Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುತ್ರನೊಂದಿಗೆ ಸಿಎಂ ಗೌಪ್ಯ ಸಭೆ, ಆಪ್ತರೊಂದಿಗೆ ಡಿಕೆಶಿ ಮೀಟಿಂಗ್

Advertisement
ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಬೆಳಗಾವಿ ಅಧಿವೇಶನದ ಸಂದರ್ಭದಲ್ಲೇ ಪಿಚ್ಚರ್ ಬಾಕಿ ಹೈ ಎನ್ನುವ ಮಾತುಗಳು ಕೇಳಿಬಂದಿದ್ದವು. ಇದಕ್ಕೆ ಪುಷ್ಠಿ ನೀಡುವಂತೆ ಬೆಳಗಾವಿ ಅಧಿವೇಶನದ ವೇಳೆಯಲ್ಲೇ ಮತ್ತೆ ಸಿಎಂ ಕುರ್ಚಿ ಕಾಳಗ ಶುರುವಾಗಿದ್ದು, ಇದಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯನವರ ಪುತ್ರ, ಎಂಎಲ್​​ಸಿ ಯತೀಂದ್ರ ಸಿದ್ದರಾಮಯ್ಯ ಕಹಳೆ ಮೊಳಗಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಅಧಿವೇಶನದ ನಡುವೆಯೇ ಕಾಂಗ್ರೆಸ್​​ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ.


ಪುತ್ರನೊಂದಿಗೆ ಸಿಎಂ ರಹಸ್ಯ ಮಾತುಕತೆ-
ಚಳಿಗಾಲ ಅಧಿವೇಶದ ನಡೆಯುತ್ತಿರುವಾಗಲೇ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕಾಂಗ್ರೆಸ್​​ ಮನೆಯಲ್ಲಿ ಕಿಡಿ ಹೊತ್ತಿಸಿದೆ. ಎಲ್ಲವೂ ಕೂಲ್ ಆಯ್ತು ಎನ್ನುವಾಗಲೇ ಮತ್ತೆ ಸಿಎಂ ಪುತ್ರ ಯತೀಂದ್ರ ಪವರ್ ಶೇರಿಂಗ್ ವಿಚಾರವಾಗಿ ಮಾತನಾಡಿದ್ದಾರೆ. ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತಾ ಹೈಕಮಾಂಡ್ ಕೂಡ ಸ್ಪಷ್ಟವಾಗಿ ಹೇಳಿದೆ ಎಂದು ಯತೀಂದ್ರ ಪುನರುಚ್ಛರಿಸಿದ್ದಾರೆ.


ಸಿದ್ದರಾಮಯ್ಯನವರೇ ಪುತ್ರನ ಮೂಲಕ ಈ ರೀತಿ ಹೇಳಿಕೆ ಕೊಡಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಬಣ ಕೆಂಡಾಮಂಡಲವಾಗಿದೆ. ಇದು ತೀವ್ರ ಸ್ವರೂಪಕ್ಕೆ ಹೋಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಪುತ್ರನಿಗೆ ಕರೆದ ರಹಸ್ಯ ಚರ್ಚೆ ನಡೆಸಿದ್ದಾರೆ.


ವಿಧಾನಸಭೆ ಒಳಭಾಗದ ಸಭಾಂಗಣದಲ್ಲಿ ಪ್ರತ್ಯೇಕ ಮಾತುಕತೆ ನಡೆಸಿದ ಸಿದ್ದರಾಮಯ್ಯ ಹಾಗೂ ಯತೀಂದ್ರ, ಬಳಿಕ ಒಂದೇ ಕಾರಿನಲ್ಲಿ ಸರ್ಕ್ಯೂಟ್ ಹೌಸ್ ನತ್ತ ತೆರಳಿ ಮಹತ್ವದ ಮಾತುಕತೆ ಮಾಡಿದ್ದು, ಬಳಿಕ ಒಂದೇ ಕಾರಿನಲ್ಲಿ ಅಧಿವೇಶನಕ್ಕೆ ಆಗಮಿಸಿದ ಪ್ರಸಂಗ ನಡೆಯಿತು.


ಸಿಎಂ ಕುರ್ಚಿ ಬಗ್ಗೆ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿರುವ ಬಗ್ಗೆ ಸಿದ್ದರಾಮಯ್ಯ ಪುತ್ರನೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಸೂಕ್ಷ್ಮ ವಿಚಾರಗಳನ್ನು ಮಾಧ್ಯಮಗಳ ಮುಂದೆ ಮಾತನಾಡಬೇಡ ಎಂದು ಬುದ್ಧಿ ಹೇಳಿದ್ದಾರೆ ಎನ್ನಲಾಗಿದೆ.


ಸಿಎಂ ಪುತ್ರನೊಂದಿಗೆ ಗೌಪ್ಯ ಸಭೆ, ಆಪ್ತರೊಂದಿಗೆ ಡಿಕೆಶಿ ಮೀಟಿಂಗ್-
ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಬಣದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಪುತ್ರನೊಂದಿಗೆ ಗೌಪ್ಯ ಮಾತುಕತೆ ನಡೆಸಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್ ಸಹ ತಮ್ಮ ಬಣದ ನಾಯಕರ ಜೊತೆ ರಹಸ್ಯ ಸಭೆ ನಡೆಸುವ ಮೂಲಕ ತಂತ್ರ-ಪ್ರತಿ ತಂತ್ರ ಹೆಣೆಯುತ್ತಿದ್ದಾರೆ.
ವಿಧಾನಸಭೆ ಕಲಾಪ ಮುಂದೂಡಿಕೆಯಾದರೂ ಸಹ ಡಿಕೆ ಶಿವಕುಮಾರ್ ಸದನದಲ್ಲೇ ತಮ್ಮ ಆಪ್ತ ಶಾಸಕರ ಜೊತೆ ಸಮಾಲೋಚನೆ ಮಾಡಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ
, ಶಾಸಕರಾದ ರವಿ ಗಣಿಗ, ಶಿವಣ್ಣ, ಶ್ರೀನಿವಾಸ್, ಎನ್.ಎ‌.ಹ್ಯಾರಿಸ್, ರೂಪಾ ಶಶಿಧರ್ ಜೊತೆಗೆ ಡಿಕೆ ಶಿವಕುಮಾರ್ ಮಹತ್ವದ​ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಪಿಚ್ಚರ್ ಅಭಿ ಬಾಕಿ ಹೈ ಕ್ಯಾ?
ಡಿಕೆ ಶಿವಕುಮಾರ್ ಹಾಗೂ ಅವರ ಬಣದ ನಾಯಕರು ಸರ್ಕಾರಕ್ಕೆ ಎರಡುವರೆ ವರ್ಷ ತುಂಬಿದ ಬೆನ್ನಲ್ಲೇ ಸಿಎಂ ಕುರ್ಚಿಗಾಗಿ ಎದ್ದು ನಿಂತಿದ್ದು, ಸಿಎಂ ಸ್ಥಾನ ಬೇಕೇ ಬೇಕು ಎಂದು ಡಿಕೆಶಿ ಪಟ್ಟು ಹಿಡಿದಿದ್ದರು. ಮತ್ತೊಂದೆಡೆ ಸಿಎಂ ಬಣ ಸಹ ಅಲರ್ಟ್​ ಆಗಿದ್ದು, ರಹಸ್ಯ ಸಭೆಗಳ ಮೇಲೆ ಸಭೆ ನಡೆಸಿತ್ತು.


ಈ ನಡುವೆ ಒಕ್ಕಲಿಗ, ಕುರುಬ ಸಮುದಾಯಗಳು ಸಹ ಪ್ರವೇಶ ಮಾಡಿದ್ದು, ತಮ್ಮ ತಮ್ಮ ನಾಯಕರ ಪರ ಬ್ಯಾಟಿಂಗ್ ಮಾಡಿದ್ದವು. ಅಲ್ಲದೇ ಪ್ರಮುಖವಾಗಿ ಸಿದ್ದರಾಮಯ್ಯನವರ ಶಕ್ತಿಯಾಗಿರುವ ಅಹಿಂದ ಸಂಘಟನೆ ಸಹ ಆ್ಯಕ್ಟೀಟ್ ಆಗಿದ್ದು, ಒಂದು ವೇಳೆ ಸಿಎಂ ಬದಲಾವಣೆ ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎನ್ನುವ ಸಂದೇಶ ರವಾನಿಸಿತ್ತು.
ಹೀಗೆ ಕಾಂಗ್ರೆಸ್​​ನಲ್ಲಿನ ಬೆಳವಣಿಗೆಗಳು ಬೇರೆ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಹೈಕಮಾಂಡ್
, ಸಿದ್ದರಾಮಯ್ಯ, ಡಿಕೆ ಶಿವಕುಮಾರ್​​​ಗೆ ಕರೆ ಮಾಡಿ ಇಬ್ಬರು ಕುಳಿತುಕೊಂಡು ಗೊಂದಲ ಬಗೆಹರಿಸಿಕೊಳ್ಳಿ ಎಂದು ಖಡಕ್ ಸೂಚನೆ ನೀಡಿತ್ತು.


ಹೀಗಾಗಿ ಇಬ್ಬರು ಪರಸ್ಪರ ಬ್ರೇಕ್ ಫಾಸ್ಟ್​​ ಮೀಟಿಂಗ್ ಮಾಡುವುದರೊಂದಿಗೆ ಒಟ್ಟಾಗಿದ್ದೇವೆ ಎನ್ನುವ ಸಂದೇಶ ರವಾನಿಸಿದರು. ಆದ್ರೆ, ಮೇಲ್ನೋಟಕ್ಕೆ ಕುರ್ಚಿ ಕದನ ಇಲ್ಲಿಗೆ ಶಾಂತವಾಯ್ತು ಎನ್ನಲಾಗಿತ್ತು. ಅಸಲಿ ಆಟ ಬೆಳಗಾವಿ ಅಧಿವೇಶನದ ಮುಗಿದ ಬಳಕ ಶುರುವಾಗಲಿದೆ ಎನ್ನುವ ಮಾತುಗಳು ರಾಜ್ಯ ರಾಜಕಾರಣದಲ್ಲಿ ಕೇಳಿಬಂದಿದ್ದವು. ಅದರಂತೆ ಇನ್ನೂ ಅಧಿವೇಶನ ಮುಗಿದಿಲ್ಲ ಆಗಲೇ ರಾಜಕೀಯ ಬೆಳವಣಿಗೆಗಳು ಗರಿಗೆದರಿದ್ದು, ಅಸಲಿ ಆಟ ಈಗ ಶುರುವಾಗಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.


ಕಾಂಗ್ರೆಸ್​​ ನಲ್ಲಿ ರಾಜಕೀಯ ವಿದ್ಯಮಾನಗಳು ರಾಜ್ಯ ರಾಜಕಾರಣದಲ್ಲಿ ಸಂಚಲನ ಮುಡಿಸಿದ್ದು, ಮುಂದೆ ಇದು ಯಾವ ಹಂತಕ್ಕೆ ಹೋಗಲಿದೆ ಎನ್ನುವುದು ಕಾದುನೋಡಬೇಕಿ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ