Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗಿ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿಯ ಜನಕ್ರೋಶ ಯಾತ್ರೆ ಹಾಗೂ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ರಾಜ್ಯ ಕಾಂಗ್ರೆಸ್ ನಡೆಸುತ್ತಿರುವ ಹೋರಾಟದಲ್ಲಿ ತಾಲ್ಲೂಕಿನ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ ತಿಳಿಸಿದರು.


   ಪ್ರತಿಭಟನೆಗೆ ಹೊರಡುವ ಮುನ್ನ ನಗರದ ಪ್ರವಾಸಿ ಮಂದಿರ ಮುಂಭಾಗ ಮಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ರಾಜ್ಯ ಸುಳ್ಳುಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುವ ಕೆಲಸ  ಮಾಡುತ್ತಿದೆ ಕೆಲವು ಅನಿವಾರ್ಯತೆಗಳಿಂದಾಗಿ ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿರುವುದನ್ನು ಬೃಹದಾಕಾರವಾಗಿ ಬಿಂಬಿಸಿ ಯಾತ್ರೆ ಹೆಸರಿನಲ್ಲಿ ರಾಜ್ಯದ ಜನತೆಗೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದರು.

ಇಂದು ನಮ್ಮ ತಾಲ್ಲೂಕಿನಿಂದ ರಾಜ್ಯ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುವ ಸಲುವಾಗಿ ಸಾವಿರಾರು ಕಾರ್ಯಕರ್ತರು, ಪಕ್ಷದ ಪದಾಧಿಕಾರಿಗಳು, ಸಾರ್ವಜನಿಕರು ತೆರಳುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪರ ಆಡಳಿತ ಸಹಿಸಲಾಗದ ಬಿಜೆಪಿ ಉನ್ನಾರಕ್ಕೆ ತಕ್ಕ ಉತ್ತರ ನೀಡಲಿದ್ದೇವೆ ಎಂದರು.

ಶ್ರೀ ಕ್ಷೇತ್ರ ಘಾಟಿಸುಬ್ರಮಣ್ಯ ಪ್ರಾಧಿಕಾರದ ಸದಸ್ಯ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡ ರಂಗಪ್ಪ ಮಾತನಾಡಿ ಈ ಹೋರಾಟವು ಕೇವಲ ಪಕ್ಷದ ಹೋರಾಟವಾಗಿ ಉಳಿಯದೆ ರಾಜ್ಯದ ಜನತೆ ಪಾಲ್ಗೊಳ್ಳುವ ಮೂಲಕ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಸರ್ಕಾರ  ಜನಪರವಾಗಿದೆ ಎಂಬುದನ್ನು ಸಾಕ್ಷಿಯಾಗಿಸಿ ಬಿಜೆಪಿಪಕ್ಷದ ಸುಳ್ಳು ಆರೋಪಗಳಿಗೆ ಉತ್ತರವನ್ನು ಪ್ರತಿಭಟನೆಮೂಲಕ ನೀಡಲಾಗುವುದು ಎಂದರು.

ರೇವತಿ ಅನಂತ ರಾಮ್ ಮಾತನಾಡಿ ಇಂದಿನ ಹೋರಾಟಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಮಹಿಳಾ ಶಕ್ತಿ ಹರಿದು ಬರುತ್ತಿದ್ದು, ಬಿಜೆಪಿ ಸುಳ್ಳು ಆರೋಪಗಳನ್ನು ಹಾಗೂ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಪ್ರತಿಭಟನೆ ಮಾಡಲಿದ್ದೇವೆ, ರಾಜ್ಯ ಬಿಜೆಪಿಗೆ ಇದೊಂದು ಪಾಠವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಶ್ರೀ ಘಾಟಿ ದೇವಾಲಯದ ಅಭಿವೃದ್ದಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ  ಲಕ್ಷ್ಮ ನಾಯಕ್  ತಾ,ಕೃಷಿ ಸಮಾಜದ ಅಧ್ಯಕ್ಷ ಮುರಳಿಧರ್  ತೂಬಗೆರೆ ಬ್ಲಾಕ್ ಕಾಂಗ್ರೇಸ್ ಮಹಿಳಾ ಅಧ್ಯಕ್ಷೆ  ಕಾಂತಮ್ಮ   ಪಿ. ಎಲ್. ಡಿ ಬ್ಯಾಂಕ್ ನಿರ್ದೇ ಶಕಿ ಶೋಭಾ ದೊಡ್ಡ ತಿಮ್ಮನ ಹಳ್ಳಿ ಅಶ್ವತ್ಥಪ್ಪ ಚಿಕ್ಕ ಮುದ್ದೇನಹಳ್ಳಿ ನಾರಾಯಣಪ್ಪ, ಹಾಡೋನಹಳ್ಳಿ ಸವಿತಾ ಹಾಗು ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರು ಹೋರಾಟದಲ್ಲಿ ಭಾಗಿಯಾಗಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ