Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಫಿ ಘಮಲಿನ ಕಲರವ 7 ಬೀನ್ ಟೀಮ್ ವೆಬ್‌ಸೈಟ್ ಅನಾವರಣ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಅರಮನೆ ಆವರಣದಲ್ಲಿ ನಡೆಯುತ್ತಿರುವ ಮೂರು ದಿನಗಳ ಅಂತಾರಾಷ್ಟ್ರೀಯ ಕಾಫಿ ಮೇಳದಲ್ಲಿ 7 ಬೀನ್ ಟೀಮ್ ಅಭಿವೃದ್ಧಿಪಡಿಸಿರುವ ವೆಬ್‌ಸೈಟ್‌ನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅನಾವರಣ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬ್ರೆಜಿಲ್ ಮತ್ತು ವಿಯೆಟ್ನಾಂಗಿಂತಲೂ ನಮ್ಮ ರಾಜ್ಯದ ಮಲೆನಾಡಿನ ಕಾಫಿ ಸೊಗಡು ಬೇರೆಯೇ ಇದೆ. ಇದನ್ನು ಸರಿಯಾದ ರೀತಿಯಲ್ಲಿ ಮಾರುಕಟ್ಟೆ ಮಾಡುವ ವ್ಯವಸ್ಥೆ ಸಂಘಟಿತವಾಗಿ ನಡೆಯಬೇಕಾಗಿದೆ ಎಂದರು.

ಕಾಫಿ ಕೃಷಿ ಮತ್ತು ಅದರ ಇಳುವರಿ ಉತ್ತಮಪಡಿಸುವ ನಿಟ್ಟಿನಲ್ಲಿ 7ಬೀನ್ ಟೀಮ್ ಮಾಡುತ್ತಿರುವ ಪ್ರಯತ್ನ ಶ್ಲಾಘನೀಯ. ಪ್ರಗತಿದಾಯಕ ಚಟುವಟಿಕೆಗಳ ಕಡೆಗೆ ಎಲ್ಲಾ ಬೆಳೆಗಾರರು ಗಮನ ನೀಡಿದರೆ ಗುರಿ ಸಾಧನೆ ಮಾಡಲು ಸಾಧ್ಯವಿದೆ ಎಂದರು.

ಪ್ರತಿ ವರ್ಷವೂ ಕಾಫಿ ಮೇಳವನ್ನು ನಡೆಸುವ ಮೂಲಕ ಕಾಫಿಯ ವಿಭಿನ್ನ ಬಳಕೆಯ ಬಗ್ಗೆ ಮತ್ತು ಉಪಕರಣಗಳ ಬಳಕೆಯ ಬಗ್ಗೆ ಮಾಹಿತಿ ಜ್ಞಾನವನ್ನು ನೀಡುವಂತಾದರೆ, ಅದು ಮಾರುಕಟ್ಟೆ ವ್ಯಾಪ್ತಿಯನ್ನು ವಿಸ್ತಾರ ಮಾಡಲು ಸಾಧ್ಯವಾಗುತ್ತದೆ. ಕಾಫಿ ಬಳಕೆದಾರರ ಸಮೂಹವೂ ವೃದ್ಧಿಯಾಗಲಿದೆ ಎಂದು ತಗಡೂರು ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಡಾ.ಎನ್.ಕೆ.ಪ್ರದೀಪ್, ಮಣ್ಣು ಪರೀಕ್ಷೆಯಿಂದ ಹಿಡಿದು, ಹಲವು ಹಂತದ ತರಬೇತಿಯನ್ನು ನೀಡುವ ವ್ಯವಸ್ಥೆ ಮಾಡಲಾಗಿದೆ. ರಾಜ್ಯದಲ್ಲಿ ಸದ್ಯ 3.50 ಲಕ್ಷ ಟನ್ ಇಳುವರಿಯನ್ನು 7 ಲಕ್ಷ ಟನ್‌ಗೆ ಹೆಚ್ಚಳ ಮಾಡಲು ಉದ್ದೇಶಿಸಿ, ನಮ್ಮ ತಂಡ ಕೆಲಸ ಮಾಡುತ್ತಿದೆ ಎಂದರು.



ಇದೇ ಸಂದರ್ಭದಲ್ಲಿ 7ಬೀನ್ ಗೈಡ್ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಐಐಸಿಎ ಛೇರ್ಮನ್ ಡಿ.ಎಂ.ಪೂಣೇಶ್, 7ಬೀನ್ ಟೀಮ್ ಛೇರ್ಮನ್ ಎಚ್.ಎಸ್.ಧರ್ಮರಾಜ್, ಉಪಾಧ್ಯಕ್ಷ ಯು.ಎಂ.ತೀರ್ಥಮಲ್ಲೇಶ್, ಕಾರ್ಯದರ್ಶಿ ಮುರುಳೀಧರ ಬಕ್ಕರವಳ್ಳಿ, ಪದಾಧಿಕಾರಿಗಳಾದ ಸಿ.ಎಸ್.ಮಲ್ಲೇಶ್, ಎಚ್.ಎಂ.ಉದಯ್, ಎನ್.ಬಿ.ಉದಯಕುಮಾರ್, ಕೆ.ಎನ್.ಸುಬ್ರಹ್ಮಣ್ಯ ಮತ್ತಿತರರು ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ