್ಲಿಕಾರ್ಜುನ, ವೇಣುಗೋಪಾಲ್, ಸುರ್ಜೆವಾಲಾ ಹೇಳಿದ ಹಾಗೆ ನಡೆಯೋಲ್ಲ. ಇವರು ಉತ್ಸವ ಮೂರ್ತಿಗಳು. ಸೂಕ್ತವಾದ ಜಾಗವನ್ನ ಸ್ಮಾರಕಕ್ಕೆ ನೀಡ್ತೀವಿ ಅಂತ ಈಗಾಗಲೇ ಪ್ರಧಾನಿ ಹೇಳಿದ್ದಾರೆ. ಟ್ರಸ್ಟ್ ಮಾಡಬೇಕು. ಈ ಮೂಲಕ ಎಲ್ಲಿ ಕಟ್ಟಬೇಕೆಂಬ ನಿಯಾಮವಳಿ ಇದೆ ಎಂದು ಕಾರಜೋಳ ಹೇಳಿದರು.

 ಅಂಬೇಡ್ಕರ್​ರಿಗೆ ಅಪಮಾನ ಆಗಿದೆ ಅಂತ ದೇಶದ ಉದ್ದಗಲಕ್ಕೆ ಬೊಬ್ಬೆ ಹಾಕಿ ಕಾಂಗ್ರೆಸ್​ನವರು ಆರೋಪ ಮಾಡ್ತಿದ್ದಾರೆ. ಅಂಬೇಡ್ಕರ್​ಗೆ ಹಣಕಾಸು ಇಲಾಖೆ ಕೊಡದೆ, ಕಾನೂನು ಇಲಾಖೆ‌ಕೊಟ್ರು. ಹೀಗೆ ಅವಮಾನ ಮಾಡಿ‌ದ್ದರಿಂದ ಅವರು ರಾಜೀನಾಮೆ ಕೊಟ್ಟು ಬಂದ್ರು.

1952ರ ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನ ಸೋಲಿಸಿದಾಗ, ನೆಹರು ಸಂಭ್ರಮಾಚರಣೆ ಮಾಡಿದ್ರು. ಇದು ದಲಿತರಿಗೆ ಮಾಡಿದ ಅವಮಾನವಲ್ಲವೆ. ಸುಳ್ಳು ಹೇಳಿ ಅಂಬೇಡ್ಕರ್ ಅವರಿಗೆ ಜೀವತಾವಧಿಯಲ್ಲಿ ಭಾರತ ರತ್ನ ಕೊಡಲಿಲ್ಲ. ನೆಹರು ಅವರೇ ತಮಗೆ ತಾವೇ ಭಾರತ ರತ್ನ ಕೊಟ್ಟುಕೊಂಡ್ರು ಎಂದು ಸಂಸದ ಕಾರಜೋಳ ತಿರುಗೇಟು ನೀಡಿದರು.

 ಅಂಬೇಡ್ಕರ್ ಅವರಿಗೆ ರಾಜ್​ಘಾಟ್​ನಲ್ಲಿ ಸಮಾಧಿಗೆ ಜಾಗ ಕೊಡಲಿಲ್ಲ. 5,000 ರೂ. ಬಾಡಿಗೆ ಕೊಟ್ಟು ಮುಂಬೈಗೆ ವಿಮಾನದ ಮೂಲಕ ಮೃತದೇಹ ತಂದು ಅವರ ಸಮಾಧಿ‌ಮಾಡಿದ್ದನ್ನು ಮರೆಯೋಕೆ ಆಗುವುದಿಲ್ಲ. ಕಾಂಗ್ರೆಸ್ ಉರಿಯುವ ಮನೆ, ಕಾಂಗ್ರೆಸ್​ಗೆ ಹೋಗಬೇಡಿ ಎಂದು ಅಂಬೇಡ್ಕರ್ ಸಂದೇಶ ಕೊಟ್ಟಿದ್ರು.

ವಿ. ಪಿ ಸಿಂಗ್ ಉಚ್ಚಾಟನೆ ಮಾಡಿದ್ರು, ದೇವರಾಜ್ ಅರಸು ಅವರನ್ನ ಕಾಂಗ್ರೆಸ್​ನಿಂದ ಉಚ್ಚಾಟನೆ ಮಾಡಿದ್ರು. ದೇವೇಗೌಡರನ್ನ ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ಉತ್ತರ ಕೊಡಬೇಕು. ಸಂವಿಧಾನವನ್ನ ಧರ್ಮ ಗ್ರಂಥ ಅಂತ ಹೇಳಿದ್ದು ಪ್ರಧಾನಿ ಮೋದಿಯವರು. ಅಂಬೇಡ್ಕರ್ ಅವರಿಗೆ ಅಮಿತ್ ಶಾ ಅವಮಾನ ಮಾಡಿಲ್ಲ. ಕಾಂಗ್ರೆಸ್​ನವರ ಮೋಸ ಮಾಡುವ ವಿಚಾರಕ್ಕೆ ದಲಿತರು ಕಿವಿಗೊಡಬಾರದು. ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಕಾಂಗ್ರೆಸ್​ಗೆ ಇಲ್ಲ ಎಂದು ಕಾರಜೋಳ ಹರಿಹಾಯ್ದರು.

 ಸಿದ್ದರಾಮಯ್ಯ ರಾಜೀನಾಮೆ ನೀಡಲಿ:
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದ ವಿಚಾರವಾಗಿ ಮಾತನಾಡಿ
, ನಾನು ಸಿಎಂಗೆ ನೆನಪು ಮಾಡಿಕೊಡ್ತೇನೆ. ಬೆಳಗಾವಿಯಲ್ಲಿ ಸಂತೋಷ್ ಪಾಟೀಲ್ ಅನ್ನೋ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಾಗ ವಿನಾಕಾರಣ ಈಶ್ವರಪ್ಪ ರಾಜೀನಾಮೆ ಪಡೆಯುವಂತೆ ಮಾಡಿದ್ರಿ. ನಿಮಗೆ ಈಶ್ವರಪ್ಪ ಪ್ರಕರಣ ಮಾದರಿಯಾಗಬೇಕು. ನಿಷ್ಪಕ್ಷಪಾತ ತನಿಖೆ ಆಗಲು ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಲಿ.

ರಾಜೀನಾಮೆ ಕೊಡುವ ಮೂಲಕ ಪ್ರಿಯಾಂಕ್ ಖರ್ಗೆ ಒಬ್ಬ ಮಾದರಿ ರಾಜಕಾರಣಿ ಆಗಲಿ. ನಮ್ಮ ಪಕ್ಷದ ನಿಯೋಗ ಸಚಿನ್ ಅವರ ಮನೆಗೆ ಭೇಟಿ ಕೊಡ್ತಿದೆ. ನಿಷ್ಪಕ್ಷಪಾತ ತನಿಖೆಗೆ ಪ್ರಿಯಾಂಕ್ ಖರ್ಗೆ ಅವಕಾಶ ಮಾಡಿಕೊಡಬೇಕು. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರೂ ಸಹ ರಾಜೀನಾಮೆ ಕೊಡಬೇಕು ಎಂದು ಗೋವಿಂದ್ ಕಾರಜೋಳ ಆಗ್ರಹಿಸಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ